Homeಕರ್ನಾಟಕಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

"ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು."

- Advertisement -
- Advertisement -

“ನಾವು ಮರೆತ್ತಿಲ್ಲ. ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‌ ಧರಿಸಿದ ಮಹಿಳೆಯರಿಗೆ ಥಳಿಸಿದವರು ನೀವು.  ಅಂದು ಏಟು ತಿಂದ ಮಹಿಳೆಯರ್‍ಯಾರೂ ಮುಸ್ಲಿಮರಲ್ಲ, ಶೂದ್ರರು” ಎಂದು ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಹೇಳಿದರು.

ಹಿಜಾಬ್‌‌ ಸಂಬಂಧ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಹೆಣ್ಣುಮಕ್ಕಳು, ಶೂದ್ರರು ಓದಬಾರದೆಂದು ಕಾನೂನು ಮಾಡಿದವರು ನೀವು. ಬ್ರಾಹ್ಮಣ ಮಹಿಳೆಯರಿಗೂ ಓದುವ ಅವಕಾಶ ನೀಡದವರು ನೀವು. ಹಿಂದೂ ಕೋಡ್‌ ಬಿಲ್‌ ಮಂಡಿಸಿ ಮಹಿಳೆಯರಿಗೆ ವಿಚ್ಛೇದನಾ ಹಕ್ಕು, ಆಸ್ತಿಯಲ್ಲಿ ಹಕ್ಕು ಕೊಟ್ಟಿದ್ದು ಅಂಬೇಡ್ಕರ್‌. ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ ರವರ ಮನೆಯ ಮುಂದೆ ಧಿಕ್ಕಾರ ಹಾಕಿದವರು ನೀವು” ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳಲ್ಲಿ ಒಂದು ದನಿ ಬರುತ್ತಿದೆ. ನಾವು ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಾಗಾಗಿ ನೀವು ಹಿಜಾಬ್  ಧರಿಸಬಾರದು. ಹಿಜಾಬ್‌ ಧರಿಸಿದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಿದ್ದಾರೆ. ಈ ದೇಶ ಜಾತ್ಯತೀತ ದೇಶ. ಪಾಕಿಸ್ತಾನವಲ್ಲ. ಪಾಕಿಸ್ತಾನ ಧಾರ್ಮಿಕ ದೇಶ. ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ ಎಂದು ಬಾಲನ್‌ ಗುಡುಗಿದರು.

ಇದನ್ನೂ ಓದಿರಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಈ ದೇಶ ಈ ಜನರ ದೇಶ. ಜನರ ಹಕ್ಕುಗಳಿಗೆ ಧಕ್ಕೆ ಮಾಡಬೇಡಿ. ನಿಮ್ಮ ರಾಜಕೀಯ ರಕ್ತದ ಮೇಲೆ, ದ್ವೇಶದ ಮೇಲೆ ನಿಂತಿದೆ. ಗುಜರಾತ್‌ನಲ್ಲಿ ಮುಸ್ಲಿಮರನ್ನು ಕೊಂದಿರಿ. ದಲಿತರು, ಹಿಂದುಳಿದವರನ್ನು ಜೈಲಿಗೆ ತಳ್ಳಿದಿರಿ. ವೈಶ್ಯರು, ಬ್ರಾಹ್ಮಣರು ಅಧಿಕಾರ ಹಿಡಿದು ಐಶಾರಾಮಿ ಜೀವನ ಮಾಡಿದಿರಿ ಎಂದು ವಾಗ್ದಾಳಿ ನಡೆಸಿದರು.

ಹಿಜಾಬ್‌, ಖಿಮರ್‌, ಅಬಯ ಎಂದರೆ ಏನು? ಹಿಜಾಬ್‌‌ ಎಂದರೆ ತಲೆಯ ಮೇಲೆ ಬಟ್ಟೆಯನ್ನು ಧರಿಸಿಕೊಳ್ಳುವುದು. ಖಿಮಾರ್‌ ಅಂದರೆ ಚಕ್ರಾಕಾರದ ಬಟ್ಟೆಯನ್ನು ತಲೆಯ ಮೇಲೆ ಹಾಕಿಕೊಳ್ಳುವುದು. ಅಬಯ ಅಂದರೆ ಇಡೀ ದೇಹದ ಮೇಲೆ ಬಟ್ಟೆಯನ್ನು ಧರಿಸುವುದು ಇಷ್ಟೇ. ಇದರ ಬಗ್ಗೆ ಕುರಾನ್‌ನಲ್ಲಿದೆ, ಶರಯತ್‌ನಲ್ಲಿದೆ. ಸಾಧಾರಣ ಉಡುಗೆ ಇರಬೇಕು. ದೇಹಾಕೃತಿ ಹೊರಗೆ ಕಾಣಬಾರದು ಎಂದು ಇಸ್ಲಾಂ ನಂಬಿದೆ. ಇದನ್ನು 1400 ವರ್ಷಗಳಿಂದ ಇಸ್ಲಾಂ ಅನುಯಾಯಿಗಳು ಅನುಸರಿಸುತ್ತಾ ಬಂದಿದ್ದಾರೆ. ಇದರ ಬಗ್ಗೆ ತಿಳಿಯಬೇಕಾದರೆ ಕುರಾನ್‌ ಓದಬೇಕು. ಚಾಪ್ಟರ್‌ 24 ವರ್ಸಸ್‌ 31 ಓದಿ, 34 ವರ್ಸಸ್‌‌ 59 ಓದಿ. ಇದರಲ್ಲಿ ಹಿಜಾಬ್‌, ಖಿಮೂರ್‌‌, ಹಿಜಾಬ್‌ ಕುರಿತು ವಿವರಗಳಿವೆ. ಇದೊಂದು ಧಾರ್ಮಿಕ ಆಚರಣೆ. ಇದೊಂದು ಧಾರ್ಮಿಕ ‍ವಸ್ತ್ರ. ಅದು ಅವರ ಧಾರ್ಮಿಕ ಹಕ್ಕು ಎಂದು ಪ್ರತಿಪಾದಿಸಿದರು.

ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು. ಮುಸ್ಲಿಂ ಮಹಿಳೆಯರು ತಮ್ಮ ಗುರುತು ಎಂಬಂತೆ ಹಿಜಾಬ್‌ ಧರಿಸುತ್ತಲೇ ಬಂದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಹಜರತ್ ಬೇಗಂ ಥರದ ವೀರ ಮಹಿಳೆಯರೂ ಹಿಜಾಬ್‌ ಧರಿಸಿ ಹೋರಾಡಿದ್ದರು ಎಂದು ಹೇಳಿದರು.

ಇದನ್ನೂ ಓದಿರಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಇರಿ ನಾನು ಕೆಲವು ಟಿಪ್ಪಣಿ ಮಾಡುತ್ತೇನೆ: ನ್ಯಾಯಮೂರ್ತಿ ದೀಕ್ಷಿತ್‌

ಸಿಖ್‌ಗಳು ಶೇ. 1.8 ಇದ್ದಾರೆ. ಇಸ್ಲಾಮಿಯರ ಸಂಖ್ಯೆ ಶೇ. 15ರಷ್ಟು ಇದೆ. ಅಂದರೆ ದೇಶದಲ್ಲಿ ಇಪ್ಪತ್ತು ಕೋಟಿ ಜನರಿದ್ದಾರೆ. ಸಿಖ್‌ಗಳು ಆರ್ಮಿಯಲ್ಲಿ ಗಡ್ಡ ಬಿಟ್ಟಿರುತ್ತಾರೆ. ಟರ್ಬನ್ ಹಾಕಿರುತ್ತಾರೆ. ಅವರನ್ನು ಶಾಲೆಗಳಲ್ಲಿ ಸೇರಿಸಿಕೊಳ್ಳುತ್ತೀರಿ. ಸಿಖ್‌ಗಳು ಗಡ್ಡ ಬಿಡುವುದು, ಮುಸ್ಲಿಮರು ಹಿಜಾಬ್‌ ಧರಿಸುವುದು ಎರಡೂ ಒಂದೇ. ಅವರು ಗಡ್ಡ ಬಿಡಬಹುದು, ಇವರು ಹಿಜಾಬ್ ಹಾಕಬಾರದು. ಹಿಂದೂ ಮಹಿಳೆಯರು ಹಣೆಗೆ ಬಿಂದಿ ಇಡುತ್ತಾರೆ, ಕೈಗೆ ಬಳೆ ಹಾಕುತ್ತಾರೆ.  ಹೂ ಮುಡಿಯುತ್ತಾರೆ. ಸೆರಗು ಹಾಕಿಕೊಳ್ಳುತ್ತಾರೆ. ಅದು ಅವರ ಧಾರ್ಮಿಕ ಹಕ್ಕು ಎಂದು ತಿಳಿಸಿದರು.

ನೀವು ತಂದಿರುವ ಆದೇಶ ಬಾಂಬೇ ಹಾಗೂ ಕೇರಳ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಿದೆ. ಹಿಜಾಬ್‌ ಧರಿಸುವುದು ಧಾರ್ಮಿಕರ ಹಕ್ಕು. ಆ ಧಾರ್ಮಿಕ ಗುರುತನ್ನು ಕೆಡಿಸಬೇಡಿ.

“ಇವರಿಗೂ ಭಯೋತ್ಪಾದನೆ ಸಂಘಟನೆಗೂ ಸಂಬಂಧ ಇದೆಯಾ ಹುಡುಕಿ, ಕಾಲ್ ಡೀಟೆಲ್ ತೆಗೆದುಕೊಳ್ಳಿ” ಎಂದು ಉನ್ನತ ಅಧಿಕಾರಿಗಳಿಗೆ ಹೋಮ್‌ ಮಿನಿಸ್ಟರ್‌ ಆದೇಶ ಮಾಡಿದ್ದಾರಂತೆ. ಇವರನ್ನು (ಹೆಣ್ಣುಮಕ್ಕಳನ್ನು) ಯುಎಪಿಎ ಕಾಯ್ದೆಯಡಿ ಸಿಕ್ಕಿಸಲು ನೀವು ಪ್ಲಾನ್ ಮಾಡ್ತಾ ಇದ್ದೀರಾ. ದೇಶದ್ರೋಹದ ಅಡಿಯಲ್ಲಿ ಬಂಧಿಸಲು ಪ್ಲಾನ್ ಮಾಡ್ತಾ ಇದ್ದೀರಿ. ಇದನ್ನು ಒಪ್ಪುವುದಿಲ್ಲ” ಎಂದರು.

ಇವತ್ತು ಮುಸ್ಲಿಮರ ಮೇಲೆ, ಕ್ರೈಸ್ತರ ಮೇಲೆ, ಕಮ್ಯುನಿಸ್ಟರು, ಕಾರ್ಮಿಕರು, ಆದಿವಾಸಿಗಳ ಮೇಲೆ ಎರಗಿದ್ದೀರಿ. ನಾಳೆ ನೀವು ಸಿಖ್‌ಗಳ ಮೇಲೆ ಬರುತ್ತೀರಿ. ದೇಶವನ್ನು ಕಟ್ಟಿರುವ ಶೇ. 95ರಷ್ಟು ಜನರಿಗೆ ತೊಂದರೆ ಕೊಡುತ್ತಿದ್ದೀರಿ. ಕಾರ್ಮಿಕರು, ರೈತರ ಹಕ್ಕನ್ನು ಕಿತ್ತುಕೊಂಡಿದ್ದೀರಿ. ವ್ಯಾಪಾರಿಗಳ ಹಕ್ಕನ್ನು ಜಿಎಸ್‌ಟಿ ಹಾಕಿ ಕಿತ್ತುಕೊಂಡಿದ್ದೀರಿ. ಜನರ ಹಕ್ಕನ್ನು ಡಿಮಾಟೈಷೇಷನ್‌ ಮಾಡಿ ಕಿತ್ತುಕೊಂಡಿದ್ದೀರಿ. ಏರೋಪ್ಲೇನ್‌, ರೋಡ್‌, ಟೆಲಿಫೋನ್‌ ಎಲ್ಲವನ್ನೂ ಮಾರುತ್ತಿದ್ದೀರಿ. ಇದನ್ನು ಮುಚ್ಚಿಹಾಕಲು ಹಿಜಾಬ್‌ ಎನ್ನುತ್ತಿದ್ದೀರಿ. ಇದು ಸರಿಯಲ್ಲ. ಜನ ನಿಮಗೆ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

  2. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...