Homeಫ್ಯಾಕ್ಟ್‌ಚೆಕ್FACT CHECK : 'ಟಿಪ್ಪು ಸುಲ್ತಾನ್' ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

FACT CHECK : ‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ” ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಈ ವಿಷಯದಲ್ಲಿ ಕೋಮು ದ್ವೇಷದ ಅಂಶವಿರುವುದರಿಂದ ಸತ್ಯಾಸತ್ಯತೆ ಪರಿಶೀಲಿಸಿ, ಅದನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ನಾವು ಮಾಡಿದ್ದೇವೆ.

ಮೊದಲು ನಾವು ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಕುರಿತು ಸಿನಿಮಾ ಮಾಡುವ ಬಗ್ಗೆ ಎಲ್ಲಾದರು ಸುದ್ದಿ ಪ್ರಕಟಗೊಂಡಿದೆಯಾ? ಎಂದು ಹುಡುಕಿದ್ದೇವೆ. ಈ ವೇಳೆ ನಮಗೆ ಆ ಬಗ್ಗೆ ಯಾವುದೇ ಖಚಿತವಾದ ಸುದ್ದಿ ದೊರೆತಿಲ್ಲ. ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಆ ಬಗ್ಗೆ ಸುದ್ದಿ ಪ್ರಕಟಿಸಿರುವುದು ನಮಗೆ ಕಂಡು ಬಂದಿಲ್ಲ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ 22 ನವೆಂಬರ್ 2018ರಂದು ‘ಸೂಫಿ ಸ್ಟುಡಿಯೋ’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ‘Tipu Sultan Trailer Shah Rukh Khan New movie,टीपू सुल्तान, Mysore Tiger’ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಈ ವಿಡಿಯೋವನ್ನು ಪರಿಶೀಲಿಸಿದಾಗ ಆರಂಭದಲ್ಲೇ ಸೂಚನೆಯೊಂದನ್ನು ಹಾಕಿರುವುದು ಕಂಡು ಬಂದಿದೆ. “ಇದು ಅಭಿಮಾನಿ ನಿರ್ಮಿತ ಟ್ರೈಲರ್ ಆಗಿದ್ದು, ಮನೋರಂಜನೆ ಉದ್ದೇಶಗಳಿಗಾಗಿ ಬಳಸಲಾಗಿದೆ. ಈ ವಿಡಿಯೋವನ್ನು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳಿಂದ ಬಳಸಿಕೊಳ್ಳಲಾಗಿದೆ. ವಿಡಿಯೋದ ಎಲ್ಲಾ ಹಕ್ಕುಗಳು ಮಾಲೀಕರಿಗೆ ಸೀಮಿತವಾಗಿದೆ” ಎಂದು ಸೂಚನೆಯಲ್ಲಿ ಹೇಳಲಾಗಿದೆ.

ಹಾಗಾಗಿ, ಬರೋಬ್ಬರಿ 92 ಸಾವಿರ ವೀಕ್ಷಣೆ ಪಡೆದಿರುವ ಈ ವಿಡಿಯೋ ಕೇವಲ ಮನೋರಂಜನೆ ಉದ್ದೇಶಕ್ಕಾಗಿ ಮಾಡಲಾಗಿದೆ. ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಸಿನಿಮಾ ಮಾಡುತ್ತಿರುವ ಬಗೆಗಿನ ಖಚಿತ ಮಾಹಿತಿಯಲ್ಲ ಎನ್ನಬಹುದು.

ಮೇ 8, 2020ರಂದು ‘ಇಂಡಿಯಾ ಟುಡೇ’ ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ “ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆಯೇ?” ಎಂಬ ಶೀರ್ಷಿಕೆಯಲ್ಲಿ ಫ್ಯಾಕ್ಟ್‌ ಚೆಕ್ ನಡೆಸಿ ವರದಿ ಪ್ರಕಟಿಸಿತ್ತು. ಈ ವರದಿಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿ ಸುಳ್ಳು ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ, ನಟ ಶಾರುಖ್ ಖಾನ್ ಅವರು ಟಿಪ್ಪು ಸುಲ್ತಾನ್ ಕುರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ. ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ‘ಟಿಪ್ಪು ಸುಲ್ತಾನ್’ ಎಂಬ ಹೆಸರನ್ನು ಮುಂದಿಟ್ಟುಕೊಂಡು ಶಾರುಖ್ ಅವರನ್ನು ಬಹಿಷ್ಕರಿಸಲು ಹೇಳುವ ಮೂಲಕ ಮುಸ್ಲಿಮರ ವಿರುದ್ದ ದ್ವೇಷ ಹರಡುವ ಪ್ರಯತ್ನ ಮಾಡಿರುವುದು ಗೊತ್ತಾಗಿದೆ. ಅಲ್ಲದೆ, ಇದೇ ಸುಳ್ಳು ಸುದ್ದಿ ಈ ಹಿಂದೆಯೂ ಹರಡಿತ್ತು ಎಂಬುವುದು ದಿನಾಂಕಗಳನ್ನು ಪರಿಶೀಲಿಸಿದಾಗ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...