Homeಮುಖಪುಟಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ

ಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ

- Advertisement -
- Advertisement -

ಐಟಿ ಸೆಲ್‌ನವರು ಪ್ರತಿಭಟನಾ ನಿರತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಅವರ ಮಾರ್ಫ್ ಮಾಡಿದ ಚಿತ್ರವನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಒಲಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಭಾನುವಾರ ಆರೋಪಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನವದೆಹಲಿಯ ಹೊಸ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಲು ಹೊರಟಿದ್ದ ಭಾರತದ ಹಲವಾರು ಪ್ರಮುಖ ಕುಸ್ತಿಪಟುಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಈ ವೇಳೆ ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಅವರನ್ನು ಪೊಲೀಸ್ ಅಧಿಕಾರಿಗಳು ಬಸ್‌ನಲ್ಲಿ ಎಳೆದೊಯ್ಯುವಾಗ ಅವರು ನಗುತ್ತಿರುವಂತೆ ನಕಲಿ ಫೋಟೋ ಚಿತ್ರಸಿ, ಕುಸ್ತಿಪಟುಗಳು ತಮ್ಮ ಪ್ರತಿಭಟನೆಯ ಬಗ್ಗೆ ಗಂಭೀರವಾಗಿಲ್ಲ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ಪತ್ರಕರ್ತ ಮಂದೀಪ್ ಪುನಿಯಾ ಅವರು ಮೂಲ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಮಾರ್ಫ್ ಮಾಡಲಾದ ಚಿತ್ರ ಹೊರಬರುವ ಮುನ್ನ ತಗೆದ ಫೋಟೊವನ್ನು ತೋರಿಸಿ, ಇದು ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ನಗುತ್ತಿರುವುದನ್ನು ತೋರಿಸುವುದಿಲ್ಲ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪುನಿಯಾ, ”ಐಟಿ ಸೆಲ್‌ನವರು ಈ ನಕಲಿ ಚಿತ್ರವನ್ನು ಹರಡುತ್ತಿದ್ದಾರೆ. ಈ ನಕಲಿ ಚಿತ್ರವನ್ನು ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ನಾವು ಸ್ಪಷ್ಟಪಡಿಸುತ್ತೇವೆ” ಎಂದಿದ್ದಾರೆ.

ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಪಿಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತ ಉಝೈರ್ ರಿಜ್ವಿ ಅವರು ಕುಸ್ತಿಪಟುಗಳ ಮೂಲ ಚಿತ್ರವನ್ನು ಹೇಗೆ ಮಾರ್ಪಡಿಸಲು ಸಾಫ್ಟ್‌ವೇರ್ ಅನ್ನು ಬಳಸಲಾಗಿದೆ ಎಂಬುದನ್ನು ಪ್ರದರ್ಶಿಸಲು ಟ್ವಿಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. FaceApp ಎಂಬ ಸಾಫ್ಟ್‌ವೇರ್, ಬಳಕೆದಾರರಿಗೆ “ಸ್ಮೈಲ್” ಫಿಲ್ಟರ್ ಅನ್ನು ಪ್ರಯತ್ನಿಸಲು ಮತ್ತು ಜನರು ನಗುತ್ತಿರುವಂತೆ ಕಾಣುವಂತೆ ಅವರ ಮುಖಗಳನ್ನು ಮಾರ್ಪಡಿಸುತ್ತದೆ ಎಂಬುದು ಅಲ್ಲಿ ಕಾಣಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸುತ್ತಿದ್ದಂತೆಯೇ ಕುಸ್ತಿಪಟುಗಳು ಅದರತ್ತ ಮೆರವಣಿಗೆ ನಡೆಸಲು ಯತ್ನಿಸಿದರು. ಆದರೆ ನೂರಾರು ಪೊಲೀಸರು ಅವರನ್ನು ತಡೆದರು.

2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಸಾಕ್ಷಿ ಮಲಿಕ್, ಕುಸ್ತಿಪಟುಗಳನ್ನು ಪೊಲೀಸ್ ಅಧಿಕಾರಿಗಳು ಎಳೆದೊಯ್ದ ಫೋಟೋಗಳು ಮತ್ತು ವೀಡಿಯೊವನ್ನು ಹಂಚಿಕೊಂಡಿದ್ದಾರೆ.

”ನಮ್ಮ ಚಾಂಪಿಯನ್‌ಗಳನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ಜಗತ್ತು ನಮ್ಮನ್ನು ನೋಡುತ್ತಿದೆ” ಎಂದು ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದಾರೆ.

ಹಲವಾರು ವಿರೋಧ ಪಕ್ಷದ ನಾಯಕರು ಪೊಲೀಸರ ಕ್ರಮಗಳನ್ನು ಟೀಕಿಸಿದ್ದು, ಇದು ”ಅತ್ಯಂತ ನಾಚಿಕೆಗೇಡಿನ ಮತ್ತು ದುರದೃಷ್ಟಕರ” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ಸ್ ಪದಕ ವಿಜೇತರ ಮೇಲೆ ಗಲಭೆ ಪ್ರಕರಣ ದಾಖಲು: ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ?; ವಿನೇಶ್ ಫೋಗಟ್ ಪ್ರಶ್ನೆ

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮಾತನಾಡಿ, ಬಿಜೆಪಿಯು ಮತಗಳ ಅಗತ್ಯವಿದ್ದಾಗ ”ಬೇಟಿ ಬಚಾವೋ” ಅಭಿಯಾನವನ್ನು ಪ್ರಾರಂಭಿಸಿತು. ಆದರೆ ಈಗ ಅವರು ”ದೇಶದ ಹೆಣ್ಣುಮಕ್ಕಳನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದರು.

“ದುರಹಂಕಾರಿ ರಾಜ ಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವನು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ”ಆಟಗಾರರ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ. ಆ ಪದಕಗಳಿಂದ ಕ್ರೀಡಾ ಪಟುಗಳ ಪರಿಶ್ರಮದಿಂದ ದೇಶದ ಗೌರವ ಹೆಚ್ಚುತ್ತದೆ. ಬಿಜೆಪಿ ಸರ್ಕಾರದ ದುರಹಂಕಾರ ಎಷ್ಟರಮಟ್ಟಿಗೆ ಹೆಚ್ಚಿದೆ ಎಂದರೆ ಸರ್ಕಾರ ನಮ್ಮ ಮಹಿಳಾ ಆಟಗಾರ್ತಿಯರ ದನಿಯನ್ನು ನಿರ್ದಯವಾಗಿ ಅವರ ಬೂಟಿನ ಕೆಳಗೆ ತುಳಿಯುತ್ತಿದೆ. ಇದು ಸಂಪೂರ್ಣವಾಗಿ ತಪ್ಪು. ಸರ್ಕಾರದ ದುರಹಂಕಾರ ಹಾಗೂ ಈ ಅನ್ಯಾಯವನ್ನು ಇಡೀ ದೇಶವೇ ನೋಡುತ್ತಿದೆ” ಎಂದು ಟೀಕಿಸಿದ್ದಾರೆ.

ಪೊಲೀಸರ ವರ್ತನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...