HomeಮುಖಪುಟCAA: ಕಾನೂನು ಸವಾಲು ಏನಾಯ್ತು?

CAA: ಕಾನೂನು ಸವಾಲು ಏನಾಯ್ತು?

- Advertisement -
- Advertisement -

ಸಂಸತ್ತು ಪೌರತ್ವ (ತಿದ್ದುಪಡಿ) ಕಾಯಿದೆ-2019ನ್ನು ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ, ನಿನ್ನೆ ದೇಶದಲ್ಲಿ ಸಿಎಎ ಜಾರಿಗೊಳಿಸಿ ಕೇಂದ್ರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. 2019-20ರಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಸಿಎಎಗೆ ಕಾನೂನಿನ ಮೂಲಕ ಸವಾಲನ್ನು ಹಾಕಿ 200ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಜೀವಂತವಾಗಿರುವಾಗ ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಎಯನ್ನು ತುರ್ತಾಗಿ ಜಾರಿಗೆ ತರಲಾಗಿದೆ.

ಪೌರತ್ವ (ತಿದ್ದುಪಡಿ) ಕಾಯಿದೆ-2019

ಡಿಸೆಂಬರ್ 31, 2014ರ ಮೊದಲು ಪಾಕಿಸ್ತಾನ, ಅಫ್ಘಾನಿಸ್ತಾನ ಅಥವಾ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿದ ಮುಸ್ಲಿಮರನ್ನು ಹೊರತುಪಡಿಸಿ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡುವ ನಿಬಂಧನೆಯನ್ನು ಸೇರಿಸಲು ಡಿಸೆಂಬರ್ 2019 ರಲ್ಲಿ ಸಂಸತ್ತು ಪೌರತ್ವ ಕಾಯ್ದೆ-1955ಕ್ಕೆ ತಿದ್ದುಪಡಿಗೆ ಬಿಲ್‌ನ್ನು ಅಂಗೀಕರಿಸಿತ್ತು.

ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

ಈ ಕಾಯ್ದೆ ವಿರುದ್ಧ 2020ರಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆದಿದೆ. ವಿಶೇಷವಾಗಿ ಅಸ್ಸಾಂನಲ್ಲಿ ಪ್ರತಿಭಟನೆ ನಡೆದಿದೆ. ಆ ಬಳಿಕ ಸರಕಾರ ಕಾಯ್ದೆಯ ಜಾರಿಯಿಂದ ಹಿಂದಕ್ಕೆ ಸರಿದಿತ್ತು. ಮೇ 28, 2021 ರಂದು, ಕೇಂದ್ರ ಸರ್ಕಾರವು ಪೌರತ್ವ ಕಾಯ್ದೆ-1955ರ ಸೆಕ್ಷನ್  16ರ ಅಡಿಯಲ್ಲಿ ಆದೇಶವನ್ನು ಹೊರಡಿಸಿ, ಹೆಚ್ಚಿನ ವಲಸಿಗರನ್ನು ಹೊಂದಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 2019ರ ತಿದ್ದುಪಡಿಯಲ್ಲಿ ಗುರುತಿಸಲಾದ ಗುಂಪುಗಳಿಂದ ಪೌರತ್ವ ಅರ್ಜಿಗಳನ್ನು ಸ್ವೀಕರಿಸುವ ಅಧಿಕಾರವನ್ನು ನೀಡಿದೆ.

ಸೋಮವಾರ ಇ-ಗೆಜೆಟ್‌ನಲ್ಲಿ ಸೂಚಿಸಲಾದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ನಿಯಮಗಳು ಅರ್ಹ ವ್ಯಕ್ತಿಗಳಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವ ವಿಧಾನಗಳು ಮತ್ತು ಕಾರ್ಯವಿಧಾನಗಳನ್ನು ಸೂಚಿಸುತ್ತವೆ. ಪೌರತ್ವವನ್ನು ಪಡೆಯಲು ಯಾವ ದಾಖಲೆಗಳು ಮತ್ತು ದಾಖಲೆಗಳು ಅಗತ್ಯವಿದೆ ಎಂಬುದನ್ನು ನಿಯಮಗಳು ಸ್ಪಷ್ಟಪಡಿಸುತ್ತದೆ. ಗೃಹ ವ್ಯವಹಾರಗಳ ಸಚಿವಾಲಯ (MHA) ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ವ್ಯಕ್ತಿಗಳಿಗಾಗಿ ವೆಬ್ ಪೋರ್ಟಲ್ (https://indiancitizenshiponline.nic.in) ನ್ನು ಪ್ರಾರಂಭಿಸಿದೆ. ಪೋರ್ಟಲ್ ಮೂಲಕ ನಿರ್ದಿಷ್ಟವಾಗಿ ಆರು ಅಲ್ಪಸಂಖ್ಯಾತ ಸಮುದಾಯಗಳು -ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕಾನೂನು ಸವಾಲು

ಈ ತಿದ್ದುಪಡಿಯನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 2020ರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಸಿಎಎಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 200ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇವುಗಳಲ್ಲಿ ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲಾ ಮತ್ತು ಮಹುವಾ ಮೊಯಿತ್ರಾ ಮತ್ತು ರಾಜಕೀಯ ಸಂಘಟನೆಗಳಾದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ಡಿಎಂಕೆ, ಅಸೋಮ್ ಗಣ ಪರಿಷತ್ (ಎಜಿಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಅಸ್ಸಾಂ), ಮುಸ್ಲಿಂ ವಿದ್ಯಾರ್ಥಿಗಳ ಒಕ್ಕೂಟಗಳ (ಅಸ್ಸಾಂ) ಅರ್ಜಿಗಳು ಕೂಡ ಸೇರಿದೆ. ಅಕ್ಟೋಬರ್ 2022ರಲ್ಲಿ ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ಯು ಲಲಿತ್ ಮತ್ತು ನ್ಯಾಯಮೂರ್ತಿಗಳಾದ ರವೀಂದ್ರ ಭಟ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಸಿಜೆಐ ಲಲಿತ್ ಅವರ ನಿವೃತ್ತಿಯ ನಂತರ ಡಿಸೆಂಬರ್ 2022ರಲ್ಲಿ ಅಂತಿಮ ವಿಚಾರಣೆಗಳು ಪ್ರಾರಂಭವಾಗಲಿದೆ ಎಂದು ಆದೇಶವನ್ನು ನೀಡಿತ್ತು. ಆದರೆ, ಅಂದಿನಿಂದ ಈ ಪ್ರಕರಣದ ವಿಚಾರಣೆ ನಡೆದಿಲ್ಲ. ಸುಪ್ರೀಂಕೋರ್ಟ್ ವೆಬ್‌ಸೈಟ್ ಪ್ರಕಾರ, ಪ್ರಸ್ತುತ ಪ್ರಕರಣವನ್ನು ನ್ಯಾಯಮೂರ್ತಿ ಪಂಕಜ್ ಮಿಥಾಲ್ ನೇತೃತ್ವದ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ.

ಸಮಾನತೆಯ ಹಕ್ಕು

ಸಿಎಎಗೆ ವಿರುದ್ಧದ ಅರ್ಜಿಯಲ್ಲಿ ಸಂವಿಧಾನದ 14 ನೇ ವಿಧಿಯನ್ನು ನೂತನ ಪೌರತ್ವ ತಿದ್ದುಪಡಿ ಕಾಯ್ದೆಯು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ. ರಾಜ್ಯವು ಯಾವುದೇ ವ್ಯಕ್ತಿಗೆ ಸಮಾನತೆಯನ್ನು ನಿರಾಕರಿಸುವಂತಿಲ್ಲ, ಭಾರತದ ಕಾನೂನಿನ ಮುಂದೆ ಎಲ್ಲರೂ ಸಮಾನರು, ಧರ್ಮವನ್ನು ಅರ್ಹತೆಯನ್ನಾಗಿ ಬಳಸುವುದು ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ. ಧರ್ಮಾಧರಿತವಾಗಿ ಪೌರತ್ವವನ್ನು ನೀಡುವ ಮೂಲಕ ರಾಜ್ಯವು ಮುಸ್ಲಿಮರ ವಿರುದ್ಧ ತಾರತಮ್ಯವನ್ನು ಮಾಡುತ್ತಿದೆಯೇ ಎಂಬುದನ್ನು ನ್ಯಾಯಾಲಯವು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳು ಮುಸ್ಲಿಮರು ಬಹುಸಂಖ್ಯಾತರಾಗಿರುವ ಇಸ್ಲಾಮಿಕ್ ರಾಷ್ಟ್ರಗಳಾಗಿರುವ ಕಾರಣದಿಂದ ಮುಸ್ಲಿಮರನ್ನು ದೌರ್ಜನ್ಯಕ್ಕೊಳಗಾದ ಅಲ್ಪಸಂಖ್ಯಾತರ ಗುಂಪಿನಿಂದ ಹೊರಗಿಡಲಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ, ಮುಸ್ಲಿಮರನ್ನು ಹೊರಗಿಡಲು ಈ ಮೂರು ದೇಶಗಳನ್ನು ಮಾತ್ರ ಮೂಲಭೂತವಾಗಿ ಆಯ್ಕೆ ಮಾಡಲಾಗಿದೆಯೇ ಎಂಬುವುದಕ್ಕೆ ಉತ್ತರಿಸಿಲ್ಲ. ಏಕೆಂದರೆ ಶ್ರೀಲಂಕಾದಲ್ಲಿ ತಮಿಳು ಹಿಂದೂಗಳು, ಮ್ಯಾನ್ಮಾರ್‌ನ ರೋಹಿಂಗ್ಯಾಗಳು ಅಥವಾ ಅಲ್ಪಸಂಖ್ಯಾತ ಮುಸ್ಲಿಂ ಪಂಗಡಗಳಾದ ಅಹ್ಮದೀಯಸ್ ಮತ್ತು ಹಜಾರಾಗಳು ಸಹ ಈ ದೇಶಗಳಲ್ಲಿ ಕಿರುಕುಳಕ್ಕೊಳಗಾಗುತ್ತಿದ್ದಾರೆ ಆದರೆ ಅವರನ್ನು ಪೌರತ್ವಕ್ಕೆ ಸೇರ್ಪಡೆಗೊಳಿಸಲಾಗಿಲ್ಲ.

ಇದನ್ನು ಓದಿ: ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...