Homeಮುಖಪುಟಪ್ರತಿಭಟನೆ ಪರ ನಿಲ್ಲದಿದ್ದರೂ ಪರವಾಗಿಲ್ಲ ದುರ್ಬಲಗೊಳಿಸದಿರು: ಬಬಿತಾ ಫೋಗಟ್‌ಗೆ ವಿನೇಶ್ ಫೋಗಟ್ ತಾಕೀತು

ಪ್ರತಿಭಟನೆ ಪರ ನಿಲ್ಲದಿದ್ದರೂ ಪರವಾಗಿಲ್ಲ ದುರ್ಬಲಗೊಳಿಸದಿರು: ಬಬಿತಾ ಫೋಗಟ್‌ಗೆ ವಿನೇಶ್ ಫೋಗಟ್ ತಾಕೀತು

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬೃಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ದುರ್ಬಲಗೊಳಿಸದಂತೆ ಕುಸ್ತಿಪಟು ವಿನೇಶ್ ಫೋಗಟ್ ಅವರು ಬಿಜೆಪಿ ಸದಸ್ಯೆ ಬಬಿತಾ ಫೋಗಟ್‌ಗೆ ತಾಕೀತು ಮಾಡಿದ್ದಾರೆ. ವಿನೇಶ್ ಫೋಗಟ್ ಹಾಗೂ ಬಬಿತಾ ಫೋಗಟ್ ಸೋದರ ಸಂಬಂಧಿಗಳಾಗಿದ್ದು, ಇದೀಗ ಇಬ್ಬರ ನಡುವೆ ನಡುವೆ ವಾಕ್ಸಮರ ಸ್ಫೋಟಗೊಂಡಿದೆ.

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬೃಜ್ ಭೂಷಣ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದೇಶದ ಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಹಾಗೂ ಬಜರಂಗ್ ಪುನಿಯಾ ಕಳೆದ ರವಿವಾರದಿಂದ ಪುನಃ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬಾರಿ ಬೆಂಬಲಕ್ಕಾಗಿ ರಾಜಕೀಯ ಪಕ್ಷಗಳಿಗೂ ಆಹ್ವಾನ ನೀಡಿದ್ದಾರೆ.

ವಿನೇಶ್ ಫೋಗಟ್ ಅವರು ಬಬಿತಾರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದು, ”ನೀವು ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿ ಪಟುಗಳ ಹಕ್ಕಿನ ಪರವಾಗಿ ನಿಲ್ಲದಿದ್ದರೂ ಪರವಾಗಿಲ್ಲ. ಆದರೆ, ಬಬಿತಾ ಸಹೋದರಿ, ನಮ್ಮ ಹೋರಾಟವನ್ನು ದುರ್ಬಲಗೊಳಿಸದಿರಿ ಎಂದು ಕೈ ಮುಗಿದು ಬೇಡಿಕೊಳ್ಳುತ್ತೇನೆ. ತಮಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ಮಾತನಾಡಲು ಮಹಿಳಾ ಕುಸ್ತಿ ಪಟುಗಳಿಗೆ ವರ್ಷಗಳೇ ಆಗಿವೆ. ನೀವೂ ಕೂಡಾ ಓರ್ವ ಹೆಣ್ಣು, ನಮ್ಮ ನೋವನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ” ಎಂದು ಹೇಳಿದ್ದಾರೆ.

Vinesh Phogat asks cousin Babita to not weaken wrestlers' protest

ಈ ವಾಕ್ಸಮರ ಶುರುವಾಗುವ ಮುನ್ನ ಪ್ರತಿಭಟನಾ ಸ್ಥಳ ಜಂತರ್ ಮಂತರ್‌ಗೆ ಬಂದಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕುಸ್ತಿಪಟುಗಳನ್ನು ಭೇಟಿ ಮಾಡಿದ್ದರು. ಈ ಬಗ್ಗೆ ಕಳೆದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಬಬಿತಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಬಬಿತಾ ಅವರ ಟ್ವೀಟ್‌ನಲ್ಲಿ, ”ಮಹಿಳಾ ಕುಸ್ತಿ ಪಟುಗಳಿಗೆ ನ್ಯಾಯ ಒದಗಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಆಪ್ತ ಸಹಾಯಕ ಸಂದೀಪ್ ಸಿಂಗ್‌ನೊಂದಿಗೆ ಜಂತರ್ ಮಂತರ್‌ಗೆ ಹೋಗಿದ್ದಾರೆ. ಆದರೆ, ಈ ವ್ಯಕ್ತಿಯೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಹಾಗೂ ದಲಿತ ಮಹಿಳೆಗೆ ಅಪಮಾನ ಮಾಡಿರುವ ಆರೋಪ ಎದುರಿಸುತ್ತಿದ್ದಾನೆ” ಎಂದು ವ್ಯಂಗ್ಯವಾಡಿದ್ದರು.

PM Modi campaign for Babita Phogat, say's she will prove her mettle in political 'dangle' - Inside Sport India
ಬಬಿತಾ ಪೋಗಟ್

ಬಬಿತಾ ಅವರ ಟ್ವೀಟ್‌ನಿಂದ ಕೆರಳಿರುವ ಕುಸ್ತಿಪಟು ವಿನೇಶ್ ಫೋಗಟ್ ಅವರು, ಸಹೋದರಿಯ ವಿರುದ್ದವೇ ಇದೀಗ ಟ್ವೀಟ್ ಮಾಡಿದ್ದಾರೆ. ಒಂದು ಹೆಣ್ಣಾಗಿ ನಮ್ಮ ಹೋರಾಟಕ್ಕೆ ಬೆಂಬಲ ನೀಡದಿದ್ದರೂ ಪರವಾಗಿಲ್ಲ ಆದರೆ ಪ್ರತಿಭಟನೆಯನ್ನು ದುರ್ಬಲಗೊಳಿಸಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ನಡುವೆ ದೆಹಲಿ ಪೊಲೀಸರು, ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬೃಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿ ಪಟುಗಳು ಹೊರಿಸಿದ್ದ ಆರೋಪದ ಮೇಲೆ ಎರಡು ಎಫ್ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ.

ಅಪ್ರಾಪ್ತ ಮಹಿಳಾ ಕುಸ್ತಿ ಪಟು ನೀಡಿರುವ ದೂರನ್ನು ಆಧರಿಸಿ ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಘನತೆಗೆ ಕುಂದುಂಟು ಮಾಡಿದ ಆರೋಪವನ್ನು ಮೊದಲ ಎಫ್‌ಐಆರ್‌ನಲ್ಲಿ ದಾಖಲಿಸಿಕೊಳ್ಳಲಾಗಿದೆ.

ಎರಡನೆಯ ಎಫ್‌ಐಆರ್‌ನಲ್ಲಿ ವಯಸ್ಕ ಕುಸ್ತಿಪಟುಗಳು ನೀಡಿರುವ ದೂರುಗಳನ್ನು ಆಧರಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಪ್ರಸ್ತುತ ಸೆಕ್ಷನ್‌ಗಳಡಿಯಲ್ಲಿ ಘನತೆಗೆ ಕುಂದುಂಟು ಮಾಡಿದ ಆರೋಪವನ್ನು ದಾಖಲಿಸಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...