Homeಮುಖಪುಟಟಾಲಿವುಡ್‌ನ ವೆಂಕಟೇಶ್, ನಾಗಾರ್ಜುನ್‌ ಕುಟುಂಬದ ಸಂಸ್ಥೆಗಳ ಮೇಲೆ ಐಟಿ ದಾಳಿ, ಶೋಧ

ಟಾಲಿವುಡ್‌ನ ವೆಂಕಟೇಶ್, ನಾಗಾರ್ಜುನ್‌ ಕುಟುಂಬದ ಸಂಸ್ಥೆಗಳ ಮೇಲೆ ಐಟಿ ದಾಳಿ, ಶೋಧ

- Advertisement -
- Advertisement -

ತೆಲುಗು ಸ್ಟಾರ್ ನಟ ವಿಕ್ಟರಿ ವೆಂಕಟೇಶ್, ಸಹೋದರ ನಿರ್ಮಾಪಕ ಸುರೇಶ್ ಬಾಬು, ಮತ್ತೊಬ್ಬ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ್‌ ಅವರ ಮನೆ ಮತ್ತು ಸಂಸ್ಥೆಗಳ ಕಚೇರಿ ಮೇಲೆ ಐಟಿ ತಂಡ ದಿಢೀರ್‌ ದಾಳಿ ನಡೆಸಿದೆ. ಬುಧವಾರ ಬೆಳೆಗ್ಗೆಯಿಂದ ಸಂಜೆಯವರೆಗೆ ಐಟಿ ಶೋಧ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನಟ ನಾನಿ ಹಾಗೂ ಟಿ.ಆರ್.ಎಸ್ ಪಕ್ಷದ ಕೂಕ್ಕಟ್‌ಪಲ್ಲಿ ಶಾಸಕ ಮಾಧವರಂ ಕೃಷ್ಣರಾವು ಮನೆಗಳಲ್ಲಿಯೂ  ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ಬಂಜಾರಾ ಹಿಲ್ಸ್, ಜೂಬ್ಲಿ ಹಿಲ್ಸ್‌ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ. ನಟ ವೆಂಕಟೇಶ್ ಕುಟುಂಬದ ರಾಮನಾಯ್ಡು ಸ್ಡುಡೀಯೋದಲ್ಲಿ ಆದಾಯ ತೆರಿಗೆಯ ಲೇವಾದೇವಿಯನ್ನು ಪರೀಶೀಲಿಸಿದ್ದಾರೆ. ಸುರೇಶ್ ಪ್ರೊಡಕ್ಷನ್ಸ್‌, ದಗ್ಗುಬಾಟಿ ಫಾರಂಹೌಸ್ ಅಂಡ್‌ ಎಸ್ಟೇಟ್‌ ಪ್ರೈವೇಟ್‌ ಲಿ., ರಾಜೇಶ್ವರಿ ಫಾರ್ಮ್ ಹೌಸ್ ಅಂಡ್ ಎಸ್ಟೇಟ್ ಪ್ರೈವೇಟ್‌ ಲಿ., ಸ್ಪಿರಿಟ್ ಮೀಡಿಯಾ ಪ್ರೈವೇಟ್‌ ಲಿ., ಸುರೇಶ್ ಯಾಡ್ಸ್ ಸೇರಿದಂತೆ ಹಲವು ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಾಸಕ ಮಾಧವರಂ ಕೃಷ್ಣರಾವ್ ಅವರಿಗೆ ಸೇರಿರುವ ‘ಪ್ರಣಿತ್ ಹೋಮ್ಸ್ ‘ ಸಂಸ್ಥೆಯ ಲೆಕ್ಕಪತ್ರಗಳನ್ನು ಪರಿಶೀಲನೇ ಮಾಡಿದ್ದಾರೆ.

ಇತ್ತೀಚೆಗೆ ಚೆನ್ನೈನ ಸ್ವಯಂ ಘೋಷಿತ ದೇವಮಾನವ ಕಲ್ಕಿ ಭಗವಾನ್ ಆಶ್ರಮದ ಮೇಲೆಯೂ ಸಹ ದಾಳಿ ನಡೆದಿತ್ತು. ತೆರಿಗೆ ವಂಚನೆಯ ಕುರಿತು ಆಶ್ರಮದ ಆಸ್ತಿಗಳ ಮೇಲಿನ ತನಿಖೆ ಮುಂದುವರೆದಿದೆ. ಈ ತನಿಖೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಕಲ್ಕಿ ಆಶ್ರಮದ ಮೇಲೂ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಕಚೇರಿಯ ಮುಖ್ಯ ದಾಖಲೆಗಳನ್ನು ವಶಪಡಿಸಿಕೊಂಡು ಚೆನ್ನೈಗೆ ತೆಗೆದುಕೊಂಡು ಹೋಗಿದ್ದಾರೆ.

ನಾಗಾರ್ಜುನ್

ತೆಲುಗು ಸಿನೆಮಾ ಬೃಹತ್ ಉದ್ಯಮದಲ್ಲಿ ದೊಡ್ಡ ದೊಡ್ಡ ಸ್ಟಾರ್‌ಗಳು ಇದ್ದಾರೆ. ಹಾಲಿವುಡ್‌ನಷ್ಟೇ ಬಜೆಟ್‌ ಹೂಡಿ, ಸಿನೆಮಾ ತೆಗೆಯುವ ಸಾಮರ್ಥ್ಯವಿರುವ ಸಾಕಷ್ಟು ಸಂಸ್ಥೆಗಳು ಇವೆ. ಆದರೆ ಈ ಬಾರಿ ನಡೆದಿರುವ ಐಟಿ ದಾಳಿ ಕೆಲವೇ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಮಾಡಲಾಗಿದೆ. ಈ ದಾಳಿಯ ಹಿಂದೆ ಸಚಿವರೊಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಆದಾಯ ತೆರಿಗೆ ಅಧಿಕಾರಿಗಳು ಎಲ್ಲಾ ತೆರಿಗೆ ವಂಚಕ ತಿಮಿಂಗಿಲುಗಳನ್ನು ಒಂದೇ ರೀತಿ ನೋಡುತ್ತಿಲ್ಲ. ಆಡಳಿತ ಪಕ್ಷ ಎಲ್ಲರನ್ನೂ ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಐಟಿಯನ್ನು ಬಳಸಿಕೊಳ್ಳುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...