Homeಮುಖಪುಟನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆಂಬುದು ಮಿಥ್ಯೆಯಷ್ಟೇ: ಸಿಜೆಐ ರಮಣ

ನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆಂಬುದು ಮಿಥ್ಯೆಯಷ್ಟೇ: ಸಿಜೆಐ ರಮಣ

ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆಗಳು ಹೆಚ್ಚುತ್ತಿವೆ ಎಂದು ಸಿಜೆಐ ಆತಂಕ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

“ನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆ ಎಂಬ ಕಲ್ಪನೆಯು ಮಿಥ್ಯೆಯಷ್ಟೇ. ನ್ಯಾಯಾಂಗ ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಒಂದು ಭಾಗವಷ್ಟೇ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಹೇಳಿದ್ದಾರೆ.

ವಿಜಯವಾಡದ ಸಿದ್ಧಾರ್ಥ ಕಾನೂನು ಕಾಲೇಜಿನಲ್ಲಿ “ಭಾರತೀಯ ನ್ಯಾಯಾಂಗ – ಭವಿಷ್ಯದ ಸವಾಲುಗಳು” ವಿಷಯ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ಇತ್ತೀಚಿನ ದಿನಗಳಲ್ಲಿ, ನ್ಯಾಯಾಂಗ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆಗಳು ಹೆಚ್ಚುತ್ತಿವೆ. ಪಕ್ಷಗಳಿಗೆ ಅನುಕೂಲಕರ ಆದೇಶ ಹೊರಬರದಿದ್ದರೆ ನ್ಯಾಯಾಧೀಶರ ವಿರುದ್ಧ ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಂಘಟಿತವಾಗಿ ದಾಳಿ ನಡೆಸಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಧೀಶರು ತಾವೇ ನ್ಯಾಯಾಧೀಶರನ್ನು ನೇಮಿಸಿಕೊಳ್ಳುತ್ತಾರೆ” ಎಂಬಂತಹ ನುಡಿಗಟ್ಟುಗಳನ್ನು ಪುನರುಚ್ಚರಿಸುವುದು ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿದೆ. ನಾನು ಇದನ್ನು ವ್ಯಾಪಕವಾಗಿ ಪ್ರಚಾರ ಮಾಡಲಾಗುತ್ತಿದೆ. ವಾಸ್ತವವೆಂದರೆ ನ್ಯಾಯಾಂಗವು ನೇಮಕಾತಿ ಪ್ರಕ್ರಿಯೆಯಲ್ಲಿ ಒಂದು ಭಾಗವಷ್ಟೇ” ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.

ಕಾನೂನು ಜಾರಿಗೊಳಿಸುವ ಏಜೆನ್ಸಿಗಳು, ವಿಶೇಷವಾಗಿ ವಿಶೇಷ ಸಂಸ್ಥೆಗಳು, ನ್ಯಾಯಾಂಗದ ಮೇಲಿನ ದುರುದ್ದೇಶಪೂರಿತ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾಗಿದೆ. ನ್ಯಾಯಾಲಯವು ಮಧ್ಯಪ್ರವೇಶಿಸಿ ಆದೇಶಗಳನ್ನು ನೀಡದ ಹೊರತು, ಅಧಿಕಾರಿಗಳು ಸಾಮಾನ್ಯವಾಗಿ ತನಿಖೆಯನ್ನು ಮುಂದುವರಿಸದಿರುವುದು ದುರದೃಷ್ಟಕರ ಎಂದಿದ್ದಾರೆ.

ಹೊಸ ಮಾಧ್ಯಮ ಪರಿಕರಗಳು ಅಗಾಧ ಸಾಮರ್ಥ್ಯವನ್ನು ಹೊಂದಿವೆ, ಆದರೆ ಸರಿ- ತಪ್ಪು, ಒಳ್ಳೆಯದು-ಕೆಟ್ಟದ್ದು, ನೈಜ-ನಕಲಿಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಅಸಮರ್ಥವಾಗಿವೆ. ಪ್ರಕರಣಗಳನ್ನು ನಿರ್ಧರಿಸುವಲ್ಲಿ ಮಾಧ್ಯಮ ಪ್ರಯೋಗಗಳು ಮಾರ್ಗದರ್ಶಿ ಅಂಶವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ಸ್ವಾತಂತ್ರ್ಯ ಅಗತ್ಯವಿದೆ. ಅವರು ನ್ಯಾಯಾಲಯಗಳಿಗೆ ಮಾತ್ರ ಉತ್ತರಿಸುವಂತಾಗಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಹೇಳಿದ್ದಾರೆ.

ಪ್ರಾಸಿಕ್ಯೂಟರ್‌ಗಳು ಸರ್ಕಾರದ ನಿಯಂತ್ರಣದಲ್ಲಿದ್ದಾರೆ. ಆದ್ದರಿಂದ ಅವರು ಸ್ವತಂತ್ರವಾಗಿ ಕಾರ್ಯನಿರ್ವಹಿಸದಿರುವುದು ಆಶ್ಚರ್ಯವೇನಿಲ್ಲ. ಕ್ಷುಲ್ಲಕ ಮತ್ತು ಅರ್ಹವಲ್ಲದ ಪ್ರಕರಣಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಅವರು ಏನನ್ನೂ ಮಾಡುವುದಿಲ್ಲ. ಅವರು ವಿಚಾರಣೆಯ ಸಮಯದಲ್ಲಿ ಸಾಕ್ಷ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾರೆ ಎಂದು ವಿಷಾದಿಸಿದ್ದಾರೆ.

ಆಮೂಲಾಗ್ರ ಬದಲಾವಣೆ ಕೈಗೊಳ್ಳಬೇಕಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ಪ್ರತ್ಯೇಕಿಸಲು, ಅವರ ನೇಮಕಾತಿಗಾಗಿ ಸ್ವತಂತ್ರ ಆಯ್ಕೆ ಸಮಿತಿಯನ್ನು ರಚಿಸಬಹುದು. ಇತರ ನ್ಯಾಯವ್ಯಾಪ್ತಿಗಳ ತುಲನಾತ್ಮಕ ವಿಶ್ಲೇಷಣೆಯ ನಂತರ ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...