Homeಕರ್ನಾಟಕಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

- Advertisement -
- Advertisement -

2004 ರಿಂದ 2018 ರವರೆಗೆ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದವರ ಪಟ್ಟಿ ಮತ್ತು ಅವರ ಅಧಿಕಾರಾವಧಿಯಲ್ಲಿ ರಾಜ್ಯದ ಅಭಿವೃದ್ದಿಗಾಗಿ ಮಾಡಲಾದ ಸಾಲದ ಮೊತ್ತವನ್ನು ತಿಳಿಸುವ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮತ್ತು ಮೆಸೇಜ್‌ಗಳನ್ನು ಹರಿಯಬಿಡಲಾಗಿದ್ದು ಮೇಲ್ನೋಟಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಈ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದರು, ಇಷ್ಟು ಸಾಲ ಮಾಡಿ ಪುಕ್ಕಟ್ಟೆಯಾಗಿ ಯಾರು ಬೇಕಾದ್ರು ಕೊಡ್ತಾರೆ, ಜನರ ತಲೆ ಮೇಲೆ ಸಾಲ ಹೊರಿಸಿ ಭಾಗ್ಯಗಳನ್ನು ನೀಡಿದ್ದೇ ನೀಡಿದ್ದು, ಇದೇ ಇವರ ಸಾಧನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

2004 ರಿಂದ 2018ರ ವರಗೆ ಕರ್ನಾಟಕದಲ್ಲಿ ಯಾವ ಮುಖ್ಯಮಂತ್ರಿ ಎಷ್ಟು ಸಾಲ ಮಾಡಿದ್ದರು ಎಂಬ ವಿವರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕೆಳಗಿನಂತೆ ಹಂಚಿಕೊಳ್ಳಲಾಗಿದೆ.

ಎಸ್ ಎಂ ಕೃಷ್ಣ  (1999-2004)
3,590 ಕೋಟಿ ರೂಪಾಯಿ
ಧರಂ ಸಿಂಗ್   (2004-2006)
15,635 ಕೋಟಿ ರೂಪಾಯಿ
ಎಚ್.ಡಿ. ಕುಮಾರಸ್ವಾಮಿ  (2006-2007)
3,545 ಕೋಟಿ ರೂಪಾಯಿ
ಬಿ.ಎಸ್.ಯಡಿಯೂರಪ್ಪ (2008-2011)
25,653 ಕೋಟಿ ರೂಪಾಯಿ
ಸದಾನಂದ ಗೌಡ (2011-2012)
9,464 ಕೋಟಿ ರೂಪಾಯಿ
ಜಗದೀಶ್ ಶೆಟ್ಟರ್ (2012-2013)
13,464 ಕೋಟಿ ರೂಪಾಯಿ
ಸಿದ್ದರಾಮಯ್ಯ (2013-2018)
2,42,000 ಕೋಟಿ ರೂಪಾಯಿ

ಎಸ್ ಎಂ ಕೃಷ್ಣ ಅವರಿಂದ ಜಗದೀಶ್ ಶೆಟ್ಟರ್ ವರೆಗೆ ಮಾಡಿದ ಒಟ್ಟು ಸಾಲ 71,331 ಕೋಟಿ ರೂಪಾಯಿ, ಆದರೆ ಸಿದ್ದರಾಮಯ್ಯ ಮಾಡಿದ ಸಾಲ 2,42,000 ಕೋಟಿ ರೂಪಾಯಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಿದಾಗ, ಇಲ್ಲಿ ಹಂಚಿಕೊಳ್ಳಲಾದ ಅಂಕಿ ಅಂಶಗಳು ತಪ್ಪಾಗಿವೆ ಎಂದು ತಿಳಿದು ಬಂದಿದೆ. ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಹೆಚ್ಚು ಸಾಲ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ನಾವಿಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ,  2013ರ ಮಾರ್ಚ್ ಕೊನೆಗೆ ಇದ್ದ ಸಾಲ, ಅಂದರೆ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಳ್ಳುವ ಮುಂಚಿನ ಸಾಲ ಹಾಗೂ ಅವರ ಅಧಿಕಾರಾವಧಿ ಪೂರ್ಣಗೊಂಡ 2018ರ ಮಾರ್ಚ್ ಕೊನೆಗೆ ಇದ್ದ ಸಾಲ ಎಂದು ವಿಭಾಗಿಸಿ ನೋಡಿದಾಗ ಸ್ಪಷ್ಟ ಚಿತ್ರಣ ಲಭ್ಯವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಸರ್ಕಾರದ ಮೇಲಿನ ಸಾಲದ (ಬಜೆಟ್ ಅಂದಾಜಿನ) ಪ್ರಮಾಣವನ್ನು 2006ರ ಮಾರ್ಚ್ ನಿಂದ ಆಯಾ ವರ್ಷದ ಕೊನೆಗೆ 2023 ವರೆಗೆ ನೀಡಲಾಗಿದೆ. ಅಂದರಂತೆ

2006- 49,586.7 ಕೋಟಿ ರೂಪಾಯಿ
2007- 58,078.5 ಕೋಟಿ ರೂಪಾಯಿ
2008- 60,555.1 ಕೋಟಿ ರೂಪಾಯಿ
2009- 65,218.9 ಕೋಟಿ ರೂಪಾಯಿ
2010- 84,534.5 ಕೋಟಿ ರೂಪಾಯಿ
2011- 93,446.6 ಕೋಟಿ ರೂಪಾಯಿ
2012- 1,06,089.05 ಕೋಟಿ ರೂಪಾಯಿ
2013- 1,12,666.6 ಕೋಟಿ ರೂಪಾಯಿ (ಜಗದೀಶ್ ಶೆಟ್ದರ್ ಮುಖ್ಯಮಂತ್ರಿ ಆಗಿದ್ದ ಅವಧಿಯ ಕೊನೆಗೆ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2014- 1,38,976.5 ಕೋಟಿ ರೂಪಾಯಿ
2015- 1,58,370.2 ಕೋಟಿ ರೂಪಾಯಿ
2016- 1,85,698.4 ಕೋಟಿ ರೂಪಾಯಿ
2017- 2,11,169.1 ಕೋಟಿ ರೂಪಾಯಿ
2018- 2,45,950.6 ಕೋಟಿ ರೂಪಾಯಿ (ಸಿದ್ದರಾಮಯ್ಯ ಅವರ ಅಧಿಕಾರಾವಧಿ ಕೊನೆಯಲ್ಲಿ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2019- 2,86,328.7 ಕೋಟಿ ರೂಪಾಯಿ
2020- 3,38,665..7 ಕೋಟಿ ರೂಪಾಯಿ
2021- 4,21,503.8 ಕೋಟಿ ರೂಪಾಯಿ
2022 (ಪರಿಷ್ಕೃತ ಅಂದಾಜು)- 4,73,437.9 ಕೋಟಿ ರೂಪಾಯಿ
2023 (ಬಜೆಟ್ ಅಂದಾಜು)- 5,35,156.7 ಕೋಟಿ ರೂಪಾಯಿ

ಒಟ್ಟಾರೆಯಾಗಿ ಹೇಳುವುದಾದರೆ, ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ. ಹಾಗೆಯೇ  ಸಿದ್ದರಾಮಯ್ಯ ಅವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಆದರೆ ಈ ರೀತಿ ಅಂಕಿಅಂಶಗಳನ್ನು ನೀಡದೆ ಸುಳ್ಳು ಮತ್ತು ತಪ್ಪಾದ ಅಂಕಿಅಂಶಗಳನ್ನು ಹಂಚಿಕೊಳ್ಳಲಾಗಿದೆ. ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ.

ಇದನ್ನೂ ಓದಿ; ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ವದಂತಿ: ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....