Homeಮುಖಪುಟಯುಪಿ ಉದ್ಯಮಿಯ ಮನೆಗೆ ಐಟಿ ದಾಳಿ: ಇದುವರೆಗೂ ₹ 150 ಕೋಟಿ ಎಣಿಕೆ

ಯುಪಿ ಉದ್ಯಮಿಯ ಮನೆಗೆ ಐಟಿ ದಾಳಿ: ಇದುವರೆಗೂ ₹ 150 ಕೋಟಿ ಎಣಿಕೆ

- Advertisement -
- Advertisement -

ಸುಗಂಧ ದ್ರವ್ಯ ಉದ್ಯಮದ ಭಾಗವಾಗಿರುವ ಕಾನ್ಪುರದ ಉದ್ಯಮಿ ಪಿಯೂಷ್ ಜೈನ್ ಅವರ ಮನೆಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿದ್ದು, ಇದುವರೆಗೆ 150 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಇಲಾಖೆ ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದಾಳಿಯ ಸಮಯದಲ್ಲಿ ತೆಗೆಯಲಾಗಿರುವ ಚಿತ್ರಗಳು ವೈರಲ್ ಆಗಿದ್ದು, ಎರಡು ದೊಡ್ಡ ವಾರ್ಡ್‌ರೋಬ್‌ಗಳಲ್ಲಿ ಹಣವನ್ನು ತುಂಬಿರುವುದು ಇದರಲ್ಲಿ ಕಾಣುತ್ತದೆ. ಎಲ್ಲಾ ಕಟ್ಟುಗಳನ್ನು ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುತ್ತಿ ಹಳದಿ ಟೇಪ್‌ನಿಂದ ಭದ್ರಪಡಿಸಲಾಗಿದೆ. ಫೋಟೋದಲ್ಲಿ 30 ಕ್ಕೂ ಹೆಚ್ಚು ಕಟ್ಟುಗಳು ಗೋಚರಿಸುತ್ತವೆ.

ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಮತ್ತೊಂದು ಚಿತ್ರದಲ್ಲಿ ಐಟಿ ಮತ್ತು ಜಿಎಸ್‌ಟಿ ಅಧಿಕಾರಿಗಳು ಕೋಣೆಯ ಮಧ್ಯದಲ್ಲಿ ಹಣದ ರಾಶಿಗಳ ಸುತ್ತ ಕೂತಿದ್ದು, ಮೂರು ನೋಟು ಎಣಿಸುವ ಯಂತ್ರಗಳ ಕೂಡಾ ಇದೆ. ವಶಪಡಿಸಿಕೊಂಡ ಒಟ್ಟು ಹಣದ ಮೊತ್ತವನ್ನು ಇನ್ನೂ ಎಣಿಕೆ ಮಾಡಲಾಗುತ್ತಿದೆ.

ಗುರುವಾರದಿಂದ ದಾಳಿ ಆರಂಭವಾಗಿದ್ದು, ಇನ್ನೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದ ಕಾನ್ಪುರ, ಮುಂಬೈ ಮತ್ತು ಗುಜರಾತ್‌ನಲ್ಲಿ ದಾಳಿ ನಡೆಯುತ್ತಿವೆ.

ತೆರಿಗೆ ವಂಚನೆಗಾಗಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಅಧಿಕಾರಿಗಳು ಈ ದಾಳಿಗಳನ್ನು ಪ್ರಾರಂಭಿಸಿದ್ದಾರೆ. ವಿವರಗಳನ್ನು ಪತ್ತೆಹಚ್ಚಿದ ನಂತರ, ಆದಾಯ ತೆರಿಗೆ ಇಲಾಖೆಯನ್ನು ಸಹ ದಾಳಿಯಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್‌ಗೆ ಬೆಂಬಲಿಸಲು ವಾರಣಾಸಿಗೆ ತೆರಳಲಿರುವ ಮಮತಾ ಬ್ಯಾನರ್ಜಿ

ನಕಲಿ ರಶೀದಿ ಮೂಲಕ ಮತ್ತು ಇ-ವೇ ಬಿಲ್‌ಗಳಿಲ್ಲದ ಸರಕುಗಳ ರವಾನೆಗೆ ಹಣವನ್ನು ಲಿಂಕ್ ಮಾಡಲಾಗಿದೆ ಎಂದು ಜಿಎಸ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ. ಈ ನಕಲಿ ರಶೀದಿಗಳನ್ನು ಕಾಲ್ಪನಿಕ ಸಂಸ್ಥೆಗಳ ಹೆಸರಿನಲ್ಲಿ ರಚಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಲಾ 50,000 ರೂ.ಗಳ 200 ಕ್ಕೂ ಹೆಚ್ಚು ರಶೀದಿಗಳನ್ನು ಜಿಎಸ್‌ಟಿ ಪಾವತಿಗಳಿಲ್ಲದೆ ರಚಿಸಲಾಗಿದ್ದು, ಇದು ವ್ಯಾಪಾರಿಯ ಗೋದಾಮಿನೊಳಗೆ ನಾಲ್ಕು ಟ್ರಕ್‌ಗಳಲ್ಲಿ ಕಂಡುಬಂದಿವೆ. ಎಲ್ಲಾ ನಾಲ್ಕು ಟ್ರಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...