Homeಚಳವಳಿಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ: ಟ್ವಿಟರ್‌ನಲ್ಲಿ #IStandWithZubair ಟ್ರೆಂಡಿಂಗ್

ಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ: ಟ್ವಿಟರ್‌ನಲ್ಲಿ #IStandWithZubair ಟ್ರೆಂಡಿಂಗ್

"ನಾವು ಜುಬೇರ್ ಪರ ನಿಲ್ಲುತ್ತೇವೆ, ಏಕೆಂದರೆ ಅವರು ಸತ್ಯದ ಜೊತೆ ನಿಂತಿದ್ದಾರೆ" ಎಂಬುದಾಗಿ ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಬರೆದಿದ್ದಾರೆ.

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ ತಾಣ ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತರಾದ ಮೊಹಮ್ಮದ್ ಜುಬೇರ್‌ ಮೇಲಿನ FIR ರದ್ದುಗೊಳಿಸಲು ಅಹಲಾಬಾದ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೆ ಟ್ವಿಟರ್‌ನಲ್ಲಿ ಅವರ ಪರವಾಗಿ ಟ್ವೀಟ್‌ಗಳ ಸುರಿಮಳೆಯಾಗಿವೆ. ಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ ಎಂದು ಕರೆದಿರುವ ನೆಟ್ಟಿಗರು ಟ್ವಿಟರ್‌ನಲ್ಲಿ #IStandWithZubair ಹ್ಯಾಸ್‌ಟ್ಯಾಗ್ ಅನ್ನು ರಾಷ್ಟ್ರಮಟ್ಟದಲ್ಲಿ ಟ್ರೆಂಡಿಂಗ್ ಮಾಡಿದ್ದಾರೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿದೆ. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜುಬೇರ್ ಮನವಿಯನ್ನು ವಜಾಗೊಳಿಸಿದೆ.

ಈ ಹಿನ್ನಲೆಯಲ್ಲಿ ಟ್ವಿಟರ್‌ನಲ್ಲಿ ಜುಬೇರ್ ಬೆಂಬಲಿಸಿ ಟ್ವೀಟ್‌ಗಳು ಹರಿದಾಡುತ್ತಿವೆ. ಇದುವರೆಗೂ #IStandWithZubair ಹ್ಯಾಸ್‌ಟ್ಯಾಗ್ ಹೊಂದಿರುವ ಒಂದೂವರೆ ಲಕ್ಷಕ್ಕೂ ಅಧಿಕ ಟ್ವೀಟ್‌ಗಳು ದಾಖಲಾಗಿವೆ. “ನಾವು ಜುಬೇರ್ ಪರ ನಿಲ್ಲುತ್ತೇವೆ, ಏಕೆಂದರೆ ಅವರು ಸತ್ಯದ ಜೊತೆ ನಿಂತಿದ್ದಾರೆ” ಎಂಬುದಾಗಿ ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಬರೆದಿದ್ದಾರೆ.

ಸುಳ್ಳುಗಳು, ತಪ್ಪು ಮಾಹಿತಿಗಳು ಮತ್ತು ಪ್ರೊಪಗಂಡಾಗಳನ್ನು ಬಹಿರಂಗಗೊಳಿಸುವುದು ಅಪರಾಧವಲ್ಲ ಎಂದು ರುಚಾ ಚಿತ್ನಿಸ್ ಬರೆದಿದ್ದಾರೆ.

“ಧೈರ್ಯಕ್ಕೆ ಮತ್ತೊಂದು ಹೆಸರು ಜುಬೇರ್. ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು ದ್ವೇಷಪೂರಿತ ಧರ್ಮಾಂಧರಿಂದ ತುಂಬಿರುವ ಸಮಯದಲ್ಲಿ, ಮೊಹಮ್ಮದ್ ಜುಬೇರ್ ಅವರು ದೇಶದ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ಅವರು ಫ್ಯಾಸಿಸ್ಟರಿಗೆ ಬೆದರಿಕೆಯಾಗಿದ್ದಾರೆ ಏಕೆಂದರೆ ಅವರು ಹಸಿ ಸುಳ್ಳುಗಳನ್ನು ಪ್ರತಿನಿತ್ಯ ಬಹಿರಂಗಪಡಿಸುತ್ತಿದ್ದಾರೆ” ಎಂದು ಪತ್ರಕರ್ತ ಸಿದ್ಧಾರ್ಥ್ ಬರೆದಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರ ವಿರುದ್ಧವೇ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...