Homeಮುಖಪುಟಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ಸಾರ್ವಜನಿಕ ಪ್ರತಿಭಟನೆ ನಡೆಸುತ್ತಿರುವುದನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಖ್ಯಸ್ಥೆ ಪಿಟಿ ಉಷಾ ಟೀಕಿಸಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಮತ್ತು ದೀಪಕ್ ಪುನಿಯಾ ಅವರು ಬಿಜೆಪಿ ಸಂಸದ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ತಮ್ಮ ದೂರಿನ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ತುರ್ತಾಗಿ ಕ್ರಮಕೈಗೊಳ್ಳುವಂತೆ ಉಷಾ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಟಿ ಉಷಾ ಅವರು, ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಟೀಕಿಸಿದ್ದಾರೆ.

”ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಅವರು ಈ ರೀತಿ ಪ್ರತಿಭಟನೆ ಮಾಡುತ್ತಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಉಷಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಉಷಾ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಸ್ತಿಪಟುಗಳು, ಅವರ ಬೆಂಬಲಕ್ಕಾಗಿ ನಾವು ಕಾಯುತ್ತಿದ್ದೆವು. ಆದರೆ ಅವರ ಈ ಹೇಳಿಕೆಗಳಿಂದ ನಮಗೆ ನೋವಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು ಸಾಕ್ಷಿ ಮಲಿಕ್, ”ಪಿಟಿ ಉಷಾ ಅವರ ಹೇಳಿಕೆಯಿಂದ ನಮಗೆ ನೋವಾಗಿದೆ. ಸ್ವತಃ ಮಹಿಳೆಯಾಗಿದ್ದರೂ ಅವರು ನಮಗೆ ಬೆಂಬಲ ನೀಡುತ್ತಿಲ್ಲ. ನಾವು ಏನು ಅಶಿಸ್ತು ಮಾಡಿದ್ದೇವೆ? ನಾವು ಇಲ್ಲಿ ಶಾಂತಿಯುತವಾಗಿ ಕುಳಿತಿದ್ದೇವೆ. ನಮಗೆ ನ್ಯಾಯ ಸಿಕ್ಕಿದ್ದರೆ ನಾವು ಇದನ್ನು ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ನಮ್ಮ ಈ ಪ್ರತಿಭಟನೆಯ ವಿಚಾರವನ್ನು ಚರ್ಚಿಸಲು ಉಷಾ ಅವರಿಗೆ ಕರೆ ಮಾಡಿದೆವು ಆದರೆ ಅವರು ಕರೆಗೆ ಉತ್ತರಿಸಲಿಲ್ಲ.. ಅವರು ಕೆಲವು ಒತ್ತಡದಲ್ಲಿದ್ದಾರೆ ಎಂದು ನಮಗೆ ಅನಿಸುತ್ತಿದೆ” ಎಂದು ಕುಸ್ತಿಪಟು ವಿನೇಶ್ ಫೋಗಟ್ ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿರುವ ಬಜರಂಗ್ ಪುನಿಯಾ, ನ್ಯಾಯಕ್ಕಾಗಿ ನಾವು ಮೂರು ತಿಂಗಳಿನಿಂದ ಕಾಯುತ್ತಿದ್ದೇವೆ ಎಂದು ಹೇಳಿದರು.

”ಪ್ರಧಾನಿ ಮೋದಿ ಅವರು ‘ಬೇಟಿ ಬಚಾವೋ’ ಮತ್ತು ‘ಬೇಟಿ ಪಢಾವೋ’ ಬಗ್ಗೆ ಮಾತನಾಡುತ್ತಾರೆ ಮತ್ತು ಪ್ರತಿಯೊಬ್ಬರ ‘ಮನ್ ಕಿ ಬಾತ್’ ಕೇಳುತ್ತಾರೆ. ನಮ್ಮ ‘ಮನ್ ಕಿ ಬಾತ್’ ಕೇಳಲು ಆಗುವುದಿಲ್ಲವೇ? ನಾವು ಪದಕಗಳನ್ನು ಗೆದ್ದಾಗ ನಮ್ಮನ್ನು ಅವರ ಮನೆಗೆ ಆಹ್ವಾನಿಸುತ್ತಾರೆ ಮತ್ತು ನಮಗೆ ಗೌರವವನ್ನು ನೀಡುತ್ತಾರೆ ಮತ್ತು ನಮ್ಮನ್ನು ಅವರ ಹೆಣ್ಣುಮಕ್ಕಳು ಎಂದು ಕರೆಯುತ್ತಾರೆ. ಇಂದು, ಅವರು ನಮ್ಮ ‘ಮನ್ ಕಿ ಬಾತ್’ ಅನ್ನು ಕೇಳಬೇಕೆಂದು ನಾವು ಅವರಿಗೆ ಮನವಿ ಮಾಡುತ್ತೇವೆ” ಎಂದು ರಿಯೊ ಗೇಮ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಸುದ್ದಿಗಾರರಿಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...