Homeಕರ್ನಾಟಕಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

- Advertisement -
- Advertisement -

2004 ರಿಂದ 2018 ರವರೆಗೆ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದವರ ಪಟ್ಟಿ ಮತ್ತು ಅವರ ಅಧಿಕಾರಾವಧಿಯಲ್ಲಿ ರಾಜ್ಯದ ಅಭಿವೃದ್ದಿಗಾಗಿ ಮಾಡಲಾದ ಸಾಲದ ಮೊತ್ತವನ್ನು ತಿಳಿಸುವ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮತ್ತು ಮೆಸೇಜ್‌ಗಳನ್ನು ಹರಿಯಬಿಡಲಾಗಿದ್ದು ಮೇಲ್ನೋಟಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಈ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದರು, ಇಷ್ಟು ಸಾಲ ಮಾಡಿ ಪುಕ್ಕಟ್ಟೆಯಾಗಿ ಯಾರು ಬೇಕಾದ್ರು ಕೊಡ್ತಾರೆ, ಜನರ ತಲೆ ಮೇಲೆ ಸಾಲ ಹೊರಿಸಿ ಭಾಗ್ಯಗಳನ್ನು ನೀಡಿದ್ದೇ ನೀಡಿದ್ದು, ಇದೇ ಇವರ ಸಾಧನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

2004 ರಿಂದ 2018ರ ವರಗೆ ಕರ್ನಾಟಕದಲ್ಲಿ ಯಾವ ಮುಖ್ಯಮಂತ್ರಿ ಎಷ್ಟು ಸಾಲ ಮಾಡಿದ್ದರು ಎಂಬ ವಿವರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕೆಳಗಿನಂತೆ ಹಂಚಿಕೊಳ್ಳಲಾಗಿದೆ.

ಎಸ್ ಎಂ ಕೃಷ್ಣ  (1999-2004)
3,590 ಕೋಟಿ ರೂಪಾಯಿ
ಧರಂ ಸಿಂಗ್   (2004-2006)
15,635 ಕೋಟಿ ರೂಪಾಯಿ
ಎಚ್.ಡಿ. ಕುಮಾರಸ್ವಾಮಿ  (2006-2007)
3,545 ಕೋಟಿ ರೂಪಾಯಿ
ಬಿ.ಎಸ್.ಯಡಿಯೂರಪ್ಪ (2008-2011)
25,653 ಕೋಟಿ ರೂಪಾಯಿ
ಸದಾನಂದ ಗೌಡ (2011-2012)
9,464 ಕೋಟಿ ರೂಪಾಯಿ
ಜಗದೀಶ್ ಶೆಟ್ಟರ್ (2012-2013)
13,464 ಕೋಟಿ ರೂಪಾಯಿ
ಸಿದ್ದರಾಮಯ್ಯ (2013-2018)
2,42,000 ಕೋಟಿ ರೂಪಾಯಿ

ಎಸ್ ಎಂ ಕೃಷ್ಣ ಅವರಿಂದ ಜಗದೀಶ್ ಶೆಟ್ಟರ್ ವರೆಗೆ ಮಾಡಿದ ಒಟ್ಟು ಸಾಲ 71,331 ಕೋಟಿ ರೂಪಾಯಿ, ಆದರೆ ಸಿದ್ದರಾಮಯ್ಯ ಮಾಡಿದ ಸಾಲ 2,42,000 ಕೋಟಿ ರೂಪಾಯಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಿದಾಗ, ಇಲ್ಲಿ ಹಂಚಿಕೊಳ್ಳಲಾದ ಅಂಕಿ ಅಂಶಗಳು ತಪ್ಪಾಗಿವೆ ಎಂದು ತಿಳಿದು ಬಂದಿದೆ. ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಹೆಚ್ಚು ಸಾಲ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ನಾವಿಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ,  2013ರ ಮಾರ್ಚ್ ಕೊನೆಗೆ ಇದ್ದ ಸಾಲ, ಅಂದರೆ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಳ್ಳುವ ಮುಂಚಿನ ಸಾಲ ಹಾಗೂ ಅವರ ಅಧಿಕಾರಾವಧಿ ಪೂರ್ಣಗೊಂಡ 2018ರ ಮಾರ್ಚ್ ಕೊನೆಗೆ ಇದ್ದ ಸಾಲ ಎಂದು ವಿಭಾಗಿಸಿ ನೋಡಿದಾಗ ಸ್ಪಷ್ಟ ಚಿತ್ರಣ ಲಭ್ಯವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಸರ್ಕಾರದ ಮೇಲಿನ ಸಾಲದ (ಬಜೆಟ್ ಅಂದಾಜಿನ) ಪ್ರಮಾಣವನ್ನು 2006ರ ಮಾರ್ಚ್ ನಿಂದ ಆಯಾ ವರ್ಷದ ಕೊನೆಗೆ 2023 ವರೆಗೆ ನೀಡಲಾಗಿದೆ. ಅಂದರಂತೆ

2006- 49,586.7 ಕೋಟಿ ರೂಪಾಯಿ
2007- 58,078.5 ಕೋಟಿ ರೂಪಾಯಿ
2008- 60,555.1 ಕೋಟಿ ರೂಪಾಯಿ
2009- 65,218.9 ಕೋಟಿ ರೂಪಾಯಿ
2010- 84,534.5 ಕೋಟಿ ರೂಪಾಯಿ
2011- 93,446.6 ಕೋಟಿ ರೂಪಾಯಿ
2012- 1,06,089.05 ಕೋಟಿ ರೂಪಾಯಿ
2013- 1,12,666.6 ಕೋಟಿ ರೂಪಾಯಿ (ಜಗದೀಶ್ ಶೆಟ್ದರ್ ಮುಖ್ಯಮಂತ್ರಿ ಆಗಿದ್ದ ಅವಧಿಯ ಕೊನೆಗೆ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2014- 1,38,976.5 ಕೋಟಿ ರೂಪಾಯಿ
2015- 1,58,370.2 ಕೋಟಿ ರೂಪಾಯಿ
2016- 1,85,698.4 ಕೋಟಿ ರೂಪಾಯಿ
2017- 2,11,169.1 ಕೋಟಿ ರೂಪಾಯಿ
2018- 2,45,950.6 ಕೋಟಿ ರೂಪಾಯಿ (ಸಿದ್ದರಾಮಯ್ಯ ಅವರ ಅಧಿಕಾರಾವಧಿ ಕೊನೆಯಲ್ಲಿ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2019- 2,86,328.7 ಕೋಟಿ ರೂಪಾಯಿ
2020- 3,38,665..7 ಕೋಟಿ ರೂಪಾಯಿ
2021- 4,21,503.8 ಕೋಟಿ ರೂಪಾಯಿ
2022 (ಪರಿಷ್ಕೃತ ಅಂದಾಜು)- 4,73,437.9 ಕೋಟಿ ರೂಪಾಯಿ
2023 (ಬಜೆಟ್ ಅಂದಾಜು)- 5,35,156.7 ಕೋಟಿ ರೂಪಾಯಿ

ಒಟ್ಟಾರೆಯಾಗಿ ಹೇಳುವುದಾದರೆ, ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ. ಹಾಗೆಯೇ  ಸಿದ್ದರಾಮಯ್ಯ ಅವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಆದರೆ ಈ ರೀತಿ ಅಂಕಿಅಂಶಗಳನ್ನು ನೀಡದೆ ಸುಳ್ಳು ಮತ್ತು ತಪ್ಪಾದ ಅಂಕಿಅಂಶಗಳನ್ನು ಹಂಚಿಕೊಳ್ಳಲಾಗಿದೆ. ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ.

ಇದನ್ನೂ ಓದಿ; ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ವದಂತಿ: ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...