Homeಕರ್ನಾಟಕಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

- Advertisement -
- Advertisement -

2004 ರಿಂದ 2018 ರವರೆಗೆ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದವರ ಪಟ್ಟಿ ಮತ್ತು ಅವರ ಅಧಿಕಾರಾವಧಿಯಲ್ಲಿ ರಾಜ್ಯದ ಅಭಿವೃದ್ದಿಗಾಗಿ ಮಾಡಲಾದ ಸಾಲದ ಮೊತ್ತವನ್ನು ತಿಳಿಸುವ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮತ್ತು ಮೆಸೇಜ್‌ಗಳನ್ನು ಹರಿಯಬಿಡಲಾಗಿದ್ದು ಮೇಲ್ನೋಟಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಈ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದರು, ಇಷ್ಟು ಸಾಲ ಮಾಡಿ ಪುಕ್ಕಟ್ಟೆಯಾಗಿ ಯಾರು ಬೇಕಾದ್ರು ಕೊಡ್ತಾರೆ, ಜನರ ತಲೆ ಮೇಲೆ ಸಾಲ ಹೊರಿಸಿ ಭಾಗ್ಯಗಳನ್ನು ನೀಡಿದ್ದೇ ನೀಡಿದ್ದು, ಇದೇ ಇವರ ಸಾಧನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

2004 ರಿಂದ 2018ರ ವರಗೆ ಕರ್ನಾಟಕದಲ್ಲಿ ಯಾವ ಮುಖ್ಯಮಂತ್ರಿ ಎಷ್ಟು ಸಾಲ ಮಾಡಿದ್ದರು ಎಂಬ ವಿವರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕೆಳಗಿನಂತೆ ಹಂಚಿಕೊಳ್ಳಲಾಗಿದೆ.

ಎಸ್ ಎಂ ಕೃಷ್ಣ  (1999-2004)
3,590 ಕೋಟಿ ರೂಪಾಯಿ
ಧರಂ ಸಿಂಗ್   (2004-2006)
15,635 ಕೋಟಿ ರೂಪಾಯಿ
ಎಚ್.ಡಿ. ಕುಮಾರಸ್ವಾಮಿ  (2006-2007)
3,545 ಕೋಟಿ ರೂಪಾಯಿ
ಬಿ.ಎಸ್.ಯಡಿಯೂರಪ್ಪ (2008-2011)
25,653 ಕೋಟಿ ರೂಪಾಯಿ
ಸದಾನಂದ ಗೌಡ (2011-2012)
9,464 ಕೋಟಿ ರೂಪಾಯಿ
ಜಗದೀಶ್ ಶೆಟ್ಟರ್ (2012-2013)
13,464 ಕೋಟಿ ರೂಪಾಯಿ
ಸಿದ್ದರಾಮಯ್ಯ (2013-2018)
2,42,000 ಕೋಟಿ ರೂಪಾಯಿ

ಎಸ್ ಎಂ ಕೃಷ್ಣ ಅವರಿಂದ ಜಗದೀಶ್ ಶೆಟ್ಟರ್ ವರೆಗೆ ಮಾಡಿದ ಒಟ್ಟು ಸಾಲ 71,331 ಕೋಟಿ ರೂಪಾಯಿ, ಆದರೆ ಸಿದ್ದರಾಮಯ್ಯ ಮಾಡಿದ ಸಾಲ 2,42,000 ಕೋಟಿ ರೂಪಾಯಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಿದಾಗ, ಇಲ್ಲಿ ಹಂಚಿಕೊಳ್ಳಲಾದ ಅಂಕಿ ಅಂಶಗಳು ತಪ್ಪಾಗಿವೆ ಎಂದು ತಿಳಿದು ಬಂದಿದೆ. ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಹೆಚ್ಚು ಸಾಲ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ನಾವಿಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ,  2013ರ ಮಾರ್ಚ್ ಕೊನೆಗೆ ಇದ್ದ ಸಾಲ, ಅಂದರೆ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಳ್ಳುವ ಮುಂಚಿನ ಸಾಲ ಹಾಗೂ ಅವರ ಅಧಿಕಾರಾವಧಿ ಪೂರ್ಣಗೊಂಡ 2018ರ ಮಾರ್ಚ್ ಕೊನೆಗೆ ಇದ್ದ ಸಾಲ ಎಂದು ವಿಭಾಗಿಸಿ ನೋಡಿದಾಗ ಸ್ಪಷ್ಟ ಚಿತ್ರಣ ಲಭ್ಯವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಸರ್ಕಾರದ ಮೇಲಿನ ಸಾಲದ (ಬಜೆಟ್ ಅಂದಾಜಿನ) ಪ್ರಮಾಣವನ್ನು 2006ರ ಮಾರ್ಚ್ ನಿಂದ ಆಯಾ ವರ್ಷದ ಕೊನೆಗೆ 2023 ವರೆಗೆ ನೀಡಲಾಗಿದೆ. ಅಂದರಂತೆ

2006- 49,586.7 ಕೋಟಿ ರೂಪಾಯಿ
2007- 58,078.5 ಕೋಟಿ ರೂಪಾಯಿ
2008- 60,555.1 ಕೋಟಿ ರೂಪಾಯಿ
2009- 65,218.9 ಕೋಟಿ ರೂಪಾಯಿ
2010- 84,534.5 ಕೋಟಿ ರೂಪಾಯಿ
2011- 93,446.6 ಕೋಟಿ ರೂಪಾಯಿ
2012- 1,06,089.05 ಕೋಟಿ ರೂಪಾಯಿ
2013- 1,12,666.6 ಕೋಟಿ ರೂಪಾಯಿ (ಜಗದೀಶ್ ಶೆಟ್ದರ್ ಮುಖ್ಯಮಂತ್ರಿ ಆಗಿದ್ದ ಅವಧಿಯ ಕೊನೆಗೆ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2014- 1,38,976.5 ಕೋಟಿ ರೂಪಾಯಿ
2015- 1,58,370.2 ಕೋಟಿ ರೂಪಾಯಿ
2016- 1,85,698.4 ಕೋಟಿ ರೂಪಾಯಿ
2017- 2,11,169.1 ಕೋಟಿ ರೂಪಾಯಿ
2018- 2,45,950.6 ಕೋಟಿ ರೂಪಾಯಿ (ಸಿದ್ದರಾಮಯ್ಯ ಅವರ ಅಧಿಕಾರಾವಧಿ ಕೊನೆಯಲ್ಲಿ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2019- 2,86,328.7 ಕೋಟಿ ರೂಪಾಯಿ
2020- 3,38,665..7 ಕೋಟಿ ರೂಪಾಯಿ
2021- 4,21,503.8 ಕೋಟಿ ರೂಪಾಯಿ
2022 (ಪರಿಷ್ಕೃತ ಅಂದಾಜು)- 4,73,437.9 ಕೋಟಿ ರೂಪಾಯಿ
2023 (ಬಜೆಟ್ ಅಂದಾಜು)- 5,35,156.7 ಕೋಟಿ ರೂಪಾಯಿ

ಒಟ್ಟಾರೆಯಾಗಿ ಹೇಳುವುದಾದರೆ, ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ. ಹಾಗೆಯೇ  ಸಿದ್ದರಾಮಯ್ಯ ಅವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಆದರೆ ಈ ರೀತಿ ಅಂಕಿಅಂಶಗಳನ್ನು ನೀಡದೆ ಸುಳ್ಳು ಮತ್ತು ತಪ್ಪಾದ ಅಂಕಿಅಂಶಗಳನ್ನು ಹಂಚಿಕೊಳ್ಳಲಾಗಿದೆ. ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ.

ಇದನ್ನೂ ಓದಿ; ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ವದಂತಿ: ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...