Homeಫ್ಯಾಕ್ಟ್‌ಚೆಕ್FACT CHECK : 'ಟಿಪ್ಪು ಸುಲ್ತಾನ್' ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

FACT CHECK : ‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ” ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಈ ವಿಷಯದಲ್ಲಿ ಕೋಮು ದ್ವೇಷದ ಅಂಶವಿರುವುದರಿಂದ ಸತ್ಯಾಸತ್ಯತೆ ಪರಿಶೀಲಿಸಿ, ಅದನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ನಾವು ಮಾಡಿದ್ದೇವೆ.

ಮೊದಲು ನಾವು ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಕುರಿತು ಸಿನಿಮಾ ಮಾಡುವ ಬಗ್ಗೆ ಎಲ್ಲಾದರು ಸುದ್ದಿ ಪ್ರಕಟಗೊಂಡಿದೆಯಾ? ಎಂದು ಹುಡುಕಿದ್ದೇವೆ. ಈ ವೇಳೆ ನಮಗೆ ಆ ಬಗ್ಗೆ ಯಾವುದೇ ಖಚಿತವಾದ ಸುದ್ದಿ ದೊರೆತಿಲ್ಲ. ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಆ ಬಗ್ಗೆ ಸುದ್ದಿ ಪ್ರಕಟಿಸಿರುವುದು ನಮಗೆ ಕಂಡು ಬಂದಿಲ್ಲ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ 22 ನವೆಂಬರ್ 2018ರಂದು ‘ಸೂಫಿ ಸ್ಟುಡಿಯೋ’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ‘Tipu Sultan Trailer Shah Rukh Khan New movie,टीपू सुल्तान, Mysore Tiger’ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ದೊರೆತಿದೆ.

ಈ ವಿಡಿಯೋವನ್ನು ಪರಿಶೀಲಿಸಿದಾಗ ಆರಂಭದಲ್ಲೇ ಸೂಚನೆಯೊಂದನ್ನು ಹಾಕಿರುವುದು ಕಂಡು ಬಂದಿದೆ. “ಇದು ಅಭಿಮಾನಿ ನಿರ್ಮಿತ ಟ್ರೈಲರ್ ಆಗಿದ್ದು, ಮನೋರಂಜನೆ ಉದ್ದೇಶಗಳಿಗಾಗಿ ಬಳಸಲಾಗಿದೆ. ಈ ವಿಡಿಯೋವನ್ನು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳಿಂದ ಬಳಸಿಕೊಳ್ಳಲಾಗಿದೆ. ವಿಡಿಯೋದ ಎಲ್ಲಾ ಹಕ್ಕುಗಳು ಮಾಲೀಕರಿಗೆ ಸೀಮಿತವಾಗಿದೆ” ಎಂದು ಸೂಚನೆಯಲ್ಲಿ ಹೇಳಲಾಗಿದೆ.

ಹಾಗಾಗಿ, ಬರೋಬ್ಬರಿ 92 ಸಾವಿರ ವೀಕ್ಷಣೆ ಪಡೆದಿರುವ ಈ ವಿಡಿಯೋ ಕೇವಲ ಮನೋರಂಜನೆ ಉದ್ದೇಶಕ್ಕಾಗಿ ಮಾಡಲಾಗಿದೆ. ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಸಿನಿಮಾ ಮಾಡುತ್ತಿರುವ ಬಗೆಗಿನ ಖಚಿತ ಮಾಹಿತಿಯಲ್ಲ ಎನ್ನಬಹುದು.

ಮೇ 8, 2020ರಂದು ‘ಇಂಡಿಯಾ ಟುಡೇ’ ತನ್ನ ಯುಟ್ಯೂಬ್ ಚಾನೆಲ್‌ನಲ್ಲಿ “ಶಾರುಖ್ ಖಾನ್ ಟಿಪ್ಪು ಸುಲ್ತಾನ್ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆಯೇ?” ಎಂಬ ಶೀರ್ಷಿಕೆಯಲ್ಲಿ ಫ್ಯಾಕ್ಟ್‌ ಚೆಕ್ ನಡೆಸಿ ವರದಿ ಪ್ರಕಟಿಸಿತ್ತು. ಈ ವರದಿಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿ ಸುಳ್ಳು ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ, ನಟ ಶಾರುಖ್ ಖಾನ್ ಅವರು ಟಿಪ್ಪು ಸುಲ್ತಾನ್ ಕುರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ. ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ‘ಟಿಪ್ಪು ಸುಲ್ತಾನ್’ ಎಂಬ ಹೆಸರನ್ನು ಮುಂದಿಟ್ಟುಕೊಂಡು ಶಾರುಖ್ ಅವರನ್ನು ಬಹಿಷ್ಕರಿಸಲು ಹೇಳುವ ಮೂಲಕ ಮುಸ್ಲಿಮರ ವಿರುದ್ದ ದ್ವೇಷ ಹರಡುವ ಪ್ರಯತ್ನ ಮಾಡಿರುವುದು ಗೊತ್ತಾಗಿದೆ. ಅಲ್ಲದೆ, ಇದೇ ಸುಳ್ಳು ಸುದ್ದಿ ಈ ಹಿಂದೆಯೂ ಹರಡಿತ್ತು ಎಂಬುವುದು ದಿನಾಂಕಗಳನ್ನು ಪರಿಶೀಲಿಸಿದಾಗ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...