HomeಮುಖಪುಟCAA: ಕಾನೂನು ಸವಾಲು ಏನಾಯ್ತು?

CAA: ಕಾನೂನು ಸವಾಲು ಏನಾಯ್ತು?

- Advertisement -
- Advertisement -

ಸಂಸತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019ನ್ನು ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ, ನಿನ್ನೆ ದೇಶದಲ್ಲಿ ಸಿಎಎ ಜಾರಿಗೊಳಿಸಿ ಕೇಂದ್ರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. 2019-20ರಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಸಿಎಎಗೆ ಕಾನೂನಿನ ಮೂಲಕ ಸವಾಲನ್ನು ಹಾಕಿ 200ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಜೀವಂತವಾಗಿರುವಾಗ ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಎಯನ್ನು ತುರ್ತಾಗಿ ಜಾರಿಗೆ ತರಲಾಗಿದೆ.

ಪೌರತ್ವ (ತಿದ್ದುಪಡಿ) ಕಾಯಿದೆ-2019

ಡಿಸೆಂಬರ್ 31, 2014ರ ಮೊದಲು ಪಾಕಿಸ್ತಾನ, ಅಫ್ಘಾನಿಸ್ತಾನ ಅಥವಾ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿದ ಮುಸ್ಲಿಮರನ್ನು ಹೊರತುಪಡಿಸಿ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡುವ ನಿಬಂಧನೆಯನ್ನು ಸೇರಿಸಲು ಡಿಸೆಂಬರ್ 2019 ರಲ್ಲಿ ಸಂಸತ್ತು ಪೌರತ್ವ ಕಾಯ್ದೆ-1955ಕ್ಕೆ ತಿದ್ದುಪಡಿಗೆ ಬಿಲ್‌ನ್ನು ಅಂಗೀಕರಿಸಿತ್ತು.

ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

ಈ ಕಾಯ್ದೆ ವಿರುದ್ಧ 2020ರಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆದಿದೆ. ವಿಶೇಷವಾಗಿ ಅಸ್ಸಾಂನಲ್ಲಿ ಪ್ರತಿಭಟನೆ ನಡೆದಿದೆ. ಆ ಬಳಿಕ ಸರಕಾರ ಕಾಯ್ದೆಯ ಜಾರಿಯಿಂದ ಹಿಂದಕ್ಕೆ ಸರಿದಿತ್ತು. ಮೇ 28, 2021 ರಂದು, ಕೇಂದ್ರ ಸರ್ಕಾರವು ಪೌರತ್ವ ಕಾಯ್ದೆ-1955ರ ಸೆಕ್ಷನ್  16ರ ಅಡಿಯಲ್ಲಿ ಆದೇಶವನ್ನು ಹೊರಡಿಸಿ, ಹೆಚ್ಚಿನ ವಲಸಿಗರನ್ನು ಹೊಂದಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 2019ರ ತಿದ್ದುಪಡಿಯಲ್ಲಿ ಗುರುತಿಸಲಾದ ಗುಂಪುಗಳಿಂದ ಪೌರತ್ವ ಅರ್ಜಿಗಳನ್ನು ಸ್ವೀಕರಿಸುವ ಅಧಿಕಾರವನ್ನು ನೀಡಿದೆ.

ಸೋಮವಾರ ಇ-ಗೆಜೆಟ್‌ನಲ್ಲಿ ಸೂಚಿಸಲಾದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ನಿಯಮಗಳು ಅರ್ಹ ವ್ಯಕ್ತಿಗಳಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವ ವಿಧಾನಗಳು ಮತ್ತು ಕಾರ್ಯವಿಧಾನಗಳನ್ನು ಸೂಚಿಸುತ್ತವೆ. ಪೌರತ್ವವನ್ನು ಪಡೆಯಲು ಯಾವ ದಾಖಲೆಗಳು ಮತ್ತು ದಾಖಲೆಗಳು ಅಗತ್ಯವಿದೆ ಎಂಬುದನ್ನು ನಿಯಮಗಳು ಸ್ಪಷ್ಟಪಡಿಸುತ್ತದೆ. ಗೃಹ ವ್ಯವಹಾರಗಳ ಸಚಿವಾಲಯ (MHA) ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ವ್ಯಕ್ತಿಗಳಿಗಾಗಿ ವೆಬ್ ಪೋರ್ಟಲ್ (https://indiancitizenshiponline.nic.in) ನ್ನು ಪ್ರಾರಂಭಿಸಿದೆ. ಪೋರ್ಟಲ್ ಮೂಲಕ ನಿರ್ದಿಷ್ಟವಾಗಿ ಆರು ಅಲ್ಪಸಂಖ್ಯಾತ ಸಮುದಾಯಗಳು -ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕಾನೂನು ಸವಾಲು

ಈ ತಿದ್ದುಪಡಿಯನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 2020ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಸಿಎಎಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 200ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವುಗಳಲ್ಲಿ ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲಾ ಮತ್ತು ಮಹುವಾ ಮೊಯಿತ್ರಾ ಮತ್ತು ರಾಜಕೀಯ ಸಂಘಟನೆಗಳಾದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ಡಿಎಂಕೆ, ಅಸೋಮ್ ಗಣ ಪರಿಷತ್ (ಎಜಿಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಅಸ್ಸಾಂ), ಮುಸ್ಲಿಂ ವಿದ್ಯಾರ್ಥಿಗಳ ಒಕ್ಕೂಟಗಳ (ಅಸ್ಸಾಂ) ಅರ್ಜಿಗಳು ಕೂಡ ಸೇರಿದೆ. ಅಕ್ಟೋಬರ್ 2022ರಲ್ಲಿ ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ಯು ಲಲಿತ್ ಮತ್ತು ನ್ಯಾಯಮೂರ್ತಿಗಳಾದ ರವೀಂದ್ರ ಭಟ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಸಿಜೆಐ ಲಲಿತ್ ಅವರ ನಿವೃತ್ತಿಯ ನಂತರ ಡಿಸೆಂಬರ್ 2022ರಲ್ಲಿ ಅಂತಿಮ ವಿಚಾರಣೆಗಳು ಪ್ರಾರಂಭವಾಗಲಿದೆ ಎಂದು ಆದೇಶವನ್ನು ನೀಡಿತ್ತು. ಆದರೆ, ಅಂದಿನಿಂದ ಈ ಪ್ರಕರಣದ ವಿಚಾರಣೆ ನಡೆದಿಲ್ಲ. ಸುಪ್ರೀಂಕೋರ್ಟ್ ವೆಬ್‌ಸೈಟ್ ಪ್ರಕಾರ, ಪ್ರಸ್ತುತ ಪ್ರಕರಣವನ್ನು ನ್ಯಾಯಮೂರ್ತಿ ಪಂಕಜ್ ಮಿಥಾಲ್ ನೇತೃತ್ವದ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ.

ಸಮಾನತೆಯ ಹಕ್ಕು

ಸಿಎಎಗೆ ವಿರುದ್ಧದ ಅರ್ಜಿಯಲ್ಲಿ ಸಂವಿಧಾನದ 14 ನೇ ವಿಧಿಯನ್ನು ನೂತನ ಪೌರತ್ವ ತಿದ್ದುಪಡಿ ಕಾಯ್ದೆಯು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ. ರಾಜ್ಯವು ಯಾವುದೇ ವ್ಯಕ್ತಿಗೆ ಸಮಾನತೆಯನ್ನು ನಿರಾಕರಿಸುವಂತಿಲ್ಲ, ಭಾರತದ ಕಾನೂನಿನ ಮುಂದೆ ಎಲ್ಲರೂ ಸಮಾನರು, ಧರ್ಮವನ್ನು ಅರ್ಹತೆಯನ್ನಾಗಿ ಬಳಸುವುದು ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ. ಧರ್ಮಾಧರಿತವಾಗಿ ಪೌರತ್ವವನ್ನು ನೀಡುವ ಮೂಲಕ ರಾಜ್ಯವು ಮುಸ್ಲಿಮರ ವಿರುದ್ಧ ತಾರತಮ್ಯವನ್ನು ಮಾಡುತ್ತಿದೆಯೇ ಎಂಬುದನ್ನು ನ್ಯಾಯಾಲಯವು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳು ಮುಸ್ಲಿಮರು ಬಹುಸಂಖ್ಯಾತರಾಗಿರುವ ಇಸ್ಲಾಮಿಕ್ ರಾಷ್ಟ್ರಗಳಾಗಿರುವ ಕಾರಣದಿಂದ ಮುಸ್ಲಿಮರನ್ನು ದೌರ್ಜನ್ಯಕ್ಕೊಳಗಾದ ಅಲ್ಪಸಂಖ್ಯಾತರ ಗುಂಪಿನಿಂದ ಹೊರಗಿಡಲಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ, ಮುಸ್ಲಿಮರನ್ನು ಹೊರಗಿಡಲು ಈ ಮೂರು ದೇಶಗಳನ್ನು ಮಾತ್ರ ಮೂಲಭೂತವಾಗಿ ಆಯ್ಕೆ ಮಾಡಲಾಗಿದೆಯೇ ಎಂಬುವುದಕ್ಕೆ ಉತ್ತರಿಸಿಲ್ಲ. ಏಕೆಂದರೆ ಶ್ರೀಲಂಕಾದಲ್ಲಿ ತಮಿಳು ಹಿಂದೂಗಳು, ಮ್ಯಾನ್ಮಾರ್‌ನ ರೋಹಿಂಗ್ಯಾಗಳು ಅಥವಾ ಅಲ್ಪಸಂಖ್ಯಾತ ಮುಸ್ಲಿಂ ಪಂಗಡಗಳಾದ ಅಹ್ಮದೀಯಸ್ ಮತ್ತು ಹಜಾರಾಗಳು ಸಹ ಈ ದೇಶಗಳಲ್ಲಿ ಕಿರುಕುಳಕ್ಕೊಳಗಾಗುತ್ತಿದ್ದಾರೆ ಆದರೆ ಅವರನ್ನು ಪೌರತ್ವಕ್ಕೆ ಸೇರ್ಪಡೆಗೊಳಿಸಲಾಗಿಲ್ಲ.

ಇದನ್ನು ಓದಿ: ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...