Homeಚಳವಳಿಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ: ಟ್ವಿಟರ್‌ನಲ್ಲಿ #IStandWithZubair ಟ್ರೆಂಡಿಂಗ್

ಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ: ಟ್ವಿಟರ್‌ನಲ್ಲಿ #IStandWithZubair ಟ್ರೆಂಡಿಂಗ್

"ನಾವು ಜುಬೇರ್ ಪರ ನಿಲ್ಲುತ್ತೇವೆ, ಏಕೆಂದರೆ ಅವರು ಸತ್ಯದ ಜೊತೆ ನಿಂತಿದ್ದಾರೆ" ಎಂಬುದಾಗಿ ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಬರೆದಿದ್ದಾರೆ.

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ ತಾಣ ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತರಾದ ಮೊಹಮ್ಮದ್ ಜುಬೇರ್‌ ಮೇಲಿನ FIR ರದ್ದುಗೊಳಿಸಲು ಅಹಲಾಬಾದ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೆ ಟ್ವಿಟರ್‌ನಲ್ಲಿ ಅವರ ಪರವಾಗಿ ಟ್ವೀಟ್‌ಗಳ ಸುರಿಮಳೆಯಾಗಿವೆ. ಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ ಎಂದು ಕರೆದಿರುವ ನೆಟ್ಟಿಗರು ಟ್ವಿಟರ್‌ನಲ್ಲಿ #IStandWithZubair ಹ್ಯಾಸ್‌ಟ್ಯಾಗ್ ಅನ್ನು ರಾಷ್ಟ್ರಮಟ್ಟದಲ್ಲಿ ಟ್ರೆಂಡಿಂಗ್ ಮಾಡಿದ್ದಾರೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿದೆ. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜುಬೇರ್ ಮನವಿಯನ್ನು ವಜಾಗೊಳಿಸಿದೆ.

ಈ ಹಿನ್ನಲೆಯಲ್ಲಿ ಟ್ವಿಟರ್‌ನಲ್ಲಿ ಜುಬೇರ್ ಬೆಂಬಲಿಸಿ ಟ್ವೀಟ್‌ಗಳು ಹರಿದಾಡುತ್ತಿವೆ. ಇದುವರೆಗೂ #IStandWithZubair ಹ್ಯಾಸ್‌ಟ್ಯಾಗ್ ಹೊಂದಿರುವ ಒಂದೂವರೆ ಲಕ್ಷಕ್ಕೂ ಅಧಿಕ ಟ್ವೀಟ್‌ಗಳು ದಾಖಲಾಗಿವೆ. “ನಾವು ಜುಬೇರ್ ಪರ ನಿಲ್ಲುತ್ತೇವೆ, ಏಕೆಂದರೆ ಅವರು ಸತ್ಯದ ಜೊತೆ ನಿಂತಿದ್ದಾರೆ” ಎಂಬುದಾಗಿ ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಬರೆದಿದ್ದಾರೆ.

ಸುಳ್ಳುಗಳು, ತಪ್ಪು ಮಾಹಿತಿಗಳು ಮತ್ತು ಪ್ರೊಪಗಂಡಾಗಳನ್ನು ಬಹಿರಂಗಗೊಳಿಸುವುದು ಅಪರಾಧವಲ್ಲ ಎಂದು ರುಚಾ ಚಿತ್ನಿಸ್ ಬರೆದಿದ್ದಾರೆ.

“ಧೈರ್ಯಕ್ಕೆ ಮತ್ತೊಂದು ಹೆಸರು ಜುಬೇರ್. ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು ದ್ವೇಷಪೂರಿತ ಧರ್ಮಾಂಧರಿಂದ ತುಂಬಿರುವ ಸಮಯದಲ್ಲಿ, ಮೊಹಮ್ಮದ್ ಜುಬೇರ್ ಅವರು ದೇಶದ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ಅವರು ಫ್ಯಾಸಿಸ್ಟರಿಗೆ ಬೆದರಿಕೆಯಾಗಿದ್ದಾರೆ ಏಕೆಂದರೆ ಅವರು ಹಸಿ ಸುಳ್ಳುಗಳನ್ನು ಪ್ರತಿನಿತ್ಯ ಬಹಿರಂಗಪಡಿಸುತ್ತಿದ್ದಾರೆ” ಎಂದು ಪತ್ರಕರ್ತ ಸಿದ್ಧಾರ್ಥ್ ಬರೆದಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರ ವಿರುದ್ಧವೇ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...