HomeಮುಖಪುಟIT, ED, CBI ಸಂಸ್ಥೆಗಳು 'ಮೋದಿ ಸರ್ಕಾರ'ದ ಕಿರುಕುಳದ ಸಾಧನಗಳು: ಜೈರಾಮ್ ರಮೇಶ್

IT, ED, CBI ಸಂಸ್ಥೆಗಳು ‘ಮೋದಿ ಸರ್ಕಾರ’ದ ಕಿರುಕುಳದ ಸಾಧನಗಳು: ಜೈರಾಮ್ ರಮೇಶ್

- Advertisement -
- Advertisement -

2021-22ರ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಬೆಂಬಲ ನೀಡುವ ಕುರಿತು ಕಾಂಗ್ರೆಸ್‌ನ ದೆಹಲಿ ಘಟಕ ಮತ್ತು ಪಕ್ಷದ ರಾಷ್ಟ್ರೀಯ ನಾಯಕತ್ವದ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿವೆ.

ದೆಹಲಿ ಕಾಂಗ್ರೆಸ್ ಘಟಕವು ಸಿಬಿಐ ಕ್ರಮವನ್ನು ಸ್ವಾಗತಿಸಿದರೆ, ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಸೋಮವಾರ ರಾತ್ರಿ ಸಿಬಿಐ ಕ್ರಮವನ್ನು ದೂಷಿಸಿದ್ದಾರೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಎಲ್ಲಾ ತನಿಖಾ ಸಂಸ್ಥೆಗಳನ್ನು “ಕಿರುಕುಳ ನೀಡುವ ಸಾಧನಗಳು” ಎಂದು ಕರೆದಿದ್ದಾರೆ.

ಮೂಲಗಳ ಪ್ರಕಾರ, ರಮೇಶ್ ಅವರು ಆಪ್ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಕೆಲವರು ಖಾಸಗಿಯಾಗಿ ಆರೋಪಿಸಿ ಸಾರ್ವಜನಿಕವಾಗಿ ನಿಂದಿಸಿರುವ ಬಗ್ಗೆ ರಾಜ್ಯ ನಾಯಕರು ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ಆರು ತಿಂಗಳಲ್ಲಿ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು: ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವ ಬಗ್ಗೆ ಕಾಂಗ್ರೆಸ್, ”ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಆದಾಯ ತೆರಿಗೆ ಇಲಾಖೆಯನ್ನು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಿರುಕುಳ ಸಾಧನಗಳು’” ಎಂದು ಸೋಮವಾರ ಬಣ್ಣಿಸಿದೆ.

“ED, CBI ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳು ‘ಮೋದಿ ಸರ್ಕಾರ’ದ ಅಡಿಯಲ್ಲಿ ರಾಜಕೀಯ ಸೇಡು ಮತ್ತು ಕಿರುಕುಳದ ಸಾಧನಗಳಾಗಿವೆ ಎಂಬ ನಂಬಿಕೆಯನ್ನು ಕಾಂಗ್ರೆಸ್ ಯಾವಾಗಲೂ ಹೊಂದಿದೆ. ಈ ಸಂಸ್ಥೆಗಳು ಎಲ್ಲಾ ವೃತ್ತಿಪರತೆಯನ್ನು ಕಳೆದುಕೊಂಡಿವೆ. ಪ್ರತಿಪಕ್ಷದ ನಾಯಕರ ಪ್ರತಿಷ್ಠೆಯನ್ನು ನಾಶಮಾಡುವ ಗುರಿಯನ್ನು ಹೊಂದಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ಬಗ್ಗೆ ಏನನ್ನೂ ಉಲ್ಲೇಖಿಸದೆ ಹೇಳಿದರು.

ಭಾನುವಾರ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ 24 ಗಂಟೆಗಳ ನಂತರ ಕಾಂಗ್ರೆಸ್‌ ಪ್ರತಿಕ್ರಿಯಿಸಿದ್ದು, ಪಕ್ಷದ ದೆಹಲಿ ಘಟಕದ ನಾಯಕರು ಈ ಕ್ರಮವನ್ನು ಸ್ವಾಗತಿಸಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...