Homeಚಳವಳಿಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ: ಟ್ವಿಟರ್‌ನಲ್ಲಿ #IStandWithZubair ಟ್ರೆಂಡಿಂಗ್

ಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ: ಟ್ವಿಟರ್‌ನಲ್ಲಿ #IStandWithZubair ಟ್ರೆಂಡಿಂಗ್

"ನಾವು ಜುಬೇರ್ ಪರ ನಿಲ್ಲುತ್ತೇವೆ, ಏಕೆಂದರೆ ಅವರು ಸತ್ಯದ ಜೊತೆ ನಿಂತಿದ್ದಾರೆ" ಎಂಬುದಾಗಿ ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಬರೆದಿದ್ದಾರೆ.

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ ತಾಣ ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತರಾದ ಮೊಹಮ್ಮದ್ ಜುಬೇರ್‌ ಮೇಲಿನ FIR ರದ್ದುಗೊಳಿಸಲು ಅಹಲಾಬಾದ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೆ ಟ್ವಿಟರ್‌ನಲ್ಲಿ ಅವರ ಪರವಾಗಿ ಟ್ವೀಟ್‌ಗಳ ಸುರಿಮಳೆಯಾಗಿವೆ. ಮೊಹಮ್ಮದ್ ಜುಬೇರ್ ನಿಜವಾದ ಪತ್ರಕರ್ತ, ದೇಶಭಕ್ತ ಎಂದು ಕರೆದಿರುವ ನೆಟ್ಟಿಗರು ಟ್ವಿಟರ್‌ನಲ್ಲಿ #IStandWithZubair ಹ್ಯಾಸ್‌ಟ್ಯಾಗ್ ಅನ್ನು ರಾಷ್ಟ್ರಮಟ್ಟದಲ್ಲಿ ಟ್ರೆಂಡಿಂಗ್ ಮಾಡಿದ್ದಾರೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿದೆ. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜುಬೇರ್ ಮನವಿಯನ್ನು ವಜಾಗೊಳಿಸಿದೆ.

ಈ ಹಿನ್ನಲೆಯಲ್ಲಿ ಟ್ವಿಟರ್‌ನಲ್ಲಿ ಜುಬೇರ್ ಬೆಂಬಲಿಸಿ ಟ್ವೀಟ್‌ಗಳು ಹರಿದಾಡುತ್ತಿವೆ. ಇದುವರೆಗೂ #IStandWithZubair ಹ್ಯಾಸ್‌ಟ್ಯಾಗ್ ಹೊಂದಿರುವ ಒಂದೂವರೆ ಲಕ್ಷಕ್ಕೂ ಅಧಿಕ ಟ್ವೀಟ್‌ಗಳು ದಾಖಲಾಗಿವೆ. “ನಾವು ಜುಬೇರ್ ಪರ ನಿಲ್ಲುತ್ತೇವೆ, ಏಕೆಂದರೆ ಅವರು ಸತ್ಯದ ಜೊತೆ ನಿಂತಿದ್ದಾರೆ” ಎಂಬುದಾಗಿ ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಬರೆದಿದ್ದಾರೆ.

ಸುಳ್ಳುಗಳು, ತಪ್ಪು ಮಾಹಿತಿಗಳು ಮತ್ತು ಪ್ರೊಪಗಂಡಾಗಳನ್ನು ಬಹಿರಂಗಗೊಳಿಸುವುದು ಅಪರಾಧವಲ್ಲ ಎಂದು ರುಚಾ ಚಿತ್ನಿಸ್ ಬರೆದಿದ್ದಾರೆ.

“ಧೈರ್ಯಕ್ಕೆ ಮತ್ತೊಂದು ಹೆಸರು ಜುಬೇರ್. ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು ದ್ವೇಷಪೂರಿತ ಧರ್ಮಾಂಧರಿಂದ ತುಂಬಿರುವ ಸಮಯದಲ್ಲಿ, ಮೊಹಮ್ಮದ್ ಜುಬೇರ್ ಅವರು ದೇಶದ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ಅವರು ಫ್ಯಾಸಿಸ್ಟರಿಗೆ ಬೆದರಿಕೆಯಾಗಿದ್ದಾರೆ ಏಕೆಂದರೆ ಅವರು ಹಸಿ ಸುಳ್ಳುಗಳನ್ನು ಪ್ರತಿನಿತ್ಯ ಬಹಿರಂಗಪಡಿಸುತ್ತಿದ್ದಾರೆ” ಎಂದು ಪತ್ರಕರ್ತ ಸಿದ್ಧಾರ್ಥ್ ಬರೆದಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರ ವಿರುದ್ಧವೇ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...