Homeಮುಖಪುಟ'ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..'; ಕಾಂಗ್ರೆಸ್ ಆಗ್ರಹ

‘ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..’; ಕಾಂಗ್ರೆಸ್ ಆಗ್ರಹ

- Advertisement -
- Advertisement -

₹1,823.08 ಕೋಟಿ ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಹೊಸ ನೋಟಿಸ್‌ಗಳನ್ನು ನೀಡಿದ್ದು, ‘ಬಿಜೆಪಿ ಗಮನಾರ್ಹ ಉಲ್ಲಂಘನೆಗಳನ್ನು ಮಾಡಿದೆ’ ಎಂದು ಎಐಸಿಸಿ ಖಜಾಂಚಿ ಅಜಯ್ ಮಾಕನ್ ಅವರು ಐಟಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಅಧಿಕಾರಿಗಳಿಂದ ಅನ್ಯಾಯವಾಗಿ ಗುರಿಯಾಗಿದೆ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರೊಂದಿಗೆ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಕೆನ್, “ಬಿಜೆಪಿಯ ಎಲ್ಲ ಉಲ್ಲಂಘನೆಗಳನ್ನು ನಾವು ನಮ್ಮ ಪಕ್ಷಕ್ಕೆ ನೋಟಿಸ್ ನೀಡಿದ ಅದೇ ನಿಯತಾಂಕಗಳನ್ನು ಬಳಸಿಕೊಂಡು ವಿಶ್ಲೇಷಣೆ ಮಾಡಿದ್ದೇವೆ” ಎಂದು ಹೇಳಿದರು.

“ಭಾರತೀಯ ಜನತಾ ಪಕ್ಷವು ಆದಾಯ ತೆರಿಗೆ ಕಾನೂನುಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ. ಕೇಂದ್ರದ ಆಡಳಿತ ಪಕ್ಷದಿಂದ ₹4,600 ಕೋಟಿಗೂ ಹೆಚ್ಚು ಬೇಡಿಕೆ ಇಡಬೇಕು” ಎಂದು  ಅವರು ತೆರಿಗೆ ಇಲಾಖೆ ಅಧಿಕಾರಿಗಳಿಗೆ ಆಗ್ರಹ ಮಾಡಿದರು.

“ನಮ್ಮ ಉಲ್ಲಂಘನೆಗಳನ್ನು ವಿಶ್ಲೇಷಿಸಲು ಅವರು ಬಳಸಿದ ಅದೇ ನಿಯತಾಂಕಗಳನ್ನು ಬಳಸಿಕೊಂಡು ನಾವು ಬಿಜೆಪಿಯ ಎಲ್ಲಾ ಉಲ್ಲಂಘನೆಗಳನ್ನು ವಿಶ್ಲೇಷಿಸಿದ್ದೇವೆ. ಬಿಜೆಪಿಗೆ ₹4600 ಕೋಟಿ ದಂಡವಿದೆ; ಆದಾಯ ತೆರಿಗೆ ಇಲಾಖೆಯು ಈ ಮೊತ್ತವನ್ನು ಪಾವತಿಸಲು ಬಿಜೆಪಿಯ ಮುಂದೆ ಬೇಡಿಕೆ ಇಡಬೇಕು” ಎಂದು ಮಾಕೆನ್ ಹೇಳಿದರು.

“ಕಾಂಗ್ರೆಸ್ ಮತ್ತು ಇತರ ಸಮಾನ ಮನಸ್ಕ ಆಯ್ದ ವಿರೋಧ ಪಕ್ಷಗಳು ಐಟಿ ಇಲಾಖೆಯಿಂದ ಗುರಿಯಾಗುತ್ತಿವೆ.  ಈ ಇಲಾಖೆಯು ಬಿಜೆಪಿಯ ಮುಂಚೂಣಿ ಸಂಸ್ಥೆ” ಎಂದು ಮಾಕೆನ್ ವಾಗ್ದಾಳಿ ನಡೆಸಿದರು.

“ಐಟಿ ಇಲಾಖೆಯ ಬೇಡಿಕೆಗಳ ಕುರಿತು ಕಾಂಗ್ರೆಸ್ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದೆ” ಎಂದು ಹೇಳಿದ್ದಾರೆ.

ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ

‘ಚುನಾವಣಾ ಬಾಂಡ್‌ ಹಗರಣದ ಮೂಲಕ ಬಿಜೆಪಿ ₹8,200 ಕೋಟಿ ಸಂಗ್ರಹಿಸಿದೆ; ಪ್ರೀ ಪೇಯ್ಡ್‌, ಪೋಸ್ಟ್‌ ಪೇಯ್ಡ್‌, ಪೋಸ್ಟ್‌ ರೈಡ್‌ ಲಂಚ ಮತ್ತು ಶೆಲ್‌ ಕಂಪನಿಗಳ ಮಾರ್ಗವನ್ನು ಬಳಸಿಕೊಂಡಿದೆ” ಎಂದು ಸಂವಹನ ಉಸ್ತುವಾರಿ ಜೈರಾಮ್ ರಮೇಶ್‌ ಆರೋಪಿಸಿದ್ದಾರೆ. ‘ಮತ್ತೊಂದೆಡೆ ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ” ಎಂದು ಆರೋಪಿಸಿದರು.

ಕಾಂಗ್ರೆಸ್ ಅನ್ನು ಆರ್ಥಿಕವಾಗಿ ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿವೆ, ಆದರೆ ನಾವು ಕುಗ್ಗುವುದಿಲ್ಲ ಎಂದು ರಮೇಶ್ ಹೇಳಿದರು.

ನಾಲ್ಕು ವರ್ಷಗಳ ಅವಧಿಗೆ ತನ್ನ ವಿರುದ್ಧ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಮನವಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ಹೊಸ ನೋಟಿಸ್‌ಗಳನ್ನು ಸ್ವೀಕರಿಸಿದೆ. ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠವು ಮತ್ತೊಂದು ಅವಧಿಗೆ ಮರುಮೌಲ್ಯಮಾಪನವನ್ನು ತೆರೆಯಲು ಮಧ್ಯಪ್ರವೇಶಿಸಲು ನಿರಾಕರಿಸಿದ ಹಿಂದಿನ ನಿರ್ಧಾರದ ಪ್ರಕಾರ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...