Homeಕರ್ನಾಟಕಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

- Advertisement -
- Advertisement -

2004 ರಿಂದ 2018 ರವರೆಗೆ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದವರ ಪಟ್ಟಿ ಮತ್ತು ಅವರ ಅಧಿಕಾರಾವಧಿಯಲ್ಲಿ ರಾಜ್ಯದ ಅಭಿವೃದ್ದಿಗಾಗಿ ಮಾಡಲಾದ ಸಾಲದ ಮೊತ್ತವನ್ನು ತಿಳಿಸುವ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮತ್ತು ಮೆಸೇಜ್‌ಗಳನ್ನು ಹರಿಯಬಿಡಲಾಗಿದ್ದು ಮೇಲ್ನೋಟಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಈ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದರು, ಇಷ್ಟು ಸಾಲ ಮಾಡಿ ಪುಕ್ಕಟ್ಟೆಯಾಗಿ ಯಾರು ಬೇಕಾದ್ರು ಕೊಡ್ತಾರೆ, ಜನರ ತಲೆ ಮೇಲೆ ಸಾಲ ಹೊರಿಸಿ ಭಾಗ್ಯಗಳನ್ನು ನೀಡಿದ್ದೇ ನೀಡಿದ್ದು, ಇದೇ ಇವರ ಸಾಧನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

2004 ರಿಂದ 2018ರ ವರಗೆ ಕರ್ನಾಟಕದಲ್ಲಿ ಯಾವ ಮುಖ್ಯಮಂತ್ರಿ ಎಷ್ಟು ಸಾಲ ಮಾಡಿದ್ದರು ಎಂಬ ವಿವರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕೆಳಗಿನಂತೆ ಹಂಚಿಕೊಳ್ಳಲಾಗಿದೆ.

ಎಸ್ ಎಂ ಕೃಷ್ಣ  (1999-2004)
3,590 ಕೋಟಿ ರೂಪಾಯಿ
ಧರಂ ಸಿಂಗ್   (2004-2006)
15,635 ಕೋಟಿ ರೂಪಾಯಿ
ಎಚ್.ಡಿ. ಕುಮಾರಸ್ವಾಮಿ  (2006-2007)
3,545 ಕೋಟಿ ರೂಪಾಯಿ
ಬಿ.ಎಸ್.ಯಡಿಯೂರಪ್ಪ (2008-2011)
25,653 ಕೋಟಿ ರೂಪಾಯಿ
ಸದಾನಂದ ಗೌಡ (2011-2012)
9,464 ಕೋಟಿ ರೂಪಾಯಿ
ಜಗದೀಶ್ ಶೆಟ್ಟರ್ (2012-2013)
13,464 ಕೋಟಿ ರೂಪಾಯಿ
ಸಿದ್ದರಾಮಯ್ಯ (2013-2018)
2,42,000 ಕೋಟಿ ರೂಪಾಯಿ

ಎಸ್ ಎಂ ಕೃಷ್ಣ ಅವರಿಂದ ಜಗದೀಶ್ ಶೆಟ್ಟರ್ ವರೆಗೆ ಮಾಡಿದ ಒಟ್ಟು ಸಾಲ 71,331 ಕೋಟಿ ರೂಪಾಯಿ, ಆದರೆ ಸಿದ್ದರಾಮಯ್ಯ ಮಾಡಿದ ಸಾಲ 2,42,000 ಕೋಟಿ ರೂಪಾಯಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಿದಾಗ, ಇಲ್ಲಿ ಹಂಚಿಕೊಳ್ಳಲಾದ ಅಂಕಿ ಅಂಶಗಳು ತಪ್ಪಾಗಿವೆ ಎಂದು ತಿಳಿದು ಬಂದಿದೆ. ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಹೆಚ್ಚು ಸಾಲ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ನಾವಿಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ,  2013ರ ಮಾರ್ಚ್ ಕೊನೆಗೆ ಇದ್ದ ಸಾಲ, ಅಂದರೆ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಳ್ಳುವ ಮುಂಚಿನ ಸಾಲ ಹಾಗೂ ಅವರ ಅಧಿಕಾರಾವಧಿ ಪೂರ್ಣಗೊಂಡ 2018ರ ಮಾರ್ಚ್ ಕೊನೆಗೆ ಇದ್ದ ಸಾಲ ಎಂದು ವಿಭಾಗಿಸಿ ನೋಡಿದಾಗ ಸ್ಪಷ್ಟ ಚಿತ್ರಣ ಲಭ್ಯವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಸರ್ಕಾರದ ಮೇಲಿನ ಸಾಲದ (ಬಜೆಟ್ ಅಂದಾಜಿನ) ಪ್ರಮಾಣವನ್ನು 2006ರ ಮಾರ್ಚ್ ನಿಂದ ಆಯಾ ವರ್ಷದ ಕೊನೆಗೆ 2023 ವರೆಗೆ ನೀಡಲಾಗಿದೆ. ಅಂದರಂತೆ

2006- 49,586.7 ಕೋಟಿ ರೂಪಾಯಿ
2007- 58,078.5 ಕೋಟಿ ರೂಪಾಯಿ
2008- 60,555.1 ಕೋಟಿ ರೂಪಾಯಿ
2009- 65,218.9 ಕೋಟಿ ರೂಪಾಯಿ
2010- 84,534.5 ಕೋಟಿ ರೂಪಾಯಿ
2011- 93,446.6 ಕೋಟಿ ರೂಪಾಯಿ
2012- 1,06,089.05 ಕೋಟಿ ರೂಪಾಯಿ
2013- 1,12,666.6 ಕೋಟಿ ರೂಪಾಯಿ (ಜಗದೀಶ್ ಶೆಟ್ದರ್ ಮುಖ್ಯಮಂತ್ರಿ ಆಗಿದ್ದ ಅವಧಿಯ ಕೊನೆಗೆ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2014- 1,38,976.5 ಕೋಟಿ ರೂಪಾಯಿ
2015- 1,58,370.2 ಕೋಟಿ ರೂಪಾಯಿ
2016- 1,85,698.4 ಕೋಟಿ ರೂಪಾಯಿ
2017- 2,11,169.1 ಕೋಟಿ ರೂಪಾಯಿ
2018- 2,45,950.6 ಕೋಟಿ ರೂಪಾಯಿ (ಸಿದ್ದರಾಮಯ್ಯ ಅವರ ಅಧಿಕಾರಾವಧಿ ಕೊನೆಯಲ್ಲಿ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2019- 2,86,328.7 ಕೋಟಿ ರೂಪಾಯಿ
2020- 3,38,665..7 ಕೋಟಿ ರೂಪಾಯಿ
2021- 4,21,503.8 ಕೋಟಿ ರೂಪಾಯಿ
2022 (ಪರಿಷ್ಕೃತ ಅಂದಾಜು)- 4,73,437.9 ಕೋಟಿ ರೂಪಾಯಿ
2023 (ಬಜೆಟ್ ಅಂದಾಜು)- 5,35,156.7 ಕೋಟಿ ರೂಪಾಯಿ

ಒಟ್ಟಾರೆಯಾಗಿ ಹೇಳುವುದಾದರೆ, ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ. ಹಾಗೆಯೇ  ಸಿದ್ದರಾಮಯ್ಯ ಅವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಆದರೆ ಈ ರೀತಿ ಅಂಕಿಅಂಶಗಳನ್ನು ನೀಡದೆ ಸುಳ್ಳು ಮತ್ತು ತಪ್ಪಾದ ಅಂಕಿಅಂಶಗಳನ್ನು ಹಂಚಿಕೊಳ್ಳಲಾಗಿದೆ. ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ.

ಇದನ್ನೂ ಓದಿ; ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ವದಂತಿ: ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...