Homeಮುಖಪುಟರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

ರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

- Advertisement -
- Advertisement -

ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಅವರು ಬರೆದ ಪತ್ರದ ಬಗ್ಗೆ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ರೈತ ಆಂದೋಲನದ ಹೆಸರಿನಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಪಂಜಾಬಿನ ಕಾಂಗ್ರೆಸ್‌ ಮುಖ್ಯಮಂತ್ರಿ ರೈತರ ಆಂದೋಲನದ ಬಗ್ಗೆ ವಿವಿಧ ಆತಂಕಗಳನ್ನು ವ್ಯಕ್ತಪಡಿಸುತ್ತಾ ಪ್ರಧಾನಿಗೆ ಬರೆದಿರುವ ಪತ್ರವು, ಹೊಸ ಕಾನೂನನ್ನು ರದ್ದು ಮಾಡಲು ತಮ್ಮ ಜೀವವನ್ನೇ ತ್ಯಾಗ ಮಾಡುತ್ತಿರುವ ರೈತರ ಆಂದೋಲನವನ್ನು ಕೆಣಕುವ ಸಂಚಾಗಿದೆ. ರೈತ ಆಂದೋಲನದ ಹೆಸರಿನಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ 19 ರಿಂದ ಮಾನ್ಸುನ್‌ ಅಧಿವೇಶನ; ಸಂಸತ್‌ ಬಳಿ ಪ್ರತಿಭಟನೆಗೆ ರೈತರು ಸಜ್ಜು!

“ಗಡಿ ರಾಜ್ಯವಾದ ಪಂಜಾಬ್ ಸರ್ಕಾರವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಂಭೀರವಾಗಿರುವ ಮೂಲಕ ಒಕ್ಕೂಟ ಸರ್ಕಾರದ ಸಹಕಾರವನ್ನು ತೆಗೆದುಕೊಳ್ಳುವುದು ಅಸಮಂಜಸವಲ್ಲ. ಆದರೆ ಇದರ ಸೋಗಿನಲ್ಲಿ, ರೈತರ ಚಳವಳಿಯ ಅಪಖ್ಯಾತಿ ಮಾಡುವ ಮತ್ತು ಚುನಾವಣಾ ಹಿತಾಸಕ್ತಿಯ ರಾಜಕೀಯದ ಬಗ್ಗೆ ಜನರಿಗೆ ಅರ್ಥವಾಗುತ್ತದೆ. ಇದನ್ನು ಮಾಡುವುದರಿಂದ ಕಾಂಗ್ರೆಸ್ ಯಾವುದೇ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅಮರಿಂದರ್‌ ಅವರು, ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಐಎಸ್ಐ ಬೆಂಬಲಿತ ಗುಂಪುಗಳ ಗಡಿಯಾಚೆಗಿನ ಬೆದರಿಕೆಯನ್ನು ಉಲ್ಲೇಖಿಸಿ ತಕ್ಷಣವೇ ರೈತರೊಂದಿಗೆ ಮಾತುಕತೆ ಪುನರಾರಂಭಿಸಬೇಕೆಂದು ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದಿದ್ದರು.

ಅಮರಿಂದರ್‌‌‌ ಅವರು ಪತ್ರದಲ್ಲಿ, ಗಡಿಯಾಚೆ ಹೆಚ್ಚುತ್ತಿರುವ ಬೆದರಿಕೆ ಮತ್ತು ಐಎಸ್ಐ ಬೆಂಬಲಿತ ಗುಂಪುಗಳಿಂದ ಹೆಚ್ಚಿದ ಡ್ರೋನ್ ಮತ್ತು ಇತರ ಭಯೋತ್ಪಾದಕ ಚಟುವಟಿಕೆಗಳನ್ನು ಉಲ್ಲೇಖಿಸಿದ್ದರು. ಜೊತೆಗೆ ಅವರೊಂದಿಗೆ ಕೆಲವು ರೈತ ಮುಖಂಡರನ್ನು ಗುರಿಯಾಗಿಸಿ ಖಾಲಿಸ್ತಾನಿ ಸಂಘಟನೆಗಳೂ ಸೇರಿವೆ ಎಂದು ಹೇಳಿದ್ದರು.

ಈ ಶಕ್ತಿಗಳು ಗಡಿಯುದ್ದಕ್ಕೂ ಇರುವ ನಮ್ಮ ಹೆಮ್ಮೆಯ, ಪ್ರಾಮಾಣಿಕ ಮತ್ತು ಕಷ್ಟಪಟ್ಟು ದುಡಿಯುವ ರೈತರ ಭಾವನೆಗಳೊಂದಿಗೆ ಆಟವಾಡಲು ಪ್ರಯತ್ನಿಸಬಹುದು ಎಂದು ಅವರು ಪ್ರಧಾನಿಗೆ ಎಚ್ಚರಿಸಿದ್ದರು.

ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...