Homeಮುಖಪುಟ'ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..'; ಕಾಂಗ್ರೆಸ್ ಆಗ್ರಹ

‘ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..’; ಕಾಂಗ್ರೆಸ್ ಆಗ್ರಹ

- Advertisement -
- Advertisement -

₹1,823.08 ಕೋಟಿ ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಹೊಸ ನೋಟಿಸ್‌ಗಳನ್ನು ನೀಡಿದ್ದು, ‘ಬಿಜೆಪಿ ಗಮನಾರ್ಹ ಉಲ್ಲಂಘನೆಗಳನ್ನು ಮಾಡಿದೆ’ ಎಂದು ಎಐಸಿಸಿ ಖಜಾಂಚಿ ಅಜಯ್ ಮಾಕನ್ ಅವರು ಐಟಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಅಧಿಕಾರಿಗಳಿಂದ ಅನ್ಯಾಯವಾಗಿ ಗುರಿಯಾಗಿದೆ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರೊಂದಿಗೆ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಕೆನ್, “ಬಿಜೆಪಿಯ ಎಲ್ಲ ಉಲ್ಲಂಘನೆಗಳನ್ನು ನಾವು ನಮ್ಮ ಪಕ್ಷಕ್ಕೆ ನೋಟಿಸ್ ನೀಡಿದ ಅದೇ ನಿಯತಾಂಕಗಳನ್ನು ಬಳಸಿಕೊಂಡು ವಿಶ್ಲೇಷಣೆ ಮಾಡಿದ್ದೇವೆ” ಎಂದು ಹೇಳಿದರು.

“ಭಾರತೀಯ ಜನತಾ ಪಕ್ಷವು ಆದಾಯ ತೆರಿಗೆ ಕಾನೂನುಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ. ಕೇಂದ್ರದ ಆಡಳಿತ ಪಕ್ಷದಿಂದ ₹4,600 ಕೋಟಿಗೂ ಹೆಚ್ಚು ಬೇಡಿಕೆ ಇಡಬೇಕು” ಎಂದು  ಅವರು ತೆರಿಗೆ ಇಲಾಖೆ ಅಧಿಕಾರಿಗಳಿಗೆ ಆಗ್ರಹ ಮಾಡಿದರು.

“ನಮ್ಮ ಉಲ್ಲಂಘನೆಗಳನ್ನು ವಿಶ್ಲೇಷಿಸಲು ಅವರು ಬಳಸಿದ ಅದೇ ನಿಯತಾಂಕಗಳನ್ನು ಬಳಸಿಕೊಂಡು ನಾವು ಬಿಜೆಪಿಯ ಎಲ್ಲಾ ಉಲ್ಲಂಘನೆಗಳನ್ನು ವಿಶ್ಲೇಷಿಸಿದ್ದೇವೆ. ಬಿಜೆಪಿಗೆ ₹4600 ಕೋಟಿ ದಂಡವಿದೆ; ಆದಾಯ ತೆರಿಗೆ ಇಲಾಖೆಯು ಈ ಮೊತ್ತವನ್ನು ಪಾವತಿಸಲು ಬಿಜೆಪಿಯ ಮುಂದೆ ಬೇಡಿಕೆ ಇಡಬೇಕು” ಎಂದು ಮಾಕೆನ್ ಹೇಳಿದರು.

“ಕಾಂಗ್ರೆಸ್ ಮತ್ತು ಇತರ ಸಮಾನ ಮನಸ್ಕ ಆಯ್ದ ವಿರೋಧ ಪಕ್ಷಗಳು ಐಟಿ ಇಲಾಖೆಯಿಂದ ಗುರಿಯಾಗುತ್ತಿವೆ.  ಈ ಇಲಾಖೆಯು ಬಿಜೆಪಿಯ ಮುಂಚೂಣಿ ಸಂಸ್ಥೆ” ಎಂದು ಮಾಕೆನ್ ವಾಗ್ದಾಳಿ ನಡೆಸಿದರು.

“ಐಟಿ ಇಲಾಖೆಯ ಬೇಡಿಕೆಗಳ ಕುರಿತು ಕಾಂಗ್ರೆಸ್ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದೆ” ಎಂದು ಹೇಳಿದ್ದಾರೆ.

ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ

‘ಚುನಾವಣಾ ಬಾಂಡ್‌ ಹಗರಣದ ಮೂಲಕ ಬಿಜೆಪಿ ₹8,200 ಕೋಟಿ ಸಂಗ್ರಹಿಸಿದೆ; ಪ್ರೀ ಪೇಯ್ಡ್‌, ಪೋಸ್ಟ್‌ ಪೇಯ್ಡ್‌, ಪೋಸ್ಟ್‌ ರೈಡ್‌ ಲಂಚ ಮತ್ತು ಶೆಲ್‌ ಕಂಪನಿಗಳ ಮಾರ್ಗವನ್ನು ಬಳಸಿಕೊಂಡಿದೆ” ಎಂದು ಸಂವಹನ ಉಸ್ತುವಾರಿ ಜೈರಾಮ್ ರಮೇಶ್‌ ಆರೋಪಿಸಿದ್ದಾರೆ. ‘ಮತ್ತೊಂದೆಡೆ ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ” ಎಂದು ಆರೋಪಿಸಿದರು.

ಕಾಂಗ್ರೆಸ್ ಅನ್ನು ಆರ್ಥಿಕವಾಗಿ ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿವೆ, ಆದರೆ ನಾವು ಕುಗ್ಗುವುದಿಲ್ಲ ಎಂದು ರಮೇಶ್ ಹೇಳಿದರು.

ನಾಲ್ಕು ವರ್ಷಗಳ ಅವಧಿಗೆ ತನ್ನ ವಿರುದ್ಧ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಮನವಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ಹೊಸ ನೋಟಿಸ್‌ಗಳನ್ನು ಸ್ವೀಕರಿಸಿದೆ. ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠವು ಮತ್ತೊಂದು ಅವಧಿಗೆ ಮರುಮೌಲ್ಯಮಾಪನವನ್ನು ತೆರೆಯಲು ಮಧ್ಯಪ್ರವೇಶಿಸಲು ನಿರಾಕರಿಸಿದ ಹಿಂದಿನ ನಿರ್ಧಾರದ ಪ್ರಕಾರ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...