Homeಮುಖಪುಟಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

- Advertisement -
- Advertisement -

ಐಟಿ ಅಧಿಕಾರಿಗಳು, ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದರು. ಈ ದಾಳಿಯನ್ನು ಅಧಿಕಾರಿಗಳು ಸಮೀಕ್ಷೆ ಎಂದು ಹೇಳಿಕೊಂಡಿದ್ದರು. ಮೂರು ದಿನಗಳ ಕಾಲ ಐಟಿ ಅಧಿಕಾರಿಗಳು, ಡಿಜಿಟಲ್ ದಾಖಲೆಗಳು ಮತ್ತು ಫೈಲ್‌ಗಳನ್ನು ಪರಿಶೀಲಿಸುವ ಮೂಲಕ ಆದಾಯ ತೆರಿಗೆ “ಸಮೀಕ್ಷೆ”ಯನ್ನು ಗುರುವಾರ ರಾತ್ರಿ ಕೊನೆಗೊಳಿಸಿದ್ದಾರೆ.

ಬ್ರಿಟನ್‌ನ ಪಬ್ಲಿಕ್ ಬ್ರಾಡ್‌ಕಾಸ್ಟರ್‌ನ ಹಿರಿಯ ಸಂಪಾದಕರು ಸೇರಿದಂತೆ ಸುಮಾರು 10 ಉದ್ಯೋಗಿಗಳು ದೆಹಲಿಯ ಕಚೇರಿಯಲ್ಲಿ ಮೂರು ದಿನಗಳ ಕಾಲ ಕಳೆದು, ಮನೆಗೆ ಮರಳಿದರು. ಆದಾಯ ತೆರಿಗೆ ಇಲಾಖೆ ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ, ಶುಕ್ರವಾರ ಹೇಳಿಕೆ ನೀಡುವ ಸಾಧ್ಯತೆ ಇದೆ.

ತೆರಿಗೆ ಅಧಿಕಾರಿಗಳು, ಬಿಬಿಸಿ ಹಿರಿಯ ಉದ್ಯೋಗಿಗಳ ಮೊಬೈಲ್ ಫೋನ್‌, ಡೆಸ್ಕ್‌ಟಾಪ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

ತೆರಿಗೆ ಅಧಿಕಾರಿಗಳು, “ತೆರಿಗೆ”, “ಕಪ್ಪು ಹಣ” ಮತ್ತು “ಬೇನಾಮಿ”ಯಂತಹ ಕೀವರ್ಡ್‌ಗಳನ್ನು ಬಳಸಿಕೊಂಡು ಮೊಬೈಲ್, ಲ್ಯಾಪ್‌ಟಾಪ್‌, ಡೆಸ್ಕ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ. ಇದು ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಮಾಡುವ ವ್ಯವಹಾರ ಆಗಿರುವುದಿಲ್ಲ, ಒಬ್ಬರ ಕೈಯಿಂದ ಕೈಗೆ ನೀಡಿ ವ್ಯವಹರಿಸುವುದನ್ನು ಸೂಚಿಸುತ್ತದೆ.

ಬಿಬಿಸಿಯ ಪತ್ರಿಕಾ ತಂಡ ಟ್ವೀಟ್ ಮಾಡಿದ್ದು, ”ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ನಮ್ಮ ಕಚೇರಿಗಳನ್ನು ತೊರೆದಿದ್ದಾರೆ. ನಾವು ಮುಂದೆಯೂ ಅಧಿಕಾರಿಗಳೊಂದಿಗೆ ಸಹಕರಿಸುತ್ತೇವೆ ಮತ್ತು  ಸಾಧ್ಯವಾದಷ್ಟು ಬೇಗ ಈ ವಿಷಯಗಳನ್ನು ಪರಿಹರಿಸಲಾಗುವುದು ಎಂದು ಭಾವಿಸುತ್ತೇವೆ. ನಾವು ನಮ್ಮ ಸಿಬ್ಬಂದಿಗಳನ್ನು ಬೆಂಬಲಿಸುತ್ತೇವೆ. ಅವರಲ್ಲಿ ಕೆಲವರು ಸುದೀರ್ಘ ವಿಚಾರಣೆಯನ್ನು ಎದುರಿಸಿದ್ದಾರೆ ಮತ್ತು ರಾತ್ರಿಯಿಡೀ ಕಚೇರಿಯಲ್ಲಿ ಉಳಿದಿದ್ದಾರೆ. ಅವರೊಟ್ಟಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಇದೀಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ಭಾರತ ಮತ್ತು ಅದರಾಚೆಗೆ ನಮ್ಮ ಪ್ರೇಕ್ಷಕರಿಗೆ ಸೇವೆ ಸಲ್ಲಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಸರಣಿ ಪ್ರಸಾರ ಮಾಡಿದ ಕೆಲವೇ ವಾರಗಳಲ್ಲಿ ಐಟಿ ಅಧಿಕಾರಿಗಳು, ಭಾರತದಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿರುವುದನ್ನು ವಿರೋಧ ಪಕ್ಷಗಳು ಟೀಕಿಸಿವೆ.

ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತಾದ ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ ಬಿಜೆಪಿಯು, ಬಿಬಿಸಿ “ವಿಷಪೂರಿತ ವರದಿ” ಬಿತ್ತರಿಸತ್ತದೆ ಎಂದು ಹೇಳಿತ್ತು. ಭಾರತದಲ್ಲಿ ಬಿಬಿಸಿಯನ್ನು ನಿಷೇಧಿಸುವ ಕೋರಿಕೆಯನ್ನು ಸುಪ್ರೀಂ ಕೋರ್ಟ್, “ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದೆ” ಮತ್ತು “ಸಂಪೂರ್ಣವಾಗಿ ಅರ್ಹವಲ್ಲದ” ಕೋರಿಕೆ ಎಂದು ಕಳೆದ ವಾರ ವಜಾಗೊಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...