HomeಮುಖಪುಟCAA: ಕಾನೂನು ಸವಾಲು ಏನಾಯ್ತು?

CAA: ಕಾನೂನು ಸವಾಲು ಏನಾಯ್ತು?

- Advertisement -
- Advertisement -

ಸಂಸತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019ನ್ನು ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ, ನಿನ್ನೆ ದೇಶದಲ್ಲಿ ಸಿಎಎ ಜಾರಿಗೊಳಿಸಿ ಕೇಂದ್ರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. 2019-20ರಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಸಿಎಎಗೆ ಕಾನೂನಿನ ಮೂಲಕ ಸವಾಲನ್ನು ಹಾಕಿ 200ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಜೀವಂತವಾಗಿರುವಾಗ ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಎಯನ್ನು ತುರ್ತಾಗಿ ಜಾರಿಗೆ ತರಲಾಗಿದೆ.

ಪೌರತ್ವ (ತಿದ್ದುಪಡಿ) ಕಾಯಿದೆ-2019

ಡಿಸೆಂಬರ್ 31, 2014ರ ಮೊದಲು ಪಾಕಿಸ್ತಾನ, ಅಫ್ಘಾನಿಸ್ತಾನ ಅಥವಾ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿದ ಮುಸ್ಲಿಮರನ್ನು ಹೊರತುಪಡಿಸಿ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡುವ ನಿಬಂಧನೆಯನ್ನು ಸೇರಿಸಲು ಡಿಸೆಂಬರ್ 2019 ರಲ್ಲಿ ಸಂಸತ್ತು ಪೌರತ್ವ ಕಾಯ್ದೆ-1955ಕ್ಕೆ ತಿದ್ದುಪಡಿಗೆ ಬಿಲ್‌ನ್ನು ಅಂಗೀಕರಿಸಿತ್ತು.

ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

ಈ ಕಾಯ್ದೆ ವಿರುದ್ಧ 2020ರಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆದಿದೆ. ವಿಶೇಷವಾಗಿ ಅಸ್ಸಾಂನಲ್ಲಿ ಪ್ರತಿಭಟನೆ ನಡೆದಿದೆ. ಆ ಬಳಿಕ ಸರಕಾರ ಕಾಯ್ದೆಯ ಜಾರಿಯಿಂದ ಹಿಂದಕ್ಕೆ ಸರಿದಿತ್ತು. ಮೇ 28, 2021 ರಂದು, ಕೇಂದ್ರ ಸರ್ಕಾರವು ಪೌರತ್ವ ಕಾಯ್ದೆ-1955ರ ಸೆಕ್ಷನ್  16ರ ಅಡಿಯಲ್ಲಿ ಆದೇಶವನ್ನು ಹೊರಡಿಸಿ, ಹೆಚ್ಚಿನ ವಲಸಿಗರನ್ನು ಹೊಂದಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 2019ರ ತಿದ್ದುಪಡಿಯಲ್ಲಿ ಗುರುತಿಸಲಾದ ಗುಂಪುಗಳಿಂದ ಪೌರತ್ವ ಅರ್ಜಿಗಳನ್ನು ಸ್ವೀಕರಿಸುವ ಅಧಿಕಾರವನ್ನು ನೀಡಿದೆ.

ಸೋಮವಾರ ಇ-ಗೆಜೆಟ್‌ನಲ್ಲಿ ಸೂಚಿಸಲಾದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ನಿಯಮಗಳು ಅರ್ಹ ವ್ಯಕ್ತಿಗಳಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವ ವಿಧಾನಗಳು ಮತ್ತು ಕಾರ್ಯವಿಧಾನಗಳನ್ನು ಸೂಚಿಸುತ್ತವೆ. ಪೌರತ್ವವನ್ನು ಪಡೆಯಲು ಯಾವ ದಾಖಲೆಗಳು ಮತ್ತು ದಾಖಲೆಗಳು ಅಗತ್ಯವಿದೆ ಎಂಬುದನ್ನು ನಿಯಮಗಳು ಸ್ಪಷ್ಟಪಡಿಸುತ್ತದೆ. ಗೃಹ ವ್ಯವಹಾರಗಳ ಸಚಿವಾಲಯ (MHA) ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ವ್ಯಕ್ತಿಗಳಿಗಾಗಿ ವೆಬ್ ಪೋರ್ಟಲ್ (https://indiancitizenshiponline.nic.in) ನ್ನು ಪ್ರಾರಂಭಿಸಿದೆ. ಪೋರ್ಟಲ್ ಮೂಲಕ ನಿರ್ದಿಷ್ಟವಾಗಿ ಆರು ಅಲ್ಪಸಂಖ್ಯಾತ ಸಮುದಾಯಗಳು -ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕಾನೂನು ಸವಾಲು

ಈ ತಿದ್ದುಪಡಿಯನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 2020ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಸಿಎಎಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 200ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವುಗಳಲ್ಲಿ ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲಾ ಮತ್ತು ಮಹುವಾ ಮೊಯಿತ್ರಾ ಮತ್ತು ರಾಜಕೀಯ ಸಂಘಟನೆಗಳಾದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ಡಿಎಂಕೆ, ಅಸೋಮ್ ಗಣ ಪರಿಷತ್ (ಎಜಿಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಅಸ್ಸಾಂ), ಮುಸ್ಲಿಂ ವಿದ್ಯಾರ್ಥಿಗಳ ಒಕ್ಕೂಟಗಳ (ಅಸ್ಸಾಂ) ಅರ್ಜಿಗಳು ಕೂಡ ಸೇರಿದೆ. ಅಕ್ಟೋಬರ್ 2022ರಲ್ಲಿ ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ಯು ಲಲಿತ್ ಮತ್ತು ನ್ಯಾಯಮೂರ್ತಿಗಳಾದ ರವೀಂದ್ರ ಭಟ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಸಿಜೆಐ ಲಲಿತ್ ಅವರ ನಿವೃತ್ತಿಯ ನಂತರ ಡಿಸೆಂಬರ್ 2022ರಲ್ಲಿ ಅಂತಿಮ ವಿಚಾರಣೆಗಳು ಪ್ರಾರಂಭವಾಗಲಿದೆ ಎಂದು ಆದೇಶವನ್ನು ನೀಡಿತ್ತು. ಆದರೆ, ಅಂದಿನಿಂದ ಈ ಪ್ರಕರಣದ ವಿಚಾರಣೆ ನಡೆದಿಲ್ಲ. ಸುಪ್ರೀಂಕೋರ್ಟ್ ವೆಬ್‌ಸೈಟ್ ಪ್ರಕಾರ, ಪ್ರಸ್ತುತ ಪ್ರಕರಣವನ್ನು ನ್ಯಾಯಮೂರ್ತಿ ಪಂಕಜ್ ಮಿಥಾಲ್ ನೇತೃತ್ವದ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ.

ಸಮಾನತೆಯ ಹಕ್ಕು

ಸಿಎಎಗೆ ವಿರುದ್ಧದ ಅರ್ಜಿಯಲ್ಲಿ ಸಂವಿಧಾನದ 14 ನೇ ವಿಧಿಯನ್ನು ನೂತನ ಪೌರತ್ವ ತಿದ್ದುಪಡಿ ಕಾಯ್ದೆಯು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ. ರಾಜ್ಯವು ಯಾವುದೇ ವ್ಯಕ್ತಿಗೆ ಸಮಾನತೆಯನ್ನು ನಿರಾಕರಿಸುವಂತಿಲ್ಲ, ಭಾರತದ ಕಾನೂನಿನ ಮುಂದೆ ಎಲ್ಲರೂ ಸಮಾನರು, ಧರ್ಮವನ್ನು ಅರ್ಹತೆಯನ್ನಾಗಿ ಬಳಸುವುದು ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ. ಧರ್ಮಾಧರಿತವಾಗಿ ಪೌರತ್ವವನ್ನು ನೀಡುವ ಮೂಲಕ ರಾಜ್ಯವು ಮುಸ್ಲಿಮರ ವಿರುದ್ಧ ತಾರತಮ್ಯವನ್ನು ಮಾಡುತ್ತಿದೆಯೇ ಎಂಬುದನ್ನು ನ್ಯಾಯಾಲಯವು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳು ಮುಸ್ಲಿಮರು ಬಹುಸಂಖ್ಯಾತರಾಗಿರುವ ಇಸ್ಲಾಮಿಕ್ ರಾಷ್ಟ್ರಗಳಾಗಿರುವ ಕಾರಣದಿಂದ ಮುಸ್ಲಿಮರನ್ನು ದೌರ್ಜನ್ಯಕ್ಕೊಳಗಾದ ಅಲ್ಪಸಂಖ್ಯಾತರ ಗುಂಪಿನಿಂದ ಹೊರಗಿಡಲಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ, ಮುಸ್ಲಿಮರನ್ನು ಹೊರಗಿಡಲು ಈ ಮೂರು ದೇಶಗಳನ್ನು ಮಾತ್ರ ಮೂಲಭೂತವಾಗಿ ಆಯ್ಕೆ ಮಾಡಲಾಗಿದೆಯೇ ಎಂಬುವುದಕ್ಕೆ ಉತ್ತರಿಸಿಲ್ಲ. ಏಕೆಂದರೆ ಶ್ರೀಲಂಕಾದಲ್ಲಿ ತಮಿಳು ಹಿಂದೂಗಳು, ಮ್ಯಾನ್ಮಾರ್‌ನ ರೋಹಿಂಗ್ಯಾಗಳು ಅಥವಾ ಅಲ್ಪಸಂಖ್ಯಾತ ಮುಸ್ಲಿಂ ಪಂಗಡಗಳಾದ ಅಹ್ಮದೀಯಸ್ ಮತ್ತು ಹಜಾರಾಗಳು ಸಹ ಈ ದೇಶಗಳಲ್ಲಿ ಕಿರುಕುಳಕ್ಕೊಳಗಾಗುತ್ತಿದ್ದಾರೆ ಆದರೆ ಅವರನ್ನು ಪೌರತ್ವಕ್ಕೆ ಸೇರ್ಪಡೆಗೊಳಿಸಲಾಗಿಲ್ಲ.

ಇದನ್ನು ಓದಿ: ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...