Homeಮುಖಪುಟ'ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..'; ಕಾಂಗ್ರೆಸ್ ಆಗ್ರಹ

‘ಐಟಿ ಇಲಾಖೆಯು ಬಿಜೆಪಿಯಿಂದ ₹4,600 ಕೋಟಿಗೆ ಬೇಡಿಕೆ ಇಡಬೇಕು..’; ಕಾಂಗ್ರೆಸ್ ಆಗ್ರಹ

- Advertisement -
- Advertisement -

₹1,823.08 ಕೋಟಿ ದಂಡ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಹೊಸ ನೋಟಿಸ್‌ಗಳನ್ನು ನೀಡಿದ್ದು, ‘ಬಿಜೆಪಿ ಗಮನಾರ್ಹ ಉಲ್ಲಂಘನೆಗಳನ್ನು ಮಾಡಿದೆ’ ಎಂದು ಎಐಸಿಸಿ ಖಜಾಂಚಿ ಅಜಯ್ ಮಾಕನ್ ಅವರು ಐಟಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಅಧಿಕಾರಿಗಳಿಂದ ಅನ್ಯಾಯವಾಗಿ ಗುರಿಯಾಗಿದೆ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರೊಂದಿಗೆ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಕೆನ್, “ಬಿಜೆಪಿಯ ಎಲ್ಲ ಉಲ್ಲಂಘನೆಗಳನ್ನು ನಾವು ನಮ್ಮ ಪಕ್ಷಕ್ಕೆ ನೋಟಿಸ್ ನೀಡಿದ ಅದೇ ನಿಯತಾಂಕಗಳನ್ನು ಬಳಸಿಕೊಂಡು ವಿಶ್ಲೇಷಣೆ ಮಾಡಿದ್ದೇವೆ” ಎಂದು ಹೇಳಿದರು.

“ಭಾರತೀಯ ಜನತಾ ಪಕ್ಷವು ಆದಾಯ ತೆರಿಗೆ ಕಾನೂನುಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ. ಕೇಂದ್ರದ ಆಡಳಿತ ಪಕ್ಷದಿಂದ ₹4,600 ಕೋಟಿಗೂ ಹೆಚ್ಚು ಬೇಡಿಕೆ ಇಡಬೇಕು” ಎಂದು  ಅವರು ತೆರಿಗೆ ಇಲಾಖೆ ಅಧಿಕಾರಿಗಳಿಗೆ ಆಗ್ರಹ ಮಾಡಿದರು.

“ನಮ್ಮ ಉಲ್ಲಂಘನೆಗಳನ್ನು ವಿಶ್ಲೇಷಿಸಲು ಅವರು ಬಳಸಿದ ಅದೇ ನಿಯತಾಂಕಗಳನ್ನು ಬಳಸಿಕೊಂಡು ನಾವು ಬಿಜೆಪಿಯ ಎಲ್ಲಾ ಉಲ್ಲಂಘನೆಗಳನ್ನು ವಿಶ್ಲೇಷಿಸಿದ್ದೇವೆ. ಬಿಜೆಪಿಗೆ ₹4600 ಕೋಟಿ ದಂಡವಿದೆ; ಆದಾಯ ತೆರಿಗೆ ಇಲಾಖೆಯು ಈ ಮೊತ್ತವನ್ನು ಪಾವತಿಸಲು ಬಿಜೆಪಿಯ ಮುಂದೆ ಬೇಡಿಕೆ ಇಡಬೇಕು” ಎಂದು ಮಾಕೆನ್ ಹೇಳಿದರು.

“ಕಾಂಗ್ರೆಸ್ ಮತ್ತು ಇತರ ಸಮಾನ ಮನಸ್ಕ ಆಯ್ದ ವಿರೋಧ ಪಕ್ಷಗಳು ಐಟಿ ಇಲಾಖೆಯಿಂದ ಗುರಿಯಾಗುತ್ತಿವೆ.  ಈ ಇಲಾಖೆಯು ಬಿಜೆಪಿಯ ಮುಂಚೂಣಿ ಸಂಸ್ಥೆ” ಎಂದು ಮಾಕೆನ್ ವಾಗ್ದಾಳಿ ನಡೆಸಿದರು.

“ಐಟಿ ಇಲಾಖೆಯ ಬೇಡಿಕೆಗಳ ಕುರಿತು ಕಾಂಗ್ರೆಸ್ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದೆ” ಎಂದು ಹೇಳಿದ್ದಾರೆ.

ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ

‘ಚುನಾವಣಾ ಬಾಂಡ್‌ ಹಗರಣದ ಮೂಲಕ ಬಿಜೆಪಿ ₹8,200 ಕೋಟಿ ಸಂಗ್ರಹಿಸಿದೆ; ಪ್ರೀ ಪೇಯ್ಡ್‌, ಪೋಸ್ಟ್‌ ಪೇಯ್ಡ್‌, ಪೋಸ್ಟ್‌ ರೈಡ್‌ ಲಂಚ ಮತ್ತು ಶೆಲ್‌ ಕಂಪನಿಗಳ ಮಾರ್ಗವನ್ನು ಬಳಸಿಕೊಂಡಿದೆ” ಎಂದು ಸಂವಹನ ಉಸ್ತುವಾರಿ ಜೈರಾಮ್ ರಮೇಶ್‌ ಆರೋಪಿಸಿದ್ದಾರೆ. ‘ಮತ್ತೊಂದೆಡೆ ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ” ಎಂದು ಆರೋಪಿಸಿದರು.

ಕಾಂಗ್ರೆಸ್ ಅನ್ನು ಆರ್ಥಿಕವಾಗಿ ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿವೆ, ಆದರೆ ನಾವು ಕುಗ್ಗುವುದಿಲ್ಲ ಎಂದು ರಮೇಶ್ ಹೇಳಿದರು.

ನಾಲ್ಕು ವರ್ಷಗಳ ಅವಧಿಗೆ ತನ್ನ ವಿರುದ್ಧ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಮನವಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ಹೊಸ ನೋಟಿಸ್‌ಗಳನ್ನು ಸ್ವೀಕರಿಸಿದೆ. ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠವು ಮತ್ತೊಂದು ಅವಧಿಗೆ ಮರುಮೌಲ್ಯಮಾಪನವನ್ನು ತೆರೆಯಲು ಮಧ್ಯಪ್ರವೇಶಿಸಲು ನಿರಾಕರಿಸಿದ ಹಿಂದಿನ ನಿರ್ಧಾರದ ಪ್ರಕಾರ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...