Homeಮುಖಪುಟಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

- Advertisement -
- Advertisement -

ಐಟಿ ಅಧಿಕಾರಿಗಳು, ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದರು. ಈ ದಾಳಿಯನ್ನು ಅಧಿಕಾರಿಗಳು ಸಮೀಕ್ಷೆ ಎಂದು ಹೇಳಿಕೊಂಡಿದ್ದರು. ಮೂರು ದಿನಗಳ ಕಾಲ ಐಟಿ ಅಧಿಕಾರಿಗಳು, ಡಿಜಿಟಲ್ ದಾಖಲೆಗಳು ಮತ್ತು ಫೈಲ್‌ಗಳನ್ನು ಪರಿಶೀಲಿಸುವ ಮೂಲಕ ಆದಾಯ ತೆರಿಗೆ “ಸಮೀಕ್ಷೆ”ಯನ್ನು ಗುರುವಾರ ರಾತ್ರಿ ಕೊನೆಗೊಳಿಸಿದ್ದಾರೆ.

ಬ್ರಿಟನ್‌ನ ಪಬ್ಲಿಕ್ ಬ್ರಾಡ್‌ಕಾಸ್ಟರ್‌ನ ಹಿರಿಯ ಸಂಪಾದಕರು ಸೇರಿದಂತೆ ಸುಮಾರು 10 ಉದ್ಯೋಗಿಗಳು ದೆಹಲಿಯ ಕಚೇರಿಯಲ್ಲಿ ಮೂರು ದಿನಗಳ ಕಾಲ ಕಳೆದು, ಮನೆಗೆ ಮರಳಿದರು. ಆದಾಯ ತೆರಿಗೆ ಇಲಾಖೆ ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ, ಶುಕ್ರವಾರ ಹೇಳಿಕೆ ನೀಡುವ ಸಾಧ್ಯತೆ ಇದೆ.

ತೆರಿಗೆ ಅಧಿಕಾರಿಗಳು, ಬಿಬಿಸಿ ಹಿರಿಯ ಉದ್ಯೋಗಿಗಳ ಮೊಬೈಲ್ ಫೋನ್‌, ಡೆಸ್ಕ್‌ಟಾಪ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

ತೆರಿಗೆ ಅಧಿಕಾರಿಗಳು, “ತೆರಿಗೆ”, “ಕಪ್ಪು ಹಣ” ಮತ್ತು “ಬೇನಾಮಿ”ಯಂತಹ ಕೀವರ್ಡ್‌ಗಳನ್ನು ಬಳಸಿಕೊಂಡು ಮೊಬೈಲ್, ಲ್ಯಾಪ್‌ಟಾಪ್‌, ಡೆಸ್ಕ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ. ಇದು ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಮಾಡುವ ವ್ಯವಹಾರ ಆಗಿರುವುದಿಲ್ಲ, ಒಬ್ಬರ ಕೈಯಿಂದ ಕೈಗೆ ನೀಡಿ ವ್ಯವಹರಿಸುವುದನ್ನು ಸೂಚಿಸುತ್ತದೆ.

ಬಿಬಿಸಿಯ ಪತ್ರಿಕಾ ತಂಡ ಟ್ವೀಟ್ ಮಾಡಿದ್ದು, ”ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ನಮ್ಮ ಕಚೇರಿಗಳನ್ನು ತೊರೆದಿದ್ದಾರೆ. ನಾವು ಮುಂದೆಯೂ ಅಧಿಕಾರಿಗಳೊಂದಿಗೆ ಸಹಕರಿಸುತ್ತೇವೆ ಮತ್ತು  ಸಾಧ್ಯವಾದಷ್ಟು ಬೇಗ ಈ ವಿಷಯಗಳನ್ನು ಪರಿಹರಿಸಲಾಗುವುದು ಎಂದು ಭಾವಿಸುತ್ತೇವೆ. ನಾವು ನಮ್ಮ ಸಿಬ್ಬಂದಿಗಳನ್ನು ಬೆಂಬಲಿಸುತ್ತೇವೆ. ಅವರಲ್ಲಿ ಕೆಲವರು ಸುದೀರ್ಘ ವಿಚಾರಣೆಯನ್ನು ಎದುರಿಸಿದ್ದಾರೆ ಮತ್ತು ರಾತ್ರಿಯಿಡೀ ಕಚೇರಿಯಲ್ಲಿ ಉಳಿದಿದ್ದಾರೆ. ಅವರೊಟ್ಟಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಇದೀಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ಭಾರತ ಮತ್ತು ಅದರಾಚೆಗೆ ನಮ್ಮ ಪ್ರೇಕ್ಷಕರಿಗೆ ಸೇವೆ ಸಲ್ಲಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಸರಣಿ ಪ್ರಸಾರ ಮಾಡಿದ ಕೆಲವೇ ವಾರಗಳಲ್ಲಿ ಐಟಿ ಅಧಿಕಾರಿಗಳು, ಭಾರತದಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿರುವುದನ್ನು ವಿರೋಧ ಪಕ್ಷಗಳು ಟೀಕಿಸಿವೆ.

ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತಾದ ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ ಬಿಜೆಪಿಯು, ಬಿಬಿಸಿ “ವಿಷಪೂರಿತ ವರದಿ” ಬಿತ್ತರಿಸತ್ತದೆ ಎಂದು ಹೇಳಿತ್ತು. ಭಾರತದಲ್ಲಿ ಬಿಬಿಸಿಯನ್ನು ನಿಷೇಧಿಸುವ ಕೋರಿಕೆಯನ್ನು ಸುಪ್ರೀಂ ಕೋರ್ಟ್, “ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದೆ” ಮತ್ತು “ಸಂಪೂರ್ಣವಾಗಿ ಅರ್ಹವಲ್ಲದ” ಕೋರಿಕೆ ಎಂದು ಕಳೆದ ವಾರ ವಜಾಗೊಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...