Homeಮುಖಪುಟ'ಇದು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರ..'; ಬಿಜೆಪಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ

‘ಇದು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರ..’; ಬಿಜೆಪಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಕೇಂದ್ರವು ಗಲಭೆಕೋರರು, ದಂಗೆಕೋರರು ಮತ್ತು ಲೂಟಿಕೋರರ ಸರ್ಕಾರವಾಗಿದೆ” ಎಂದು ಆಕ್ರೋಶ ಹೊರಹಾಕಿದರು.

ಕಳೆದ ವರ್ಷದಿಂದ ಭಾರೀ ಜನಾಂಗೀಯ ಹಿಂಸಾಚಾರ ಕಂಡಿರುವ ಮಣಿಪುರದ ಪಕ್ಕದ ರಾಜ್ಯವಾದ ಅಸ್ಸಾಂನ ಸಿಲ್ಚಾರ್‌ನಲ್ಲಿ ತನ್ನ ಪಕ್ಷದ ಅಭ್ಯರ್ಥಿಯ ಪರವಾಗಿ ಮಾತನಾಡಿದ ಅವರು “ಪ್ರಧಾನಿ ನರೇಂದ್ರ ಮೋದಿ ನಿಮಗೆ ನ್ಯಾಯ ನೀಡುತ್ತಾರೆ ಎಂದು ನೀವು ಭಾವಿಸುತ್ತೀರಾ” ಎಂದು ಜನರನ್ನು ಪ್ರಶ್ನಿಸಿದರು.

ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬ್ಯಾನರ್ಜಿ, “ಈ ಚುನಾವಣೆ ಭಯಾನಕವಾಗಲಿದೆ. ನೀವು ಈ ರೀತಿಯ ಕಳಂಕಿತ ಚುನಾವಣೆಯನ್ನು ನೋಡಿಲ್ಲ. ಇದು ಏಜೆನ್ಸಿಯ ಸರ್ಕಾರ, ಏಜೆನ್ಸಿಗಾಗಿ ಮತ್ತು ಏಜೆನ್ಸಿಯಿಂದ” ಎಂದು ಹೇಳಿದರು.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವನ್ನು ಕುರಿತು ಮಾತನಾಡಿದ ಅವರು, “ಮೋದಿ ನಿಮಗೆ ನ್ಯಾಯ ಕೊಡುತ್ತಾರೆ ಎಂದು ನೀವು ಭಾವಿಸುತ್ತೀರಾ? ನೀವು ಇದನ್ನು ನಂಬುತ್ತೀರಾ? ನೀವು ಈಗ ಸಾಯುತ್ತಿದ್ದೀರಿ ಎಂದು ನೀವು ಭಾವಿಸಿದರೆ, ನೀವು ಅದನ್ನು ನಂಬಬಹುದು. ಆದರೆ, ಮೋದಿ ಯಾರಿಗಾದರೂ ಏನಾದರೂ ಮಾಡುತ್ತಾರೆ ಎಂಬ ನಂಬಿಕೆಯೂ ಬೇಡ. ಏಕೆಂದರೆ ಇದು ಗಲಭೆಕೋರರ, ದುರುಳರ, ಲೂಟಿಕೋರರ ಸರ್ಕಾರ, ಇದು ಜುಮ್ಲಾಬಾಜ್ ಸರ್ಕಾರ; ಅವರು ಕ್ಷಮೆಗೆ ಅರ್ಹರಲ್ಲ” ಎಂದು ಆಕ್ರೋಶ ಹೊರಹಾಕಿದರು.

ಇಂಡಿಯಾ ಮೈತ್ರಿ ಕುರಿತು ಮಾತನಾಡಿ, “ಒಟ್ಟಾಗಿರುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಮೈತ್ರಿ ಎಂದರೆ ತೃಣಮೂಲ ಕಾಂಗ್ರೆಸ್. ನಾವು ಇಂಡಿಯಾಕ್ಕೆ ದಾರಿ ತೋರಿಸುತ್ತೇವೆ. ಬಂಗಾಳದಲ್ಲಿ ನಾವು ಬಿಜೆಪಿ ವಿರುದ್ಧ ಏಕಾಂಗಿಯಾಗಿ ಹೋರಾಡುತ್ತಿದ್ದೇವೆ. ಕಾಂಗ್ರೆಸ್ ಅಥವಾ ಬಿಜೆಪಿ ಇಲ್ಲ, ಕಾಂಗ್ರೆಸ್ ಅಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತದೆ. ಅಖಿಲ ಭಾರತ ಮಟ್ಟದಲ್ಲಿ ನಾವು ಇಂಡಿಯಾಕ್ಕೆ ನಾಯಕತ್ವವನ್ನು ನೀಡುತ್ತೇವೆ” ಎಂದರು.

ಸಿಲ್ಚಾರ್ ಕ್ಷೇತ್ರದ ಕುರಿತು:

ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ರಾಧೇಶ್ಯಾಮ್ ಬಿಸ್ವಾಸ್ ಅವರು ಸಿಲ್ಚಾರ್ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿಗೆ. 90ರ ದಶಕದವರೆಗೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಸಿಲ್ಚಾರ್, ನಂತರದ ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಜಿದ್ದಾಜಿದ್ದಿನ ಕ್ಷೇತ್ರವಾಗಿದೆ.

ಬಿಜೆಪಿಯ ರಾಜ್‌ದೀಪ್ ರಾಯ್ ಹಾಲಿ ಸಂಸದರಾಗಿದ್ದು, ಪಕ್ಷವು ಈಗಾಗಲೇ ಅರ್ಧದಷ್ಟು ಗೆದ್ದಿದೆ ಎಂದು ಪರಿಗಣಿಸಿರುವ ಯುದ್ಧಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಆದಾಗ್ಯೂ, ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಬದಲಾಯಿಸಿದೆ. ಅಸ್ಸಾಂ ಸಚಿವ ಪರಿಮಳ್ ಸುಕ್ಲಬಾದ್ಯ ಅವರನ್ನು ಕಣಕ್ಕಿಳಿಸಲು ಆಯ್ಕೆ ಮಾಡಿದ್ದು, ಅವರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಸೂರ್ಯಕಾಂತ ಸರ್ಕಾರ್ ಅವರನ್ನು ಹೆಸರಿಸಿದೆ.

ಇದನ್ನೂ ಓದಿ; ಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...