Homeಮುಖಪುಟಕಕ್ಷೆ ತಲುಪಿದ ಇಸ್ರೋದ ಡಾಕಿಂಗ್ ಉಪಗ್ರಹ : ಜನವರಿಯಲ್ಲಿ 100ನೇ ಉಡಾವಣೆ

ಕಕ್ಷೆ ತಲುಪಿದ ಇಸ್ರೋದ ಡಾಕಿಂಗ್ ಉಪಗ್ರಹ : ಜನವರಿಯಲ್ಲಿ 100ನೇ ಉಡಾವಣೆ

- Advertisement -
- Advertisement -

ಬಾಹ್ಯಾಕಾಶದಲ್ಲಿ ಉಪಗ್ರಹಗಳನ್ನು ಜೋಡಿಸುವಂಥ (ಡಾಕಿಂಗ್) ‘ಸ್ಪಾಡೆಕ್ಸ್’ (SpaDEX)
ಯೋಜನೆಗಾಗಿ ಎರಡು ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ60 (PSLV-C60) ರಾಕೆಟ್ ನಿಗದಿತ ಕಕ್ಷೆ ತಲುಪಿದೆ ಎಂದು ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಘೋಷಿಸಿದೆ.

ಪಿಎಸ್‌ಎಲ್‌ವಿ-ಸಿ60 ರಾಕೆಟ್ ತಲಾ 220 ಕೆ.ಜಿ ತೂಕದ ಎರಡು ಸ್ಪಾಡೆಕ್ಸ್ ಉಪಗ್ರಹಗಳು ಮತ್ತು 24 ಪೇಲೋಡ್‌ಗಳನ್ನು ಹೊಂದಿರುವ ಪಿಒಇಎಂ-4 ಅನ್ನು ನಿಗದಿತ ಕಕ್ಷೆಗೆ ಸೇರಿಸಿದೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರು ಮಾಹಿತಿ ನೀಡಿದ್ದಾರೆ.

ಇನ್ನೊಂದು ವಾರದಲ್ಲಿ, ಅಂದರೆ ಜನವರಿ 7ರ ವೇಳೆಗೆ ಡಾಕಿಂಗ್ ಪ್ರಕ್ರಿಯೆ (ಡಾಕಿಂಗ್-ಅನ್‌ಡಾಕಿಂಗ್) ನಡೆಯುವ ನಿರೀಕ್ಷೆಯಿದೆ. ಅದನ್ನು ಬೆಂಗಳೂರಿನ ಇಸ್ರೋ ಕೇಂದ್ರದಿಂದ ನೇರವಾಗಿ ವೀಕ್ಷಿಸಲು ಸಾಧ್ಯವಾಗಲಿದೆ ಎಂದು ಸೋಮನಾಥ್ ಹೇಳಿದ್ದಾರೆ.

ಸೋಮವಾರ (ಡಿ.30) ರಾತ್ರಿ 10 ಗಂಟೆಗೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತಲಾ 220 ಕೆ.ಜಿ ತೂಕದ ಎರಡು ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ60 ರಾಕೆಟ್ ನಭಕ್ಕೆ ಹಾರಿದೆ.

ಈ ಮೂಲಕ ಭಾರತ ಬಾಹ್ಯಾಕಾಶದಲ್ಲಿ ಡಾಕಿಂಗ್ ತಂತ್ರಜ್ಞಾನಕ್ಕಾಗಿ ಯಶಸ್ವಿ ಉಪಗ್ರಹಗಳನ್ನು ಉಡ್ಡಯನ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವೆನಿಸಿಕೊಂಡಿದೆ. ಅಮೆರಿಕ, ರಷ್ಯಾ ಮತ್ತು ಚೀನಾ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.

ಜನವರಿಯಲ್ಲಿ 100ನೇ ಉಡಾವಣೆ 

ಸ್ಪೇಡೆಕ್ಸ್ ಉಪಗ್ರಹಗಳದ್ದು 99ನೇ ಉಡಾವಣೆಯಾಗಿದೆ. ಚಾರಿತ್ರಿಕ 100ನೇ ಉಡಾವಣೆಗೆ ಇಸ್ರೋ ಸಜ್ಜಾಗಿದ್ದು, ಹೊಸ ವರ್ಷದಲ್ಲಿ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಜಿಎಸ್‌ಎಲ್‌ವಿ) ಉಡ್ಡಯನವಾಗಲಿದೆ ಎಂದು ಎಸ್‌.ಸೋಮನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ : ‘ಕೇರಳ ಮಿನಿ ಪಾಕಿಸ್ತಾನ’ ಎಂದ ಮಹಾರಾಷ್ಟ್ರದ ಸಚಿವ : ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...