Homeಕರ್ನಾಟಕಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

- Advertisement -
- Advertisement -

2004 ರಿಂದ 2018 ರವರೆಗೆ ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಿರ್ವಹಿಸಿದವರ ಪಟ್ಟಿ ಮತ್ತು ಅವರ ಅಧಿಕಾರಾವಧಿಯಲ್ಲಿ ರಾಜ್ಯದ ಅಭಿವೃದ್ದಿಗಾಗಿ ಮಾಡಲಾದ ಸಾಲದ ಮೊತ್ತವನ್ನು ತಿಳಿಸುವ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮತ್ತು ಮೆಸೇಜ್‌ಗಳನ್ನು ಹರಿಯಬಿಡಲಾಗಿದ್ದು ಮೇಲ್ನೋಟಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಈ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತಿದೆ.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದರು, ಇಷ್ಟು ಸಾಲ ಮಾಡಿ ಪುಕ್ಕಟ್ಟೆಯಾಗಿ ಯಾರು ಬೇಕಾದ್ರು ಕೊಡ್ತಾರೆ, ಜನರ ತಲೆ ಮೇಲೆ ಸಾಲ ಹೊರಿಸಿ ಭಾಗ್ಯಗಳನ್ನು ನೀಡಿದ್ದೇ ನೀಡಿದ್ದು, ಇದೇ ಇವರ ಸಾಧನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

2004 ರಿಂದ 2018ರ ವರಗೆ ಕರ್ನಾಟಕದಲ್ಲಿ ಯಾವ ಮುಖ್ಯಮಂತ್ರಿ ಎಷ್ಟು ಸಾಲ ಮಾಡಿದ್ದರು ಎಂಬ ವಿವರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕೆಳಗಿನಂತೆ ಹಂಚಿಕೊಳ್ಳಲಾಗಿದೆ.

ಎಸ್ ಎಂ ಕೃಷ್ಣ  (1999-2004)
3,590 ಕೋಟಿ ರೂಪಾಯಿ
ಧರಂ ಸಿಂಗ್   (2004-2006)
15,635 ಕೋಟಿ ರೂಪಾಯಿ
ಎಚ್.ಡಿ. ಕುಮಾರಸ್ವಾಮಿ  (2006-2007)
3,545 ಕೋಟಿ ರೂಪಾಯಿ
ಬಿ.ಎಸ್.ಯಡಿಯೂರಪ್ಪ (2008-2011)
25,653 ಕೋಟಿ ರೂಪಾಯಿ
ಸದಾನಂದ ಗೌಡ (2011-2012)
9,464 ಕೋಟಿ ರೂಪಾಯಿ
ಜಗದೀಶ್ ಶೆಟ್ಟರ್ (2012-2013)
13,464 ಕೋಟಿ ರೂಪಾಯಿ
ಸಿದ್ದರಾಮಯ್ಯ (2013-2018)
2,42,000 ಕೋಟಿ ರೂಪಾಯಿ

ಎಸ್ ಎಂ ಕೃಷ್ಣ ಅವರಿಂದ ಜಗದೀಶ್ ಶೆಟ್ಟರ್ ವರೆಗೆ ಮಾಡಿದ ಒಟ್ಟು ಸಾಲ 71,331 ಕೋಟಿ ರೂಪಾಯಿ, ಆದರೆ ಸಿದ್ದರಾಮಯ್ಯ ಮಾಡಿದ ಸಾಲ 2,42,000 ಕೋಟಿ ರೂಪಾಯಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಿದಾಗ, ಇಲ್ಲಿ ಹಂಚಿಕೊಳ್ಳಲಾದ ಅಂಕಿ ಅಂಶಗಳು ತಪ್ಪಾಗಿವೆ ಎಂದು ತಿಳಿದು ಬಂದಿದೆ. ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಹೆಚ್ಚು ಸಾಲ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ನಾವಿಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ,  2013ರ ಮಾರ್ಚ್ ಕೊನೆಗೆ ಇದ್ದ ಸಾಲ, ಅಂದರೆ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಳ್ಳುವ ಮುಂಚಿನ ಸಾಲ ಹಾಗೂ ಅವರ ಅಧಿಕಾರಾವಧಿ ಪೂರ್ಣಗೊಂಡ 2018ರ ಮಾರ್ಚ್ ಕೊನೆಗೆ ಇದ್ದ ಸಾಲ ಎಂದು ವಿಭಾಗಿಸಿ ನೋಡಿದಾಗ ಸ್ಪಷ್ಟ ಚಿತ್ರಣ ಲಭ್ಯವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಸರ್ಕಾರದ ಮೇಲಿನ ಸಾಲದ (ಬಜೆಟ್ ಅಂದಾಜಿನ) ಪ್ರಮಾಣವನ್ನು 2006ರ ಮಾರ್ಚ್ ನಿಂದ ಆಯಾ ವರ್ಷದ ಕೊನೆಗೆ 2023 ವರೆಗೆ ನೀಡಲಾಗಿದೆ. ಅಂದರಂತೆ

2006- 49,586.7 ಕೋಟಿ ರೂಪಾಯಿ
2007- 58,078.5 ಕೋಟಿ ರೂಪಾಯಿ
2008- 60,555.1 ಕೋಟಿ ರೂಪಾಯಿ
2009- 65,218.9 ಕೋಟಿ ರೂಪಾಯಿ
2010- 84,534.5 ಕೋಟಿ ರೂಪಾಯಿ
2011- 93,446.6 ಕೋಟಿ ರೂಪಾಯಿ
2012- 1,06,089.05 ಕೋಟಿ ರೂಪಾಯಿ
2013- 1,12,666.6 ಕೋಟಿ ರೂಪಾಯಿ (ಜಗದೀಶ್ ಶೆಟ್ದರ್ ಮುಖ್ಯಮಂತ್ರಿ ಆಗಿದ್ದ ಅವಧಿಯ ಕೊನೆಗೆ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2014- 1,38,976.5 ಕೋಟಿ ರೂಪಾಯಿ
2015- 1,58,370.2 ಕೋಟಿ ರೂಪಾಯಿ
2016- 1,85,698.4 ಕೋಟಿ ರೂಪಾಯಿ
2017- 2,11,169.1 ಕೋಟಿ ರೂಪಾಯಿ
2018- 2,45,950.6 ಕೋಟಿ ರೂಪಾಯಿ (ಸಿದ್ದರಾಮಯ್ಯ ಅವರ ಅಧಿಕಾರಾವಧಿ ಕೊನೆಯಲ್ಲಿ ಕರ್ನಾಟಕ ರಾಜ್ಯದ ಮೇಲಿದ್ದ ಒಟ್ಟು ಸಾಲ)
2019- 2,86,328.7 ಕೋಟಿ ರೂಪಾಯಿ
2020- 3,38,665..7 ಕೋಟಿ ರೂಪಾಯಿ
2021- 4,21,503.8 ಕೋಟಿ ರೂಪಾಯಿ
2022 (ಪರಿಷ್ಕೃತ ಅಂದಾಜು)- 4,73,437.9 ಕೋಟಿ ರೂಪಾಯಿ
2023 (ಬಜೆಟ್ ಅಂದಾಜು)- 5,35,156.7 ಕೋಟಿ ರೂಪಾಯಿ

ಒಟ್ಟಾರೆಯಾಗಿ ಹೇಳುವುದಾದರೆ, ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ. ಹಾಗೆಯೇ  ಸಿದ್ದರಾಮಯ್ಯ ಅವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಆದರೆ ಈ ರೀತಿ ಅಂಕಿಅಂಶಗಳನ್ನು ನೀಡದೆ ಸುಳ್ಳು ಮತ್ತು ತಪ್ಪಾದ ಅಂಕಿಅಂಶಗಳನ್ನು ಹಂಚಿಕೊಳ್ಳಲಾಗಿದೆ. ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ.

ಇದನ್ನೂ ಓದಿ; ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ವದಂತಿ: ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...