Homeಮುಖಪುಟ'ಜೈ ಹಿಂದ್ ಟಿವಿ' ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ...

‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

- Advertisement -
- Advertisement -

‘ಜೈಹಿಂದ್ ಟಿವಿ’ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಝ್‌ ಮಾಡಿದ್ದು, ಇದನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಹೂಡಿಕೆ ಮಾಡಿರುವುದರಿಂದ ತೆಗೆದುಕೊಂಡ ರಾಜಕೀಯ ಸೇಡಿನ ಕ್ರಮ ಎಂದು ಜೈಹಿಂದ್ ಟಿವಿ ಮುಖ್ಯಸ್ಥರು ಹೇಳಿಕೊಂಡಿದ್ದಾರೆ.

ಜೈಹಿಂದ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಈ ಕುರಿತು ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಡಿರುವ ಹೂಡಿಕೆಯಿಂದಾಗಿ ಖಾತೆಗಳನ್ನು ಸ್ಥಗಿತಗೊಳಿಸಿರಬಹುದು ಮತ್ತು ಐಟಿ ಇಲಾಖೆ ಕ್ರಮ ಪ್ರತೀಕಾರಕವಾಗಿದೆ. ಬ್ಯಾಂಕ್ ಖಾತೆಗಳ ಸ್ಥಗಿತಗೊಳಿಸುವಿಕೆಯು ಸೇವಾ ತೆರಿಗೆ ಬಾಕಿಗೆ ಸಂಬಂಧಿಸಿದ ಏಳು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದೆ, ಈ ಕುರಿತ ಪ್ರಕರಣ ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಜೈ ಹಿಂದ್ ಟಿವಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಆರಂಭದಲ್ಲಿ, ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಯಿತು, ನಂತರ ಐಸಿಐಸಿಐ ಬ್ಯಾಂಕ್‌ ಖಾತೆ ಕೂಡ ಸ್ಥಗಿತಗೊಂಡಿದೆ. ಸಾಕಷ್ಟು ಹಣವನ್ನು ಹೊಂದಿದ್ದರೂ ಖಾತೆಯನ್ನು ಸ್ಥಗಿತಗೊಳಿಸಿದ್ದರಿಂದ ಪಾವತಿಗಳು ವಿಫಲವಾಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳ ನಿರ್ದೇಶನಗಳನ್ನು ಫ್ರೀಝ್‌ ಹಿಂದಿನ ಕಾರಣವಾಗಿ ತಾರ್ಕಿಕವಾಗಿ ಉಲ್ಲೇಖಿಸಿದ್ದಾರೆ. ನಾವು ಕ್ರಮದ ಹಿಂದಿನ ಕಾರಣಕ್ಕೆ ಒತ್ತಾಯಿಸಿ ಪತ್ರ ಬರೆದಿದ್ದೇವೆ. ಅಂತಿಮವಾಗಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಿಜಿಎಸ್‌ಟಿ ಇಲಾಖೆಯಿಂದ ಬಂದ ಪತ್ರದ ಪ್ರತಿಯನ್ನು ನೀಡಿದೆ.  ಐಸಿಐಸಿಐ ಬ್ಯಾಂಕ್ ಅಧಿಕಾರಿಗಳು ನಕಲು ಪ್ರತಿ ನೀಡದಂತೆ ನಮಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಝ್‌ ಮಾಡಿರುವುದು ಪೂರ್ವ ಎಚ್ಚರಿಕೆ ನೀಡದೆ ತೆಗೆದುಕೊಂಡ ಕ್ರಮವಾಗಿದೆ. ಇದು ಚಾನಲ್‌ನ ದೈನಂದಿನ ಕಾರ್ಯಾಚರಣೆಗಳಿಗೆ ಗಮನಾರ್ಹ ಅಡ್ಡಿ ಉಂಟುಮಾಡುತ್ತದೆ. ಈ ಹಠಾತ್ ಕ್ರಮ ನಿಜಕ್ಕೂ ದುರದೃಷ್ಟಕರ ಮತ್ತು ಚಾನಲ್‌ನ್ನು ಬಿಕ್ಕಟ್ಟಿನ ಸ್ಥಿತಿಗೆ ತಳ್ಳಿದೆ ಎಂದು ಶಿಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೈಹಿಂದ್ ಟಿವಿಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಹೂಡಿಕೆ ವಿವರಗಳನ್ನು ಕೋರಿ ಡಿಸೆಂಬರ್ 22, 2023ರಂದು ಸ್ವೀಕರಿಸಿದ ನೋಟಿಸ್‌ನ್ನು ಶಿಜು ಫ್ರೀಝ್‌ ಮಾಡಿರುವುದರ ಕುರಿತ ಸಾಂಭವ್ಯ ಕಾರಣವಾಗಿ ಉಲ್ಲೇಖಿಸಿದ್ದಾರೆ. ನೋಟಿಸ್‌ಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸಿದ್ದೇವೆ ಆದರೆ ನಂತರ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಏಜೆನ್ಸಿಗಳಿಂದ ಹಲವಾರು ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಚಾನಲ್‌ ಹೇಳಿಕೊಂಡಿದೆ.

ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಡಿಕೆ ಶಿವಕುಮಾರ್ ವಿರುದ್ಧದ ರಾಜಕೀಯ ಸೇಡಿನ ಪ್ರಕರಣ ಎಂಬುದು ಸ್ಪಷ್ಟವಾಗಿದೆ ಎಂದು ಶಿಜು ಆರೋಪಿಸಿದ್ದಾರೆ. ಭಾರತ್‌ ಜೋಡೋ ನ್ಯಾಯ ಯಾತ್ರೆಯ ವಿವರಗಳನ್ನು ಸಂಪೂರ್ಣವಾಗಿ ಪ್ರಸಾರ ಮಾಡುವ ಏಕೈಕ ಚಾನೆಲ್ ನಮ್ಮದಾಗಿದೆ, ಆದ್ದರಿಂದ ಇದಕ್ಕೆ ಅಡ್ಡಿಯುಂಟು ಮಾಡಲು ತೆಗೆದುಕೊಂಡ ಕ್ರಮವಾಗಿರಬಹುದು ಎಂದು ಶಿಜು ಹೇಳಿದ್ದಾರೆ.

ಫೆಬ್ರವರಿ 16ರಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಅವರು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಕಾಂಗ್ರೆಸ್ ಪಕ್ಷದ ಖಾತೆಗಳನ್ನೂ ಜಪ್ತಿ ಮಾಡಲಾಗಿದೆ. ಯೂತ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ 210 ಕೋಟಿ ರೂ. ವಸೂಲಾತಿಗೆ ಆದಾಯ ತೆರಿಗೆ ಇಲಾಖೆ ಕೇಳಿಕೊಂಡಿದೆ. ಕ್ರೌಡ್ ಫಂಡಿಂಗ್ ಮೂಲಕ ಪಕ್ಷಕ್ಕೆ ಬಂದ ಹಣವನ್ನೂ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...