Homeಮುಖಪುಟರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

ರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

- Advertisement -
- Advertisement -

ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಅವರು ಬರೆದ ಪತ್ರದ ಬಗ್ಗೆ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ರೈತ ಆಂದೋಲನದ ಹೆಸರಿನಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಪಂಜಾಬಿನ ಕಾಂಗ್ರೆಸ್‌ ಮುಖ್ಯಮಂತ್ರಿ ರೈತರ ಆಂದೋಲನದ ಬಗ್ಗೆ ವಿವಿಧ ಆತಂಕಗಳನ್ನು ವ್ಯಕ್ತಪಡಿಸುತ್ತಾ ಪ್ರಧಾನಿಗೆ ಬರೆದಿರುವ ಪತ್ರವು, ಹೊಸ ಕಾನೂನನ್ನು ರದ್ದು ಮಾಡಲು ತಮ್ಮ ಜೀವವನ್ನೇ ತ್ಯಾಗ ಮಾಡುತ್ತಿರುವ ರೈತರ ಆಂದೋಲನವನ್ನು ಕೆಣಕುವ ಸಂಚಾಗಿದೆ. ರೈತ ಆಂದೋಲನದ ಹೆಸರಿನಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ 19 ರಿಂದ ಮಾನ್ಸುನ್‌ ಅಧಿವೇಶನ; ಸಂಸತ್‌ ಬಳಿ ಪ್ರತಿಭಟನೆಗೆ ರೈತರು ಸಜ್ಜು!

“ಗಡಿ ರಾಜ್ಯವಾದ ಪಂಜಾಬ್ ಸರ್ಕಾರವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಂಭೀರವಾಗಿರುವ ಮೂಲಕ ಒಕ್ಕೂಟ ಸರ್ಕಾರದ ಸಹಕಾರವನ್ನು ತೆಗೆದುಕೊಳ್ಳುವುದು ಅಸಮಂಜಸವಲ್ಲ. ಆದರೆ ಇದರ ಸೋಗಿನಲ್ಲಿ, ರೈತರ ಚಳವಳಿಯ ಅಪಖ್ಯಾತಿ ಮಾಡುವ ಮತ್ತು ಚುನಾವಣಾ ಹಿತಾಸಕ್ತಿಯ ರಾಜಕೀಯದ ಬಗ್ಗೆ ಜನರಿಗೆ ಅರ್ಥವಾಗುತ್ತದೆ. ಇದನ್ನು ಮಾಡುವುದರಿಂದ ಕಾಂಗ್ರೆಸ್ ಯಾವುದೇ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅಮರಿಂದರ್‌ ಅವರು, ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಐಎಸ್ಐ ಬೆಂಬಲಿತ ಗುಂಪುಗಳ ಗಡಿಯಾಚೆಗಿನ ಬೆದರಿಕೆಯನ್ನು ಉಲ್ಲೇಖಿಸಿ ತಕ್ಷಣವೇ ರೈತರೊಂದಿಗೆ ಮಾತುಕತೆ ಪುನರಾರಂಭಿಸಬೇಕೆಂದು ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದಿದ್ದರು.

ಅಮರಿಂದರ್‌‌‌ ಅವರು ಪತ್ರದಲ್ಲಿ, ಗಡಿಯಾಚೆ ಹೆಚ್ಚುತ್ತಿರುವ ಬೆದರಿಕೆ ಮತ್ತು ಐಎಸ್ಐ ಬೆಂಬಲಿತ ಗುಂಪುಗಳಿಂದ ಹೆಚ್ಚಿದ ಡ್ರೋನ್ ಮತ್ತು ಇತರ ಭಯೋತ್ಪಾದಕ ಚಟುವಟಿಕೆಗಳನ್ನು ಉಲ್ಲೇಖಿಸಿದ್ದರು. ಜೊತೆಗೆ ಅವರೊಂದಿಗೆ ಕೆಲವು ರೈತ ಮುಖಂಡರನ್ನು ಗುರಿಯಾಗಿಸಿ ಖಾಲಿಸ್ತಾನಿ ಸಂಘಟನೆಗಳೂ ಸೇರಿವೆ ಎಂದು ಹೇಳಿದ್ದರು.

ಈ ಶಕ್ತಿಗಳು ಗಡಿಯುದ್ದಕ್ಕೂ ಇರುವ ನಮ್ಮ ಹೆಮ್ಮೆಯ, ಪ್ರಾಮಾಣಿಕ ಮತ್ತು ಕಷ್ಟಪಟ್ಟು ದುಡಿಯುವ ರೈತರ ಭಾವನೆಗಳೊಂದಿಗೆ ಆಟವಾಡಲು ಪ್ರಯತ್ನಿಸಬಹುದು ಎಂದು ಅವರು ಪ್ರಧಾನಿಗೆ ಎಚ್ಚರಿಸಿದ್ದರು.

ಇದನ್ನೂ ಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...