Homeಮುಖಪುಟ'ಜೈ ಹಿಂದ್ ಟಿವಿ' ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ...

‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

- Advertisement -
- Advertisement -

‘ಜೈಹಿಂದ್ ಟಿವಿ’ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಝ್‌ ಮಾಡಿದ್ದು, ಇದನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಹೂಡಿಕೆ ಮಾಡಿರುವುದರಿಂದ ತೆಗೆದುಕೊಂಡ ರಾಜಕೀಯ ಸೇಡಿನ ಕ್ರಮ ಎಂದು ಜೈಹಿಂದ್ ಟಿವಿ ಮುಖ್ಯಸ್ಥರು ಹೇಳಿಕೊಂಡಿದ್ದಾರೆ.

ಜೈಹಿಂದ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಈ ಕುರಿತು ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಡಿರುವ ಹೂಡಿಕೆಯಿಂದಾಗಿ ಖಾತೆಗಳನ್ನು ಸ್ಥಗಿತಗೊಳಿಸಿರಬಹುದು ಮತ್ತು ಐಟಿ ಇಲಾಖೆ ಕ್ರಮ ಪ್ರತೀಕಾರಕವಾಗಿದೆ. ಬ್ಯಾಂಕ್ ಖಾತೆಗಳ ಸ್ಥಗಿತಗೊಳಿಸುವಿಕೆಯು ಸೇವಾ ತೆರಿಗೆ ಬಾಕಿಗೆ ಸಂಬಂಧಿಸಿದ ಏಳು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದೆ, ಈ ಕುರಿತ ಪ್ರಕರಣ ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಜೈ ಹಿಂದ್ ಟಿವಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಆರಂಭದಲ್ಲಿ, ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಯಿತು, ನಂತರ ಐಸಿಐಸಿಐ ಬ್ಯಾಂಕ್‌ ಖಾತೆ ಕೂಡ ಸ್ಥಗಿತಗೊಂಡಿದೆ. ಸಾಕಷ್ಟು ಹಣವನ್ನು ಹೊಂದಿದ್ದರೂ ಖಾತೆಯನ್ನು ಸ್ಥಗಿತಗೊಳಿಸಿದ್ದರಿಂದ ಪಾವತಿಗಳು ವಿಫಲವಾಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳ ನಿರ್ದೇಶನಗಳನ್ನು ಫ್ರೀಝ್‌ ಹಿಂದಿನ ಕಾರಣವಾಗಿ ತಾರ್ಕಿಕವಾಗಿ ಉಲ್ಲೇಖಿಸಿದ್ದಾರೆ. ನಾವು ಕ್ರಮದ ಹಿಂದಿನ ಕಾರಣಕ್ಕೆ ಒತ್ತಾಯಿಸಿ ಪತ್ರ ಬರೆದಿದ್ದೇವೆ. ಅಂತಿಮವಾಗಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಿಜಿಎಸ್‌ಟಿ ಇಲಾಖೆಯಿಂದ ಬಂದ ಪತ್ರದ ಪ್ರತಿಯನ್ನು ನೀಡಿದೆ.  ಐಸಿಐಸಿಐ ಬ್ಯಾಂಕ್ ಅಧಿಕಾರಿಗಳು ನಕಲು ಪ್ರತಿ ನೀಡದಂತೆ ನಮಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಝ್‌ ಮಾಡಿರುವುದು ಪೂರ್ವ ಎಚ್ಚರಿಕೆ ನೀಡದೆ ತೆಗೆದುಕೊಂಡ ಕ್ರಮವಾಗಿದೆ. ಇದು ಚಾನಲ್‌ನ ದೈನಂದಿನ ಕಾರ್ಯಾಚರಣೆಗಳಿಗೆ ಗಮನಾರ್ಹ ಅಡ್ಡಿ ಉಂಟುಮಾಡುತ್ತದೆ. ಈ ಹಠಾತ್ ಕ್ರಮ ನಿಜಕ್ಕೂ ದುರದೃಷ್ಟಕರ ಮತ್ತು ಚಾನಲ್‌ನ್ನು ಬಿಕ್ಕಟ್ಟಿನ ಸ್ಥಿತಿಗೆ ತಳ್ಳಿದೆ ಎಂದು ಶಿಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೈಹಿಂದ್ ಟಿವಿಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಹೂಡಿಕೆ ವಿವರಗಳನ್ನು ಕೋರಿ ಡಿಸೆಂಬರ್ 22, 2023ರಂದು ಸ್ವೀಕರಿಸಿದ ನೋಟಿಸ್‌ನ್ನು ಶಿಜು ಫ್ರೀಝ್‌ ಮಾಡಿರುವುದರ ಕುರಿತ ಸಾಂಭವ್ಯ ಕಾರಣವಾಗಿ ಉಲ್ಲೇಖಿಸಿದ್ದಾರೆ. ನೋಟಿಸ್‌ಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸಿದ್ದೇವೆ ಆದರೆ ನಂತರ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಏಜೆನ್ಸಿಗಳಿಂದ ಹಲವಾರು ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಚಾನಲ್‌ ಹೇಳಿಕೊಂಡಿದೆ.

ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಡಿಕೆ ಶಿವಕುಮಾರ್ ವಿರುದ್ಧದ ರಾಜಕೀಯ ಸೇಡಿನ ಪ್ರಕರಣ ಎಂಬುದು ಸ್ಪಷ್ಟವಾಗಿದೆ ಎಂದು ಶಿಜು ಆರೋಪಿಸಿದ್ದಾರೆ. ಭಾರತ್‌ ಜೋಡೋ ನ್ಯಾಯ ಯಾತ್ರೆಯ ವಿವರಗಳನ್ನು ಸಂಪೂರ್ಣವಾಗಿ ಪ್ರಸಾರ ಮಾಡುವ ಏಕೈಕ ಚಾನೆಲ್ ನಮ್ಮದಾಗಿದೆ, ಆದ್ದರಿಂದ ಇದಕ್ಕೆ ಅಡ್ಡಿಯುಂಟು ಮಾಡಲು ತೆಗೆದುಕೊಂಡ ಕ್ರಮವಾಗಿರಬಹುದು ಎಂದು ಶಿಜು ಹೇಳಿದ್ದಾರೆ.

ಫೆಬ್ರವರಿ 16ರಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಅವರು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಕಾಂಗ್ರೆಸ್ ಪಕ್ಷದ ಖಾತೆಗಳನ್ನೂ ಜಪ್ತಿ ಮಾಡಲಾಗಿದೆ. ಯೂತ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ 210 ಕೋಟಿ ರೂ. ವಸೂಲಾತಿಗೆ ಆದಾಯ ತೆರಿಗೆ ಇಲಾಖೆ ಕೇಳಿಕೊಂಡಿದೆ. ಕ್ರೌಡ್ ಫಂಡಿಂಗ್ ಮೂಲಕ ಪಕ್ಷಕ್ಕೆ ಬಂದ ಹಣವನ್ನೂ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...