Homeಮುಖಪುಟಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ಸಾರ್ವಜನಿಕ ಪ್ರತಿಭಟನೆ ನಡೆಸುತ್ತಿರುವುದನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಖ್ಯಸ್ಥೆ ಪಿಟಿ ಉಷಾ ಟೀಕಿಸಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಮತ್ತು ದೀಪಕ್ ಪುನಿಯಾ ಅವರು ಬಿಜೆಪಿ ಸಂಸದ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ತಮ್ಮ ದೂರಿನ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ತುರ್ತಾಗಿ ಕ್ರಮಕೈಗೊಳ್ಳುವಂತೆ ಉಷಾ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಟಿ ಉಷಾ ಅವರು, ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಟೀಕಿಸಿದ್ದಾರೆ.

”ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಅವರು ಈ ರೀತಿ ಪ್ರತಿಭಟನೆ ಮಾಡುತ್ತಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಉಷಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಉಷಾ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಸ್ತಿಪಟುಗಳು, ಅವರ ಬೆಂಬಲಕ್ಕಾಗಿ ನಾವು ಕಾಯುತ್ತಿದ್ದೆವು. ಆದರೆ ಅವರ ಈ ಹೇಳಿಕೆಗಳಿಂದ ನಮಗೆ ನೋವಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು ಸಾಕ್ಷಿ ಮಲಿಕ್, ”ಪಿಟಿ ಉಷಾ ಅವರ ಹೇಳಿಕೆಯಿಂದ ನಮಗೆ ನೋವಾಗಿದೆ. ಸ್ವತಃ ಮಹಿಳೆಯಾಗಿದ್ದರೂ ಅವರು ನಮಗೆ ಬೆಂಬಲ ನೀಡುತ್ತಿಲ್ಲ. ನಾವು ಏನು ಅಶಿಸ್ತು ಮಾಡಿದ್ದೇವೆ? ನಾವು ಇಲ್ಲಿ ಶಾಂತಿಯುತವಾಗಿ ಕುಳಿತಿದ್ದೇವೆ. ನಮಗೆ ನ್ಯಾಯ ಸಿಕ್ಕಿದ್ದರೆ ನಾವು ಇದನ್ನು ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ನಮ್ಮ ಈ ಪ್ರತಿಭಟನೆಯ ವಿಚಾರವನ್ನು ಚರ್ಚಿಸಲು ಉಷಾ ಅವರಿಗೆ ಕರೆ ಮಾಡಿದೆವು ಆದರೆ ಅವರು ಕರೆಗೆ ಉತ್ತರಿಸಲಿಲ್ಲ.. ಅವರು ಕೆಲವು ಒತ್ತಡದಲ್ಲಿದ್ದಾರೆ ಎಂದು ನಮಗೆ ಅನಿಸುತ್ತಿದೆ” ಎಂದು ಕುಸ್ತಿಪಟು ವಿನೇಶ್ ಫೋಗಟ್ ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿರುವ ಬಜರಂಗ್ ಪುನಿಯಾ, ನ್ಯಾಯಕ್ಕಾಗಿ ನಾವು ಮೂರು ತಿಂಗಳಿನಿಂದ ಕಾಯುತ್ತಿದ್ದೇವೆ ಎಂದು ಹೇಳಿದರು.

”ಪ್ರಧಾನಿ ಮೋದಿ ಅವರು ‘ಬೇಟಿ ಬಚಾವೋ’ ಮತ್ತು ‘ಬೇಟಿ ಪಢಾವೋ’ ಬಗ್ಗೆ ಮಾತನಾಡುತ್ತಾರೆ ಮತ್ತು ಪ್ರತಿಯೊಬ್ಬರ ‘ಮನ್ ಕಿ ಬಾತ್’ ಕೇಳುತ್ತಾರೆ. ನಮ್ಮ ‘ಮನ್ ಕಿ ಬಾತ್’ ಕೇಳಲು ಆಗುವುದಿಲ್ಲವೇ? ನಾವು ಪದಕಗಳನ್ನು ಗೆದ್ದಾಗ ನಮ್ಮನ್ನು ಅವರ ಮನೆಗೆ ಆಹ್ವಾನಿಸುತ್ತಾರೆ ಮತ್ತು ನಮಗೆ ಗೌರವವನ್ನು ನೀಡುತ್ತಾರೆ ಮತ್ತು ನಮ್ಮನ್ನು ಅವರ ಹೆಣ್ಣುಮಕ್ಕಳು ಎಂದು ಕರೆಯುತ್ತಾರೆ. ಇಂದು, ಅವರು ನಮ್ಮ ‘ಮನ್ ಕಿ ಬಾತ್’ ಅನ್ನು ಕೇಳಬೇಕೆಂದು ನಾವು ಅವರಿಗೆ ಮನವಿ ಮಾಡುತ್ತೇವೆ” ಎಂದು ರಿಯೊ ಗೇಮ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಸುದ್ದಿಗಾರರಿಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...