Homeಮುಖಪುಟಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ

ಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ

- Advertisement -
- Advertisement -

ಐಟಿ ಸೆಲ್‌ನವರು ಪ್ರತಿಭಟನಾ ನಿರತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಅವರ ಮಾರ್ಫ್ ಮಾಡಿದ ಚಿತ್ರವನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಒಲಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಭಾನುವಾರ ಆರೋಪಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನವದೆಹಲಿಯ ಹೊಸ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಲು ಹೊರಟಿದ್ದ ಭಾರತದ ಹಲವಾರು ಪ್ರಮುಖ ಕುಸ್ತಿಪಟುಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಈ ವೇಳೆ ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಅವರನ್ನು ಪೊಲೀಸ್ ಅಧಿಕಾರಿಗಳು ಬಸ್‌ನಲ್ಲಿ ಎಳೆದೊಯ್ಯುವಾಗ ಅವರು ನಗುತ್ತಿರುವಂತೆ ನಕಲಿ ಫೋಟೋ ಚಿತ್ರಸಿ, ಕುಸ್ತಿಪಟುಗಳು ತಮ್ಮ ಪ್ರತಿಭಟನೆಯ ಬಗ್ಗೆ ಗಂಭೀರವಾಗಿಲ್ಲ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ಪತ್ರಕರ್ತ ಮಂದೀಪ್ ಪುನಿಯಾ ಅವರು ಮೂಲ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಮಾರ್ಫ್ ಮಾಡಲಾದ ಚಿತ್ರ ಹೊರಬರುವ ಮುನ್ನ ತಗೆದ ಫೋಟೊವನ್ನು ತೋರಿಸಿ, ಇದು ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ನಗುತ್ತಿರುವುದನ್ನು ತೋರಿಸುವುದಿಲ್ಲ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪುನಿಯಾ, ”ಐಟಿ ಸೆಲ್‌ನವರು ಈ ನಕಲಿ ಚಿತ್ರವನ್ನು ಹರಡುತ್ತಿದ್ದಾರೆ. ಈ ನಕಲಿ ಚಿತ್ರವನ್ನು ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ನಾವು ಸ್ಪಷ್ಟಪಡಿಸುತ್ತೇವೆ” ಎಂದಿದ್ದಾರೆ.

ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಪಿಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತ ಉಝೈರ್ ರಿಜ್ವಿ ಅವರು ಕುಸ್ತಿಪಟುಗಳ ಮೂಲ ಚಿತ್ರವನ್ನು ಹೇಗೆ ಮಾರ್ಪಡಿಸಲು ಸಾಫ್ಟ್‌ವೇರ್ ಅನ್ನು ಬಳಸಲಾಗಿದೆ ಎಂಬುದನ್ನು ಪ್ರದರ್ಶಿಸಲು ಟ್ವಿಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. FaceApp ಎಂಬ ಸಾಫ್ಟ್‌ವೇರ್, ಬಳಕೆದಾರರಿಗೆ “ಸ್ಮೈಲ್” ಫಿಲ್ಟರ್ ಅನ್ನು ಪ್ರಯತ್ನಿಸಲು ಮತ್ತು ಜನರು ನಗುತ್ತಿರುವಂತೆ ಕಾಣುವಂತೆ ಅವರ ಮುಖಗಳನ್ನು ಮಾರ್ಪಡಿಸುತ್ತದೆ ಎಂಬುದು ಅಲ್ಲಿ ಕಾಣಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸುತ್ತಿದ್ದಂತೆಯೇ ಕುಸ್ತಿಪಟುಗಳು ಅದರತ್ತ ಮೆರವಣಿಗೆ ನಡೆಸಲು ಯತ್ನಿಸಿದರು. ಆದರೆ ನೂರಾರು ಪೊಲೀಸರು ಅವರನ್ನು ತಡೆದರು.

2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಸಾಕ್ಷಿ ಮಲಿಕ್, ಕುಸ್ತಿಪಟುಗಳನ್ನು ಪೊಲೀಸ್ ಅಧಿಕಾರಿಗಳು ಎಳೆದೊಯ್ದ ಫೋಟೋಗಳು ಮತ್ತು ವೀಡಿಯೊವನ್ನು ಹಂಚಿಕೊಂಡಿದ್ದಾರೆ.

”ನಮ್ಮ ಚಾಂಪಿಯನ್‌ಗಳನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ಜಗತ್ತು ನಮ್ಮನ್ನು ನೋಡುತ್ತಿದೆ” ಎಂದು ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದಾರೆ.

ಹಲವಾರು ವಿರೋಧ ಪಕ್ಷದ ನಾಯಕರು ಪೊಲೀಸರ ಕ್ರಮಗಳನ್ನು ಟೀಕಿಸಿದ್ದು, ಇದು ”ಅತ್ಯಂತ ನಾಚಿಕೆಗೇಡಿನ ಮತ್ತು ದುರದೃಷ್ಟಕರ” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ಸ್ ಪದಕ ವಿಜೇತರ ಮೇಲೆ ಗಲಭೆ ಪ್ರಕರಣ ದಾಖಲು: ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ?; ವಿನೇಶ್ ಫೋಗಟ್ ಪ್ರಶ್ನೆ

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮಾತನಾಡಿ, ಬಿಜೆಪಿಯು ಮತಗಳ ಅಗತ್ಯವಿದ್ದಾಗ ”ಬೇಟಿ ಬಚಾವೋ” ಅಭಿಯಾನವನ್ನು ಪ್ರಾರಂಭಿಸಿತು. ಆದರೆ ಈಗ ಅವರು ”ದೇಶದ ಹೆಣ್ಣುಮಕ್ಕಳನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದರು.

“ದುರಹಂಕಾರಿ ರಾಜ ಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವನು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ”ಆಟಗಾರರ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ. ಆ ಪದಕಗಳಿಂದ ಕ್ರೀಡಾ ಪಟುಗಳ ಪರಿಶ್ರಮದಿಂದ ದೇಶದ ಗೌರವ ಹೆಚ್ಚುತ್ತದೆ. ಬಿಜೆಪಿ ಸರ್ಕಾರದ ದುರಹಂಕಾರ ಎಷ್ಟರಮಟ್ಟಿಗೆ ಹೆಚ್ಚಿದೆ ಎಂದರೆ ಸರ್ಕಾರ ನಮ್ಮ ಮಹಿಳಾ ಆಟಗಾರ್ತಿಯರ ದನಿಯನ್ನು ನಿರ್ದಯವಾಗಿ ಅವರ ಬೂಟಿನ ಕೆಳಗೆ ತುಳಿಯುತ್ತಿದೆ. ಇದು ಸಂಪೂರ್ಣವಾಗಿ ತಪ್ಪು. ಸರ್ಕಾರದ ದುರಹಂಕಾರ ಹಾಗೂ ಈ ಅನ್ಯಾಯವನ್ನು ಇಡೀ ದೇಶವೇ ನೋಡುತ್ತಿದೆ” ಎಂದು ಟೀಕಿಸಿದ್ದಾರೆ.

ಪೊಲೀಸರ ವರ್ತನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...