Homeಮುಖಪುಟಟಾಲಿವುಡ್‌ನ ವೆಂಕಟೇಶ್, ನಾಗಾರ್ಜುನ್‌ ಕುಟುಂಬದ ಸಂಸ್ಥೆಗಳ ಮೇಲೆ ಐಟಿ ದಾಳಿ, ಶೋಧ

ಟಾಲಿವುಡ್‌ನ ವೆಂಕಟೇಶ್, ನಾಗಾರ್ಜುನ್‌ ಕುಟುಂಬದ ಸಂಸ್ಥೆಗಳ ಮೇಲೆ ಐಟಿ ದಾಳಿ, ಶೋಧ

- Advertisement -
- Advertisement -

ತೆಲುಗು ಸ್ಟಾರ್ ನಟ ವಿಕ್ಟರಿ ವೆಂಕಟೇಶ್, ಸಹೋದರ ನಿರ್ಮಾಪಕ ಸುರೇಶ್ ಬಾಬು, ಮತ್ತೊಬ್ಬ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ್‌ ಅವರ ಮನೆ ಮತ್ತು ಸಂಸ್ಥೆಗಳ ಕಚೇರಿ ಮೇಲೆ ಐಟಿ ತಂಡ ದಿಢೀರ್‌ ದಾಳಿ ನಡೆಸಿದೆ. ಬುಧವಾರ ಬೆಳೆಗ್ಗೆಯಿಂದ ಸಂಜೆಯವರೆಗೆ ಐಟಿ ಶೋಧ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನಟ ನಾನಿ ಹಾಗೂ ಟಿ.ಆರ್.ಎಸ್ ಪಕ್ಷದ ಕೂಕ್ಕಟ್‌ಪಲ್ಲಿ ಶಾಸಕ ಮಾಧವರಂ ಕೃಷ್ಣರಾವು ಮನೆಗಳಲ್ಲಿಯೂ  ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ಬಂಜಾರಾ ಹಿಲ್ಸ್, ಜೂಬ್ಲಿ ಹಿಲ್ಸ್‌ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ. ನಟ ವೆಂಕಟೇಶ್ ಕುಟುಂಬದ ರಾಮನಾಯ್ಡು ಸ್ಡುಡೀಯೋದಲ್ಲಿ ಆದಾಯ ತೆರಿಗೆಯ ಲೇವಾದೇವಿಯನ್ನು ಪರೀಶೀಲಿಸಿದ್ದಾರೆ. ಸುರೇಶ್ ಪ್ರೊಡಕ್ಷನ್ಸ್‌, ದಗ್ಗುಬಾಟಿ ಫಾರಂಹೌಸ್ ಅಂಡ್‌ ಎಸ್ಟೇಟ್‌ ಪ್ರೈವೇಟ್‌ ಲಿ., ರಾಜೇಶ್ವರಿ ಫಾರ್ಮ್ ಹೌಸ್ ಅಂಡ್ ಎಸ್ಟೇಟ್ ಪ್ರೈವೇಟ್‌ ಲಿ., ಸ್ಪಿರಿಟ್ ಮೀಡಿಯಾ ಪ್ರೈವೇಟ್‌ ಲಿ., ಸುರೇಶ್ ಯಾಡ್ಸ್ ಸೇರಿದಂತೆ ಹಲವು ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಾಸಕ ಮಾಧವರಂ ಕೃಷ್ಣರಾವ್ ಅವರಿಗೆ ಸೇರಿರುವ ‘ಪ್ರಣಿತ್ ಹೋಮ್ಸ್ ‘ ಸಂಸ್ಥೆಯ ಲೆಕ್ಕಪತ್ರಗಳನ್ನು ಪರಿಶೀಲನೇ ಮಾಡಿದ್ದಾರೆ.

ಇತ್ತೀಚೆಗೆ ಚೆನ್ನೈನ ಸ್ವಯಂ ಘೋಷಿತ ದೇವಮಾನವ ಕಲ್ಕಿ ಭಗವಾನ್ ಆಶ್ರಮದ ಮೇಲೆಯೂ ಸಹ ದಾಳಿ ನಡೆದಿತ್ತು. ತೆರಿಗೆ ವಂಚನೆಯ ಕುರಿತು ಆಶ್ರಮದ ಆಸ್ತಿಗಳ ಮೇಲಿನ ತನಿಖೆ ಮುಂದುವರೆದಿದೆ. ಈ ತನಿಖೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ಕಲ್ಕಿ ಆಶ್ರಮದ ಮೇಲೂ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಕಚೇರಿಯ ಮುಖ್ಯ ದಾಖಲೆಗಳನ್ನು ವಶಪಡಿಸಿಕೊಂಡು ಚೆನ್ನೈಗೆ ತೆಗೆದುಕೊಂಡು ಹೋಗಿದ್ದಾರೆ.

ನಾಗಾರ್ಜುನ್

ತೆಲುಗು ಸಿನೆಮಾ ಬೃಹತ್ ಉದ್ಯಮದಲ್ಲಿ ದೊಡ್ಡ ದೊಡ್ಡ ಸ್ಟಾರ್‌ಗಳು ಇದ್ದಾರೆ. ಹಾಲಿವುಡ್‌ನಷ್ಟೇ ಬಜೆಟ್‌ ಹೂಡಿ, ಸಿನೆಮಾ ತೆಗೆಯುವ ಸಾಮರ್ಥ್ಯವಿರುವ ಸಾಕಷ್ಟು ಸಂಸ್ಥೆಗಳು ಇವೆ. ಆದರೆ ಈ ಬಾರಿ ನಡೆದಿರುವ ಐಟಿ ದಾಳಿ ಕೆಲವೇ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಮಾಡಲಾಗಿದೆ. ಈ ದಾಳಿಯ ಹಿಂದೆ ಸಚಿವರೊಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಆದಾಯ ತೆರಿಗೆ ಅಧಿಕಾರಿಗಳು ಎಲ್ಲಾ ತೆರಿಗೆ ವಂಚಕ ತಿಮಿಂಗಿಲುಗಳನ್ನು ಒಂದೇ ರೀತಿ ನೋಡುತ್ತಿಲ್ಲ. ಆಡಳಿತ ಪಕ್ಷ ಎಲ್ಲರನ್ನೂ ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಐಟಿಯನ್ನು ಬಳಸಿಕೊಳ್ಳುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...