Homeಚಳವಳಿನೂತನ ಪಠ್ಯ: ರಾಜ್ಯದ ಜಿಲ್ಲೆಗಳ ಮಾಹಿತಿಗೆ ಕತ್ತರಿ, ದೇವೇಗೌಡರ ಭಾವಚಿತ್ರ ಸೇರಿದಂತೆ ಹಲವು ವಿವರಗಳಿಗೆ ಕೋಕ್‌!

ನೂತನ ಪಠ್ಯ: ರಾಜ್ಯದ ಜಿಲ್ಲೆಗಳ ಮಾಹಿತಿಗೆ ಕತ್ತರಿ, ದೇವೇಗೌಡರ ಭಾವಚಿತ್ರ ಸೇರಿದಂತೆ ಹಲವು ವಿವರಗಳಿಗೆ ಕೋಕ್‌!

ಇದು ಪ್ರಾದೇಶಿಕ ವಾದವನ್ನು ಕಿತ್ತುಹಾಕಿ ಒಂದು ದೇಶ- ಒಂದು ಸಂಸ್ಕೃತಿ ಎಂಬ ಸಿದ್ದಾಂತ ಹೇರಲು ನಡೆಸುತ್ತಿರುವ ಯತ್ನವೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಅದ್ವಾನಗಳು ದಿನೇ ದಿನೇ ಹೊರಬರುತ್ತಿವೆ. ಸರ್ಕಾರವೇನೂ ಸಮಿತಿ ವಿಸರ್ಜನೆ ಮಾಡಿ ಕೈ ತೊಳೆದುಕೊಂಡಿದೆ. ಆದರೆ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಲು ತೀವ್ರ ಕಸರತ್ತು ಮಾಡಲಾಗಿದೆ. ಸಮಿತಿಯು ನೂತನ ಪಠ್ಯದ 6 ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕ ಭಾಗ-1 ರಲ್ಲಿದ್ದ ‘ನಮ್ಮ ಕರ್ನಾಟಕ’ ಪಾಠಕ್ಕೇ ಕತ್ತರಿ ಆಡಿಸಿದ್ದು, ಕರ್ನಾಟಕ ಎನ್ನುವ ಪರಿಕಲ್ಪನೆಗೆ ಧಕ್ಕೆ ತರುವ ರೀತಿಯಲ್ಲಿ ತಿದ್ದುಪಡಿ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಹಿಂದೆ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ನಮ್ಮ ಕರ್ನಾಟಕ ಪಠ್ಯದಲ್ಲಿ ಕರ್ನಾಟಕದ ಸಮಸ್ತ 28 ಜಿಲ್ಲೆಗಳ ಬಗ್ಗೆ ಸಂಪೂರ್ಣ ಚಿತ್ರ ಸಹಿತ ಮಾಹಿತಿ ನೀಡಿತ್ತು. ಜಿಲ್ಲೆಗಳು ಯಾವ ಸಂದರ್ಭದಲ್ಲಿ ರಚನೆಯಾದವು? ಪ್ರತಿ ಜಿಲ್ಲೆಗಳ ಸಾಂಸ್ಕೃತಿಕ ಕೊಡುಗೆಯೇನು ಎಂಬುದನ್ನು ಸವಿವರವಾಗಿ ಉಲ್ಲೇಖಿಸಲಾಗಿತ್ತು. ಪ್ರತಿ ಜಿಲ್ಲೆಗಳ ಸಾಧಕರನ್ನು ಚಿತ್ರ ಸಮೇತ ಪರಿಚಯಿಸಲಾಗಿತ್ತು. ಅದನ್ನು ಓದಿದ ಮಕ್ಕಳಿಗೆ ನಮ್ಮ ನಾಡಿನ ಬಗ್ಗೆ ಹೆಮ್ಮೆ ಅನಿಸುತ್ತಿತ್ತು. ನಾಡಿನ ಬಗೆಗಿನ ಪ್ರೀತಿ, ಗೌರವ ಹಿಮ್ಮಡಿಯಾಗುತ್ತಿತ್ತು. ಆದರೆ ರೋಹಿತ್ ಚಕ್ರತೀರ್ಥ ಸಮಿತಿ ಆ ಪಠ್ಯಕ್ಕೆ ಕತ್ತರಿ ಹಾಕಿಬಿಟ್ಟಿದೆ.

ಪಠ್ಯದಲ್ಲಿ ಉಲ್ಲೇಖಿಸಲಾಗಿದ್ದ ಜಿಲ್ಲೆಗಳ ಮಹತ್ವವನ್ನು ಕಿತ್ತು ಹಾಕಲಾಗಿದೆ. ಬದಲಿಗೆ ನಾಲ್ಕು ವಲಯಗಳಾಗಿ ಮಾತ್ರ ವಿಂಗಡಿಸಿ ಅಲ್ಪಸ್ವಲ್ಪ ಮಾಹಿತಿ ಮಾತ್ರ ಉಳಿಸಿಕೊಳ್ಳಲಾಗಿದೆ. ಅಲ್ಲದೆ ಮಂಡ್ಯ ಜಿಲ್ಲೆಯ ಅಸ್ಮಿತೆ ಟಿಪ್ಪು ಸುಲ್ತಾನ್, ಹಾಸನ ಜಿಲ್ಲೆಯಲ್ಲಿ ಹುಟ್ಟಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಎಚ್.ಡಿ ದೇವೇಗೌಡರವರ ಭಾವಚಿತ್ರ ಸೇರಿದಂತೆ ಅಪರೂಪದ, ಮಹತ್ವದ ಭಾವಚಿತ್ರಗಳನ್ನು ಪಠ್ಯದಿಂದ ಕಿತ್ತು ಹಾಕಲಾಗಿದೆ. ಅದರ ವಿವರ ಇಲ್ಲಿದೆ.

ಹಳೆಯ ಪಠ್ಯಪುಸ್ತಕದಲ್ಲಿದ್ದ ವಿವರಗಳು

ನೂತನ ಪಠ್ಯದಲ್ಲಿ ಕೈಬಿಡಲಾಗಿರುವ ಮಾಹಿತಿಗಳು ಮತ್ತು ಭಾವಚಿತ್ರಗಳು

ಬೆಂಗಳೂರು ನಗರ: ಜಿಲ್ಲೆಯ ವಿಧಾನಸೌಧ, ಟಿಪ್ಪು ಅರಮನೆ, ಸೆಂಟ್ ಮೆರೀಸ್ ಚರ್ಚ್, ಜಾಮೀಯ ಮಸೀದಿ ಮಾಹಿತಿ ಮತ್ತು ಫೋಟೊಗಳನ್ನು ಕೈಬಿಡಲಾಗಿದೆ.

ರಾಮನಗರ: ಜಿಲ್ಲೆಯ ಚನ್ನಪಟ್ಟಣ ಗೊಂಬೆಗಳು.

ಚಿಕ್ಕಬಳ್ಳಾಪುರ: ಜಿಲ್ಲೆಯ ಕೈವಾರ ತಾತಯ್ಯ, ಕೈವಾರ ದೇವಾಲಯ, ವಿಧುರಾಶ್ವತ್ಥ ವೀರಸೌಧ, ನಂದಿದುರ್ಗ.

ಕೋಲಾರ: ಜಿಲ್ಲೆಯ ಅಂತರಗಂಗೆ, ಹೈದರಾಲಿ ದರ್ಗಾ.

ತುಮಕೂರು: ಜಿಲ್ಲೆಯ ಮಧುಗಿರಿ ಏಕಶಿಲಾ ಬೆಟ್ಟ, ದೇವರಾಯನ ದುರ್ಗ.

ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ಬೆಟ್ಟ, ಮದಕರಿ‌ ನಾಯಕ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ದಾವಣಗೆರೆ: ಜಿಲ್ಲೆಯ ಶಾಂತಿಸಾಗರ ಕೆರೆ.

ಶಿವಮೊಗ್ಗ: ಜಿಲ್ಲೆಯ ಜೋಗ್ ಜಲಪಾತ, ಕುಪ್ಪಳ್ಳಿ ಕುವೆಂಪು ಮನೆ.

ಮೈಸೂರು: ಜಿಲ್ಲೆಯ ಸಂತ ಫಿಲೊಮಿನ ಚರ್ಚ್, ಜಗನ್ ಮೋಹನ ಪ್ಯಾಲೇಸ್, ಚಾಮುಂಡಿಬೆಟ್ಟ, ಬೈಲಕುಪ್ಪೆ ಬುದ್ಧವಿಹಾರ.

ಚಾಮರಾಜನಗರ: ಜಿಲ್ಲೆಯ ಮಲೈ ಮಹದೇಶ್ವರ ದೇವಾಲಯ, ಬಂಡೀಪುರ.

ಹಾಸನ: ಜಿಲ್ಲೆಯ ಬೇಲೂರು ಚನ್ನಕೇಶವ ದೇವಾಲಯ, ಹಳೇಬೀಡು ಹೊಯ್ಸಳೇಶ್ವರ ದೇವಾಲಯ, ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರು.

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಶಾರದಾಂಬಾ ದೇವಾಲಯ, ಬಾಬಾಬುಡನ್ ಗಿರಿ ದರ್ಗಾ, ಸೇಂಟ್ ಆಂಡ್ರೂಸ್ ಚರ್ಚ್.

ಮಂಡ್ಯ: ಜಿಲ್ಲೆಯ ಕೃಷ್ಣರಾಜಸಾಗರ, ಶ್ರೀರಂಗಪಟ್ಟಣ ದೇವಾಲಯ, ದರಿಯಾ ದೌಲತ್ ಬಾಗ್.

ಕೊಡಗು: ಜಿಲ್ಲೆಯ ವಿರಾಜಪೇಟೆ ಚರ್ಚ್, ತಲಕಾವೇರಿ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ದಕ್ಷಿಣ ಕನ್ನಡ: ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್.

ಉಡುಪಿ‌: ಜಿಲ್ಲೆಯ ಶ್ರೀಕೃಷ್ಣ ದೇವಾಲಯ, ಕಾರ್ಕಳದ ಗೊಮ್ಮಟ, ಸೇಂಟ್ ಲಾರೆನ್ಸ್ ಚರ್ಚ್, ಮಂಗಳೂರು ಬಂದರು.

ಕಲಬುರಗಿ: ಜಿಲ್ಲೆಯ ಖ್ವಾಜಾ ಬಂದೇ ನವಾಜ್

ಬೀದರ್: ಜಿಲ್ಲೆಯ ಬಿದರಿ ಕಲೆ, ಗುರುದ್ವಾರ, ಬೀದರ್ ಕೋಟೆ.

ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರ, ಮಸ್ಕಿ ಅಶೋಕ ಶಿಲಾಶಾಸನ.

ಕೊಪ್ಪಳ: ಜಿಲ್ಲೆಯ ಇಟಗಿ ಮಹಾದೇವ ದೇವಾಲಯ.

ಬಳ್ಳಾರಿ: ಜಿಲ್ಲೆಯ ತೋರಣಗಲ್ಲಿನ‌ ಕಾರ್ಖಾನೆ.

ವಿಜಯನಗರ: ಜಿಲ್ಲೆಯ ಹಂಪಿ, ಕನ್ನಡ ವಿಶ್ವವಿದ್ಯಾಲಯ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ಹಾವೇರಿ: ಜಿಲ್ಲೆಯ ಕನಕದಾಸ, ಸರ್ವಜ್ಞ ಕವಿ.

ಗದಗ: ಜಿಲ್ಲೆಯ ಕುಮಾರವ್ಯಾಸ, ವೀರನಾರಾಯಣ ಗುಡಿ.

ವಿಜಯಪುರ: ಜಿಲ್ಲೆಯ ಗೋಳಗುಮ್ಮಟ, ಕೂಡಲಸಂಗಮ ಐಕ್ಯ ಮಂಟಪ.

ಬಾಗಲಕೋಟೆ: ಜಿಲ್ಲೆಯ ಅಬೂಬಕರ್ ದರ್ಗಾ, ಐಹೊಳೆ ದೇವಾಲಯ.

ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆ.

ಉತ್ತರ ಕನ್ನಡ: ಜಿಲ್ಲೆಯ ಕೈಗಾ ವಿದ್ಯುತ್ ಕೇಂದ್ರ, ಸೀಬರ್ಡ್ ನೌಕಾನೆಲೆ.

ಇದಿಷ್ಟೇ ಅಲ್ಲದೆ ಹಿಂದಿನ ಪಠ್ಯದಲ್ಲಿ ಪ್ರತಿ‌ ಜಿಲ್ಲೆಯ ಪ್ರಸಿದ್ಧ ದೇಗುಲ, ಚರ್ಚ್, ಬಸದಿ, ಮಸೀದಿ, ವಿಹಾರ, ಗುರುದ್ವಾರಗಳ ಬಗ್ಗೆ ಪರಿಚಯವಿತ್ತು. ಪ್ರತಿ ಜಿಲ್ಲೆ ಸ್ಥಾಪನೆಗೊಂಡ ವರ್ಷವಿತ್ತು. ಪ್ರತಿ ಜಿಲ್ಲೆಯ ಪ್ರಸಿದ್ಧ ಆಚರಣೆಗಳಿದ್ದವು. ನದಿಗಳ ಹೆಸರಿತ್ತು, ಅಣೆಕಟ್ಟೆಗಳಿತ್ತು, ಸಾಹಿತಿಗಳ ಹೆಸರಿತ್ತು, ಕಾಡುಗಳ ಹೆಸರಿತ್ತು, ಬೆಳೆಯುವ ಬೆಳೆ, ತಿನ್ನುವ ಆಹಾರ, ಆಳಿದ ರಾಜಮನೆತನ ಇತ್ಯಾದಿ ಇತ್ಯಾದಿಗಳಿತ್ತು. ಇಡೀ ಕರ್ನಾಟಕದ ಚಿತ್ರಣವೇ ಕಣ್ಣ ಮುಂದೆ ಬರುವಂತಿತ್ತು. ಅದೆಲ್ಲವನ್ನು ನೂತನ ಸಮಿತಿ ಕಿತ್ತು ಹಾಕಿದೆ.

ಈ ‘ನಮ್ಮ ಕರ್ನಾಟಕ’ ಪಾಠದ ಜಿಲ್ಲೆಗಳ ವಿಶಿಷ್ಟತೆ ತಿಳಿಸುವ ಈ ಭಾಗಗಳನ್ನು ಏಕೆ ತೆಗೆದು ಹಾಕಲಾಗಿದೆ? ನಮ್ಮ ಜಿಲ್ಲೆಗಳಿಂದ ರಾಜ್ಯ, ರಾಜ್ಯದಿಂದ ದೇಶ ಅಲ್ಲವೇ? ಬರೀ ದೇಶದ ಮಾಹಿತಿ ಇದ್ದು ರಾಜ್ಯಗಳ, ಜಿಲ್ಲೆಗಳ ಮಾಹಿತಿಯನ್ನು ನಮ್ಮ ಮಕ್ಕಳು ತಿಳಿಯಬಾರದೆ? ಇದು ಪ್ರಾದೇಶಿಕ ವಾದವನ್ನು ಕಿತ್ತುಹಾಕಿ ಒಂದು ದೇಶ- ಒಂದು ಸಂಸ್ಕೃತಿ ಎಂಬ ಸಿದ್ದಾಂತ ಹೇರಲು ನಡೆಸುತ್ತಿರುವ ಯತ್ನವೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. India is becoming one more Talibhan type style working.
    Present trend and events happening in our state . It is the sign of Talibhan type of culture.
    For this solution is counter action like Indipendentce movement i.e non cooperation movement to start from public against the Govt.

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...