Homeಮುಖಪುಟಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ಸಾರ್ವಜನಿಕ ಪ್ರತಿಭಟನೆ ನಡೆಸುತ್ತಿರುವುದನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಖ್ಯಸ್ಥೆ ಪಿಟಿ ಉಷಾ ಟೀಕಿಸಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಮತ್ತು ದೀಪಕ್ ಪುನಿಯಾ ಅವರು ಬಿಜೆಪಿ ಸಂಸದ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ತಮ್ಮ ದೂರಿನ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ತುರ್ತಾಗಿ ಕ್ರಮಕೈಗೊಳ್ಳುವಂತೆ ಉಷಾ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಟಿ ಉಷಾ ಅವರು, ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಟೀಕಿಸಿದ್ದಾರೆ.

”ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಅವರು ಈ ರೀತಿ ಪ್ರತಿಭಟನೆ ಮಾಡುತ್ತಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಉಷಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಉಷಾ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಸ್ತಿಪಟುಗಳು, ಅವರ ಬೆಂಬಲಕ್ಕಾಗಿ ನಾವು ಕಾಯುತ್ತಿದ್ದೆವು. ಆದರೆ ಅವರ ಈ ಹೇಳಿಕೆಗಳಿಂದ ನಮಗೆ ನೋವಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು ಸಾಕ್ಷಿ ಮಲಿಕ್, ”ಪಿಟಿ ಉಷಾ ಅವರ ಹೇಳಿಕೆಯಿಂದ ನಮಗೆ ನೋವಾಗಿದೆ. ಸ್ವತಃ ಮಹಿಳೆಯಾಗಿದ್ದರೂ ಅವರು ನಮಗೆ ಬೆಂಬಲ ನೀಡುತ್ತಿಲ್ಲ. ನಾವು ಏನು ಅಶಿಸ್ತು ಮಾಡಿದ್ದೇವೆ? ನಾವು ಇಲ್ಲಿ ಶಾಂತಿಯುತವಾಗಿ ಕುಳಿತಿದ್ದೇವೆ. ನಮಗೆ ನ್ಯಾಯ ಸಿಕ್ಕಿದ್ದರೆ ನಾವು ಇದನ್ನು ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ನಮ್ಮ ಈ ಪ್ರತಿಭಟನೆಯ ವಿಚಾರವನ್ನು ಚರ್ಚಿಸಲು ಉಷಾ ಅವರಿಗೆ ಕರೆ ಮಾಡಿದೆವು ಆದರೆ ಅವರು ಕರೆಗೆ ಉತ್ತರಿಸಲಿಲ್ಲ.. ಅವರು ಕೆಲವು ಒತ್ತಡದಲ್ಲಿದ್ದಾರೆ ಎಂದು ನಮಗೆ ಅನಿಸುತ್ತಿದೆ” ಎಂದು ಕುಸ್ತಿಪಟು ವಿನೇಶ್ ಫೋಗಟ್ ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿರುವ ಬಜರಂಗ್ ಪುನಿಯಾ, ನ್ಯಾಯಕ್ಕಾಗಿ ನಾವು ಮೂರು ತಿಂಗಳಿನಿಂದ ಕಾಯುತ್ತಿದ್ದೇವೆ ಎಂದು ಹೇಳಿದರು.

”ಪ್ರಧಾನಿ ಮೋದಿ ಅವರು ‘ಬೇಟಿ ಬಚಾವೋ’ ಮತ್ತು ‘ಬೇಟಿ ಪಢಾವೋ’ ಬಗ್ಗೆ ಮಾತನಾಡುತ್ತಾರೆ ಮತ್ತು ಪ್ರತಿಯೊಬ್ಬರ ‘ಮನ್ ಕಿ ಬಾತ್’ ಕೇಳುತ್ತಾರೆ. ನಮ್ಮ ‘ಮನ್ ಕಿ ಬಾತ್’ ಕೇಳಲು ಆಗುವುದಿಲ್ಲವೇ? ನಾವು ಪದಕಗಳನ್ನು ಗೆದ್ದಾಗ ನಮ್ಮನ್ನು ಅವರ ಮನೆಗೆ ಆಹ್ವಾನಿಸುತ್ತಾರೆ ಮತ್ತು ನಮಗೆ ಗೌರವವನ್ನು ನೀಡುತ್ತಾರೆ ಮತ್ತು ನಮ್ಮನ್ನು ಅವರ ಹೆಣ್ಣುಮಕ್ಕಳು ಎಂದು ಕರೆಯುತ್ತಾರೆ. ಇಂದು, ಅವರು ನಮ್ಮ ‘ಮನ್ ಕಿ ಬಾತ್’ ಅನ್ನು ಕೇಳಬೇಕೆಂದು ನಾವು ಅವರಿಗೆ ಮನವಿ ಮಾಡುತ್ತೇವೆ” ಎಂದು ರಿಯೊ ಗೇಮ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಸುದ್ದಿಗಾರರಿಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...