Homeಮುಖಪುಟ'ಇದು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರ..'; ಬಿಜೆಪಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ

‘ಇದು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರ..’; ಬಿಜೆಪಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಕೇಂದ್ರವು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರವಾಗಿದೆ” ಎಂದು ಆಕ್ರೋಶ ಹೊರಹಾಕಿದರು.

ಕಳೆದ ವರ್ಷದಿಂದ ಭಾರೀ ಜನಾಂಗೀಯ ಹಿಂಸಾಚಾರ ಕಂಡಿರುವ ಮಣಿಪುರದ ಪಕ್ಕದ ರಾಜ್ಯವಾದ ಅಸ್ಸಾಂನ ಸಿಲ್ಚಾರ್‌ನಲ್ಲಿ ತನ್ನ ಪಕ್ಷದ ಅಭ್ಯರ್ಥಿಯ ಪರವಾಗಿ ಮಾತನಾಡಿದ ಅವರು “ಪ್ರಧಾನಿ ನರೇಂದ್ರ ಮೋದಿ ನಿಮಗೆ ನ್ಯಾಯ ನೀಡುತ್ತಾರೆ ಎಂದು ನೀವು ಭಾವಿಸುತ್ತೀರಾ” ಎಂದು ಜನರನ್ನು ಪ್ರಶ್ನಿಸಿದರು.

ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬ್ಯಾನರ್ಜಿ, “ಈ ಚುನಾವಣೆ ಭಯಾನಕವಾಗಲಿದೆ. ನೀವು ಈ ರೀತಿಯ ಕಳಂಕಿತ ಚುನಾವಣೆಯನ್ನು ನೋಡಿಲ್ಲ. ಇದು ಏಜೆನ್ಸಿಯ ಸರ್ಕಾರ, ಏಜೆನ್ಸಿಗಾಗಿ ಮತ್ತು ಏಜೆನ್ಸಿಯಿಂದ” ಎಂದು ಹೇಳಿದರು.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವನ್ನು ಕುರಿತು ಮಾತನಾಡಿದ ಅವರು, “ಮೋದಿ ನಿಮಗೆ ನ್ಯಾಯ ಕೊಡುತ್ತಾರೆ ಎಂದು ನೀವು ಭಾವಿಸುತ್ತೀರಾ? ನೀವು ಇದನ್ನು ನಂಬುತ್ತೀರಾ? ನೀವು ಈಗ ಸಾಯುತ್ತಿದ್ದೀರಿ ಎಂದು ನೀವು ಭಾವಿಸಿದರೆ, ನೀವು ಅದನ್ನು ನಂಬಬಹುದು. ಆದರೆ, ಮೋದಿ ಯಾರಿಗಾದರೂ ಏನಾದರೂ ಮಾಡುತ್ತಾರೆ ಎಂಬ ನಂಬಿಕೆಯೂ ಬೇಡ. ಏಕೆಂದರೆ ಇದು ಗಲಭೆಕೋರರ, ದುರುಳರ, ಲೂಟಿಕೋರರ ಸರ್ಕಾರ, ಇದು ಜುಮ್ಲಾಬಾಜ್ ಸರ್ಕಾರ; ಅವರು ಕ್ಷಮೆಗೆ ಅರ್ಹರಲ್ಲ” ಎಂದು ಆಕ್ರೋಶ ಹೊರಹಾಕಿದರು.

ಇಂಡಿಯಾ ಮೈತ್ರಿ ಕುರಿತು ಮಾತನಾಡಿ, “ಒಟ್ಟಾಗಿರುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಮೈತ್ರಿ ಎಂದರೆ ತೃಣಮೂಲ ಕಾಂಗ್ರೆಸ್. ನಾವು ಇಂಡಿಯಾಕ್ಕೆ ದಾರಿ ತೋರಿಸುತ್ತೇವೆ. ಬಂಗಾಳದಲ್ಲಿ ನಾವು ಬಿಜೆಪಿ ವಿರುದ್ಧ ಏಕಾಂಗಿಯಾಗಿ ಹೋರಾಡುತ್ತಿದ್ದೇವೆ. ಕಾಂಗ್ರೆಸ್ ಅಥವಾ ಬಿಜೆಪಿ ಇಲ್ಲ, ಕಾಂಗ್ರೆಸ್ ಅಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತದೆ. ಅಖಿಲ ಭಾರತ ಮಟ್ಟದಲ್ಲಿ ನಾವು ಇಂಡಿಯಾಕ್ಕೆ ನಾಯಕತ್ವವನ್ನು ನೀಡುತ್ತೇವೆ” ಎಂದರು.

ಸಿಲ್ಚಾರ್ ಕ್ಷೇತ್ರದ ಕುರಿತು:

ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ರಾಧೇಶ್ಯಾಮ್ ಬಿಸ್ವಾಸ್ ಅವರು ಸಿಲ್ಚಾರ್ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿಗೆ. 90ರ ದಶಕದವರೆಗೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಸಿಲ್ಚಾರ್, ನಂತರದ ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ.

ಬಿಜೆಪಿಯ ರಾಜ್‌ದೀಪ್ ರಾಯ್ ಹಾಲಿ ಸಂಸದರಾಗಿದ್ದು, ಪಕ್ಷವು ಈಗಾಗಲೇ ಅರ್ಧದಷ್ಟು ಗೆದ್ದಿದೆ ಎಂದು ಪರಿಗಣಿಸಿರುವ ಯುದ್ಧಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಆದಾಗ್ಯೂ, ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಬದಲಾಯಿಸಿದೆ. ಅಸ್ಸಾಂ ಸಚಿವ ಪರಿಮಳ್ ಸುಕ್ಲಬಾದ್ಯ ಅವರನ್ನು ಕಣಕ್ಕಿಳಿಸಲು ಆಯ್ಕೆ ಮಾಡಿದ್ದು, ಅವರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಸೂರ್ಯಕಾಂತ ಸರ್ಕಾರ್ ಅವರನ್ನು ಹೆಸರಿಸಿದೆ.

ಇದನ್ನೂ ಓದಿ; ಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....