Homeಮುಖಪುಟಯುಪಿ ಉದ್ಯಮಿಯ ಮನೆಗೆ ಐಟಿ ದಾಳಿ: ಇದುವರೆಗೂ ₹ 150 ಕೋಟಿ ಎಣಿಕೆ

ಯುಪಿ ಉದ್ಯಮಿಯ ಮನೆಗೆ ಐಟಿ ದಾಳಿ: ಇದುವರೆಗೂ ₹ 150 ಕೋಟಿ ಎಣಿಕೆ

- Advertisement -
- Advertisement -

ಸುಗಂಧ ದ್ರವ್ಯ ಉದ್ಯಮದ ಭಾಗವಾಗಿರುವ ಕಾನ್ಪುರದ ಉದ್ಯಮಿ ಪಿಯೂಷ್ ಜೈನ್ ಅವರ ಮನೆಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿದ್ದು, ಇದುವರೆಗೆ 150 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಇಲಾಖೆ ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದಾಳಿಯ ಸಮಯದಲ್ಲಿ ತೆಗೆಯಲಾಗಿರುವ ಚಿತ್ರಗಳು ವೈರಲ್ ಆಗಿದ್ದು, ಎರಡು ದೊಡ್ಡ ವಾರ್ಡ್‌ರೋಬ್‌ಗಳಲ್ಲಿ ಹಣವನ್ನು ತುಂಬಿರುವುದು ಇದರಲ್ಲಿ ಕಾಣುತ್ತದೆ. ಎಲ್ಲಾ ಕಟ್ಟುಗಳನ್ನು ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುತ್ತಿ ಹಳದಿ ಟೇಪ್‌ನಿಂದ ಭದ್ರಪಡಿಸಲಾಗಿದೆ. ಫೋಟೋದಲ್ಲಿ 30 ಕ್ಕೂ ಹೆಚ್ಚು ಕಟ್ಟುಗಳು ಗೋಚರಿಸುತ್ತವೆ.

ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಮತ್ತೊಂದು ಚಿತ್ರದಲ್ಲಿ ಐಟಿ ಮತ್ತು ಜಿಎಸ್‌ಟಿ ಅಧಿಕಾರಿಗಳು ಕೋಣೆಯ ಮಧ್ಯದಲ್ಲಿ ಹಣದ ರಾಶಿಗಳ ಸುತ್ತ ಕೂತಿದ್ದು, ಮೂರು ನೋಟು ಎಣಿಸುವ ಯಂತ್ರಗಳ ಕೂಡಾ ಇದೆ. ವಶಪಡಿಸಿಕೊಂಡ ಒಟ್ಟು ಹಣದ ಮೊತ್ತವನ್ನು ಇನ್ನೂ ಎಣಿಕೆ ಮಾಡಲಾಗುತ್ತಿದೆ.

ಗುರುವಾರದಿಂದ ದಾಳಿ ಆರಂಭವಾಗಿದ್ದು, ಇನ್ನೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದ ಕಾನ್ಪುರ, ಮುಂಬೈ ಮತ್ತು ಗುಜರಾತ್‌ನಲ್ಲಿ ದಾಳಿ ನಡೆಯುತ್ತಿವೆ.

ತೆರಿಗೆ ವಂಚನೆಗಾಗಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಅಧಿಕಾರಿಗಳು ಈ ದಾಳಿಗಳನ್ನು ಪ್ರಾರಂಭಿಸಿದ್ದಾರೆ. ವಿವರಗಳನ್ನು ಪತ್ತೆಹಚ್ಚಿದ ನಂತರ, ಆದಾಯ ತೆರಿಗೆ ಇಲಾಖೆಯನ್ನು ಸಹ ದಾಳಿಯಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್‌ಗೆ ಬೆಂಬಲಿಸಲು ವಾರಣಾಸಿಗೆ ತೆರಳಲಿರುವ ಮಮತಾ ಬ್ಯಾನರ್ಜಿ

ನಕಲಿ ರಶೀದಿ ಮೂಲಕ ಮತ್ತು ಇ-ವೇ ಬಿಲ್‌ಗಳಿಲ್ಲದ ಸರಕುಗಳ ರವಾನೆಗೆ ಹಣವನ್ನು ಲಿಂಕ್ ಮಾಡಲಾಗಿದೆ ಎಂದು ಜಿಎಸ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ. ಈ ನಕಲಿ ರಶೀದಿಗಳನ್ನು ಕಾಲ್ಪನಿಕ ಸಂಸ್ಥೆಗಳ ಹೆಸರಿನಲ್ಲಿ ರಚಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಲಾ 50,000 ರೂ.ಗಳ 200 ಕ್ಕೂ ಹೆಚ್ಚು ರಶೀದಿಗಳನ್ನು ಜಿಎಸ್‌ಟಿ ಪಾವತಿಗಳಿಲ್ಲದೆ ರಚಿಸಲಾಗಿದ್ದು, ಇದು ವ್ಯಾಪಾರಿಯ ಗೋದಾಮಿನೊಳಗೆ ನಾಲ್ಕು ಟ್ರಕ್‌ಗಳಲ್ಲಿ ಕಂಡುಬಂದಿವೆ. ಎಲ್ಲಾ ನಾಲ್ಕು ಟ್ರಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...