Homeಮುಖಪುಟಯುಪಿ ಉದ್ಯಮಿಯ ಮನೆಗೆ ಐಟಿ ದಾಳಿ: ಇದುವರೆಗೂ ₹ 150 ಕೋಟಿ ಎಣಿಕೆ

ಯುಪಿ ಉದ್ಯಮಿಯ ಮನೆಗೆ ಐಟಿ ದಾಳಿ: ಇದುವರೆಗೂ ₹ 150 ಕೋಟಿ ಎಣಿಕೆ

- Advertisement -
- Advertisement -

ಸುಗಂಧ ದ್ರವ್ಯ ಉದ್ಯಮದ ಭಾಗವಾಗಿರುವ ಕಾನ್ಪುರದ ಉದ್ಯಮಿ ಪಿಯೂಷ್ ಜೈನ್ ಅವರ ಮನೆಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿದ್ದು, ಇದುವರೆಗೆ 150 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಇಲಾಖೆ ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದಾಳಿಯ ಸಮಯದಲ್ಲಿ ತೆಗೆಯಲಾಗಿರುವ ಚಿತ್ರಗಳು ವೈರಲ್ ಆಗಿದ್ದು, ಎರಡು ದೊಡ್ಡ ವಾರ್ಡ್‌ರೋಬ್‌ಗಳಲ್ಲಿ ಹಣವನ್ನು ತುಂಬಿರುವುದು ಇದರಲ್ಲಿ ಕಾಣುತ್ತದೆ. ಎಲ್ಲಾ ಕಟ್ಟುಗಳನ್ನು ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುತ್ತಿ ಹಳದಿ ಟೇಪ್‌ನಿಂದ ಭದ್ರಪಡಿಸಲಾಗಿದೆ. ಫೋಟೋದಲ್ಲಿ 30 ಕ್ಕೂ ಹೆಚ್ಚು ಕಟ್ಟುಗಳು ಗೋಚರಿಸುತ್ತವೆ.

ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಮತ್ತೊಂದು ಚಿತ್ರದಲ್ಲಿ ಐಟಿ ಮತ್ತು ಜಿಎಸ್‌ಟಿ ಅಧಿಕಾರಿಗಳು ಕೋಣೆಯ ಮಧ್ಯದಲ್ಲಿ ಹಣದ ರಾಶಿಗಳ ಸುತ್ತ ಕೂತಿದ್ದು, ಮೂರು ನೋಟು ಎಣಿಸುವ ಯಂತ್ರಗಳ ಕೂಡಾ ಇದೆ. ವಶಪಡಿಸಿಕೊಂಡ ಒಟ್ಟು ಹಣದ ಮೊತ್ತವನ್ನು ಇನ್ನೂ ಎಣಿಕೆ ಮಾಡಲಾಗುತ್ತಿದೆ.

ಗುರುವಾರದಿಂದ ದಾಳಿ ಆರಂಭವಾಗಿದ್ದು, ಇನ್ನೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದ ಕಾನ್ಪುರ, ಮುಂಬೈ ಮತ್ತು ಗುಜರಾತ್‌ನಲ್ಲಿ ದಾಳಿ ನಡೆಯುತ್ತಿವೆ.

ತೆರಿಗೆ ವಂಚನೆಗಾಗಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಅಧಿಕಾರಿಗಳು ಈ ದಾಳಿಗಳನ್ನು ಪ್ರಾರಂಭಿಸಿದ್ದಾರೆ. ವಿವರಗಳನ್ನು ಪತ್ತೆಹಚ್ಚಿದ ನಂತರ, ಆದಾಯ ತೆರಿಗೆ ಇಲಾಖೆಯನ್ನು ಸಹ ದಾಳಿಯಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್‌ಗೆ ಬೆಂಬಲಿಸಲು ವಾರಣಾಸಿಗೆ ತೆರಳಲಿರುವ ಮಮತಾ ಬ್ಯಾನರ್ಜಿ

ನಕಲಿ ರಶೀದಿ ಮೂಲಕ ಮತ್ತು ಇ-ವೇ ಬಿಲ್‌ಗಳಿಲ್ಲದ ಸರಕುಗಳ ರವಾನೆಗೆ ಹಣವನ್ನು ಲಿಂಕ್ ಮಾಡಲಾಗಿದೆ ಎಂದು ಜಿಎಸ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ. ಈ ನಕಲಿ ರಶೀದಿಗಳನ್ನು ಕಾಲ್ಪನಿಕ ಸಂಸ್ಥೆಗಳ ಹೆಸರಿನಲ್ಲಿ ರಚಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಲಾ 50,000 ರೂ.ಗಳ 200 ಕ್ಕೂ ಹೆಚ್ಚು ರಶೀದಿಗಳನ್ನು ಜಿಎಸ್‌ಟಿ ಪಾವತಿಗಳಿಲ್ಲದೆ ರಚಿಸಲಾಗಿದ್ದು, ಇದು ವ್ಯಾಪಾರಿಯ ಗೋದಾಮಿನೊಳಗೆ ನಾಲ್ಕು ಟ್ರಕ್‌ಗಳಲ್ಲಿ ಕಂಡುಬಂದಿವೆ. ಎಲ್ಲಾ ನಾಲ್ಕು ಟ್ರಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...