Homeಚಳವಳಿನೂತನ ಪಠ್ಯ: ರಾಜ್ಯದ ಜಿಲ್ಲೆಗಳ ಮಾಹಿತಿಗೆ ಕತ್ತರಿ, ದೇವೇಗೌಡರ ಭಾವಚಿತ್ರ ಸೇರಿದಂತೆ ಹಲವು ವಿವರಗಳಿಗೆ ಕೋಕ್‌!

ನೂತನ ಪಠ್ಯ: ರಾಜ್ಯದ ಜಿಲ್ಲೆಗಳ ಮಾಹಿತಿಗೆ ಕತ್ತರಿ, ದೇವೇಗೌಡರ ಭಾವಚಿತ್ರ ಸೇರಿದಂತೆ ಹಲವು ವಿವರಗಳಿಗೆ ಕೋಕ್‌!

ಇದು ಪ್ರಾದೇಶಿಕ ವಾದವನ್ನು ಕಿತ್ತುಹಾಕಿ ಒಂದು ದೇಶ- ಒಂದು ಸಂಸ್ಕೃತಿ ಎಂಬ ಸಿದ್ದಾಂತ ಹೇರಲು ನಡೆಸುತ್ತಿರುವ ಯತ್ನವೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಅದ್ವಾನಗಳು ದಿನೇ ದಿನೇ ಹೊರಬರುತ್ತಿವೆ. ಸರ್ಕಾರವೇನೂ ಸಮಿತಿ ವಿಸರ್ಜನೆ ಮಾಡಿ ಕೈ ತೊಳೆದುಕೊಂಡಿದೆ. ಆದರೆ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಲು ತೀವ್ರ ಕಸರತ್ತು ಮಾಡಲಾಗಿದೆ. ಸಮಿತಿಯು ನೂತನ ಪಠ್ಯದ 6 ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕ ಭಾಗ-1 ರಲ್ಲಿದ್ದ ‘ನಮ್ಮ ಕರ್ನಾಟಕ’ ಪಾಠಕ್ಕೇ ಕತ್ತರಿ ಆಡಿಸಿದ್ದು, ಕರ್ನಾಟಕ ಎನ್ನುವ ಪರಿಕಲ್ಪನೆಗೆ ಧಕ್ಕೆ ತರುವ ರೀತಿಯಲ್ಲಿ ತಿದ್ದುಪಡಿ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಹಿಂದೆ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ನಮ್ಮ ಕರ್ನಾಟಕ ಪಠ್ಯದಲ್ಲಿ ಕರ್ನಾಟಕದ ಸಮಸ್ತ 28 ಜಿಲ್ಲೆಗಳ ಬಗ್ಗೆ ಸಂಪೂರ್ಣ ಚಿತ್ರ ಸಹಿತ ಮಾಹಿತಿ ನೀಡಿತ್ತು. ಜಿಲ್ಲೆಗಳು ಯಾವ ಸಂದರ್ಭದಲ್ಲಿ ರಚನೆಯಾದವು? ಪ್ರತಿ ಜಿಲ್ಲೆಗಳ ಸಾಂಸ್ಕೃತಿಕ ಕೊಡುಗೆಯೇನು ಎಂಬುದನ್ನು ಸವಿವರವಾಗಿ ಉಲ್ಲೇಖಿಸಲಾಗಿತ್ತು. ಪ್ರತಿ ಜಿಲ್ಲೆಗಳ ಸಾಧಕರನ್ನು ಚಿತ್ರ ಸಮೇತ ಪರಿಚಯಿಸಲಾಗಿತ್ತು. ಅದನ್ನು ಓದಿದ ಮಕ್ಕಳಿಗೆ ನಮ್ಮ ನಾಡಿನ ಬಗ್ಗೆ ಹೆಮ್ಮೆ ಅನಿಸುತ್ತಿತ್ತು. ನಾಡಿನ ಬಗೆಗಿನ ಪ್ರೀತಿ, ಗೌರವ ಹಿಮ್ಮಡಿಯಾಗುತ್ತಿತ್ತು. ಆದರೆ ರೋಹಿತ್ ಚಕ್ರತೀರ್ಥ ಸಮಿತಿ ಆ ಪಠ್ಯಕ್ಕೆ ಕತ್ತರಿ ಹಾಕಿಬಿಟ್ಟಿದೆ.

ಪಠ್ಯದಲ್ಲಿ ಉಲ್ಲೇಖಿಸಲಾಗಿದ್ದ ಜಿಲ್ಲೆಗಳ ಮಹತ್ವವನ್ನು ಕಿತ್ತು ಹಾಕಲಾಗಿದೆ. ಬದಲಿಗೆ ನಾಲ್ಕು ವಲಯಗಳಾಗಿ ಮಾತ್ರ ವಿಂಗಡಿಸಿ ಅಲ್ಪಸ್ವಲ್ಪ ಮಾಹಿತಿ ಮಾತ್ರ ಉಳಿಸಿಕೊಳ್ಳಲಾಗಿದೆ. ಅಲ್ಲದೆ ಮಂಡ್ಯ ಜಿಲ್ಲೆಯ ಅಸ್ಮಿತೆ ಟಿಪ್ಪು ಸುಲ್ತಾನ್, ಹಾಸನ ಜಿಲ್ಲೆಯಲ್ಲಿ ಹುಟ್ಟಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಎಚ್.ಡಿ ದೇವೇಗೌಡರವರ ಭಾವಚಿತ್ರ ಸೇರಿದಂತೆ ಅಪರೂಪದ, ಮಹತ್ವದ ಭಾವಚಿತ್ರಗಳನ್ನು ಪಠ್ಯದಿಂದ ಕಿತ್ತು ಹಾಕಲಾಗಿದೆ. ಅದರ ವಿವರ ಇಲ್ಲಿದೆ.

ಹಳೆಯ ಪಠ್ಯಪುಸ್ತಕದಲ್ಲಿದ್ದ ವಿವರಗಳು

ನೂತನ ಪಠ್ಯದಲ್ಲಿ ಕೈಬಿಡಲಾಗಿರುವ ಮಾಹಿತಿಗಳು ಮತ್ತು ಭಾವಚಿತ್ರಗಳು

ಬೆಂಗಳೂರು ನಗರ: ಜಿಲ್ಲೆಯ ವಿಧಾನಸೌಧ, ಟಿಪ್ಪು ಅರಮನೆ, ಸೆಂಟ್ ಮೆರೀಸ್ ಚರ್ಚ್, ಜಾಮೀಯ ಮಸೀದಿ ಮಾಹಿತಿ ಮತ್ತು ಫೋಟೊಗಳನ್ನು ಕೈಬಿಡಲಾಗಿದೆ.

ರಾಮನಗರ: ಜಿಲ್ಲೆಯ ಚನ್ನಪಟ್ಟಣ ಗೊಂಬೆಗಳು.

ಚಿಕ್ಕಬಳ್ಳಾಪುರ: ಜಿಲ್ಲೆಯ ಕೈವಾರ ತಾತಯ್ಯ, ಕೈವಾರ ದೇವಾಲಯ, ವಿಧುರಾಶ್ವತ್ಥ ವೀರಸೌಧ, ನಂದಿದುರ್ಗ.

ಕೋಲಾರ: ಜಿಲ್ಲೆಯ ಅಂತರಗಂಗೆ, ಹೈದರಾಲಿ ದರ್ಗಾ.

ತುಮಕೂರು: ಜಿಲ್ಲೆಯ ಮಧುಗಿರಿ ಏಕಶಿಲಾ ಬೆಟ್ಟ, ದೇವರಾಯನ ದುರ್ಗ.

ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ಬೆಟ್ಟ, ಮದಕರಿ‌ ನಾಯಕ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ದಾವಣಗೆರೆ: ಜಿಲ್ಲೆಯ ಶಾಂತಿಸಾಗರ ಕೆರೆ.

ಶಿವಮೊಗ್ಗ: ಜಿಲ್ಲೆಯ ಜೋಗ್ ಜಲಪಾತ, ಕುಪ್ಪಳ್ಳಿ ಕುವೆಂಪು ಮನೆ.

ಮೈಸೂರು: ಜಿಲ್ಲೆಯ ಸಂತ ಫಿಲೊಮಿನ ಚರ್ಚ್, ಜಗನ್ ಮೋಹನ ಪ್ಯಾಲೇಸ್, ಚಾಮುಂಡಿಬೆಟ್ಟ, ಬೈಲಕುಪ್ಪೆ ಬುದ್ಧವಿಹಾರ.

ಚಾಮರಾಜನಗರ: ಜಿಲ್ಲೆಯ ಮಲೈ ಮಹದೇಶ್ವರ ದೇವಾಲಯ, ಬಂಡೀಪುರ.

ಹಾಸನ: ಜಿಲ್ಲೆಯ ಬೇಲೂರು ಚನ್ನಕೇಶವ ದೇವಾಲಯ, ಹಳೇಬೀಡು ಹೊಯ್ಸಳೇಶ್ವರ ದೇವಾಲಯ, ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರು.

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಶಾರದಾಂಬಾ ದೇವಾಲಯ, ಬಾಬಾಬುಡನ್ ಗಿರಿ ದರ್ಗಾ, ಸೇಂಟ್ ಆಂಡ್ರೂಸ್ ಚರ್ಚ್.

ಮಂಡ್ಯ: ಜಿಲ್ಲೆಯ ಕೃಷ್ಣರಾಜಸಾಗರ, ಶ್ರೀರಂಗಪಟ್ಟಣ ದೇವಾಲಯ, ದರಿಯಾ ದೌಲತ್ ಬಾಗ್.

ಕೊಡಗು: ಜಿಲ್ಲೆಯ ವಿರಾಜಪೇಟೆ ಚರ್ಚ್, ತಲಕಾವೇರಿ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ದಕ್ಷಿಣ ಕನ್ನಡ: ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್.

ಉಡುಪಿ‌: ಜಿಲ್ಲೆಯ ಶ್ರೀಕೃಷ್ಣ ದೇವಾಲಯ, ಕಾರ್ಕಳದ ಗೊಮ್ಮಟ, ಸೇಂಟ್ ಲಾರೆನ್ಸ್ ಚರ್ಚ್, ಮಂಗಳೂರು ಬಂದರು.

ಕಲಬುರಗಿ: ಜಿಲ್ಲೆಯ ಖ್ವಾಜಾ ಬಂದೇ ನವಾಜ್

ಬೀದರ್: ಜಿಲ್ಲೆಯ ಬಿದರಿ ಕಲೆ, ಗುರುದ್ವಾರ, ಬೀದರ್ ಕೋಟೆ.

ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರ, ಮಸ್ಕಿ ಅಶೋಕ ಶಿಲಾಶಾಸನ.

ಕೊಪ್ಪಳ: ಜಿಲ್ಲೆಯ ಇಟಗಿ ಮಹಾದೇವ ದೇವಾಲಯ.

ಬಳ್ಳಾರಿ: ಜಿಲ್ಲೆಯ ತೋರಣಗಲ್ಲಿನ‌ ಕಾರ್ಖಾನೆ.

ವಿಜಯನಗರ: ಜಿಲ್ಲೆಯ ಹಂಪಿ, ಕನ್ನಡ ವಿಶ್ವವಿದ್ಯಾಲಯ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ಹಾವೇರಿ: ಜಿಲ್ಲೆಯ ಕನಕದಾಸ, ಸರ್ವಜ್ಞ ಕವಿ.

ಗದಗ: ಜಿಲ್ಲೆಯ ಕುಮಾರವ್ಯಾಸ, ವೀರನಾರಾಯಣ ಗುಡಿ.

ವಿಜಯಪುರ: ಜಿಲ್ಲೆಯ ಗೋಳಗುಮ್ಮಟ, ಕೂಡಲಸಂಗಮ ಐಕ್ಯ ಮಂಟಪ.

ಬಾಗಲಕೋಟೆ: ಜಿಲ್ಲೆಯ ಅಬೂಬಕರ್ ದರ್ಗಾ, ಐಹೊಳೆ ದೇವಾಲಯ.

ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆ.

ಉತ್ತರ ಕನ್ನಡ: ಜಿಲ್ಲೆಯ ಕೈಗಾ ವಿದ್ಯುತ್ ಕೇಂದ್ರ, ಸೀಬರ್ಡ್ ನೌಕಾನೆಲೆ.

ಇದಿಷ್ಟೇ ಅಲ್ಲದೆ ಹಿಂದಿನ ಪಠ್ಯದಲ್ಲಿ ಪ್ರತಿ‌ ಜಿಲ್ಲೆಯ ಪ್ರಸಿದ್ಧ ದೇಗುಲ, ಚರ್ಚ್, ಬಸದಿ, ಮಸೀದಿ, ವಿಹಾರ, ಗುರುದ್ವಾರಗಳ ಬಗ್ಗೆ ಪರಿಚಯವಿತ್ತು. ಪ್ರತಿ ಜಿಲ್ಲೆ ಸ್ಥಾಪನೆಗೊಂಡ ವರ್ಷವಿತ್ತು. ಪ್ರತಿ ಜಿಲ್ಲೆಯ ಪ್ರಸಿದ್ಧ ಆಚರಣೆಗಳಿದ್ದವು. ನದಿಗಳ ಹೆಸರಿತ್ತು, ಅಣೆಕಟ್ಟೆಗಳಿತ್ತು, ಸಾಹಿತಿಗಳ ಹೆಸರಿತ್ತು, ಕಾಡುಗಳ ಹೆಸರಿತ್ತು, ಬೆಳೆಯುವ ಬೆಳೆ, ತಿನ್ನುವ ಆಹಾರ, ಆಳಿದ ರಾಜಮನೆತನ ಇತ್ಯಾದಿ ಇತ್ಯಾದಿಗಳಿತ್ತು. ಇಡೀ ಕರ್ನಾಟಕದ ಚಿತ್ರಣವೇ ಕಣ್ಣ ಮುಂದೆ ಬರುವಂತಿತ್ತು. ಅದೆಲ್ಲವನ್ನು ನೂತನ ಸಮಿತಿ ಕಿತ್ತು ಹಾಕಿದೆ.

ಈ ‘ನಮ್ಮ ಕರ್ನಾಟಕ’ ಪಾಠದ ಜಿಲ್ಲೆಗಳ ವಿಶಿಷ್ಟತೆ ತಿಳಿಸುವ ಈ ಭಾಗಗಳನ್ನು ಏಕೆ ತೆಗೆದು ಹಾಕಲಾಗಿದೆ? ನಮ್ಮ ಜಿಲ್ಲೆಗಳಿಂದ ರಾಜ್ಯ, ರಾಜ್ಯದಿಂದ ದೇಶ ಅಲ್ಲವೇ? ಬರೀ ದೇಶದ ಮಾಹಿತಿ ಇದ್ದು ರಾಜ್ಯಗಳ, ಜಿಲ್ಲೆಗಳ ಮಾಹಿತಿಯನ್ನು ನಮ್ಮ ಮಕ್ಕಳು ತಿಳಿಯಬಾರದೆ? ಇದು ಪ್ರಾದೇಶಿಕ ವಾದವನ್ನು ಕಿತ್ತುಹಾಕಿ ಒಂದು ದೇಶ- ಒಂದು ಸಂಸ್ಕೃತಿ ಎಂಬ ಸಿದ್ದಾಂತ ಹೇರಲು ನಡೆಸುತ್ತಿರುವ ಯತ್ನವೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. India is becoming one more Talibhan type style working.
    Present trend and events happening in our state . It is the sign of Talibhan type of culture.
    For this solution is counter action like Indipendentce movement i.e non cooperation movement to start from public against the Govt.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...