Homeಕರ್ನಾಟಕಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

"ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು."

- Advertisement -
- Advertisement -

“ನಾವು ಮರೆತ್ತಿಲ್ಲ. ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‌ ಧರಿಸಿದ ಮಹಿಳೆಯರಿಗೆ ಥಳಿಸಿದವರು ನೀವು.  ಅಂದು ಏಟು ತಿಂದ ಮಹಿಳೆಯರ್‍ಯಾರೂ ಮುಸ್ಲಿಮರಲ್ಲ, ಶೂದ್ರರು” ಎಂದು ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಹೇಳಿದರು.

ಹಿಜಾಬ್‌‌ ಸಂಬಂಧ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಹೆಣ್ಣುಮಕ್ಕಳು, ಶೂದ್ರರು ಓದಬಾರದೆಂದು ಕಾನೂನು ಮಾಡಿದವರು ನೀವು. ಬ್ರಾಹ್ಮಣ ಮಹಿಳೆಯರಿಗೂ ಓದುವ ಅವಕಾಶ ನೀಡದವರು ನೀವು. ಹಿಂದೂ ಕೋಡ್‌ ಬಿಲ್‌ ಮಂಡಿಸಿ ಮಹಿಳೆಯರಿಗೆ ವಿಚ್ಛೇದನಾ ಹಕ್ಕು, ಆಸ್ತಿಯಲ್ಲಿ ಹಕ್ಕು ಕೊಟ್ಟಿದ್ದು ಅಂಬೇಡ್ಕರ್‌. ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ ರವರ ಮನೆಯ ಮುಂದೆ ಧಿಕ್ಕಾರ ಹಾಕಿದವರು ನೀವು” ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳಲ್ಲಿ ಒಂದು ದನಿ ಬರುತ್ತಿದೆ. ನಾವು ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಾಗಾಗಿ ನೀವು ಹಿಜಾಬ್  ಧರಿಸಬಾರದು. ಹಿಜಾಬ್‌ ಧರಿಸಿದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಿದ್ದಾರೆ. ಈ ದೇಶ ಜಾತ್ಯತೀತ ದೇಶ. ಪಾಕಿಸ್ತಾನವಲ್ಲ. ಪಾಕಿಸ್ತಾನ ಧಾರ್ಮಿಕ ದೇಶ. ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ ಎಂದು ಬಾಲನ್‌ ಗುಡುಗಿದರು.

ಇದನ್ನೂ ಓದಿರಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಈ ದೇಶ ಈ ಜನರ ದೇಶ. ಜನರ ಹಕ್ಕುಗಳಿಗೆ ಧಕ್ಕೆ ಮಾಡಬೇಡಿ. ನಿಮ್ಮ ರಾಜಕೀಯ ರಕ್ತದ ಮೇಲೆ, ದ್ವೇಶದ ಮೇಲೆ ನಿಂತಿದೆ. ಗುಜರಾತ್‌ನಲ್ಲಿ ಮುಸ್ಲಿಮರನ್ನು ಕೊಂದಿರಿ. ದಲಿತರು, ಹಿಂದುಳಿದವರನ್ನು ಜೈಲಿಗೆ ತಳ್ಳಿದಿರಿ. ವೈಶ್ಯರು, ಬ್ರಾಹ್ಮಣರು ಅಧಿಕಾರ ಹಿಡಿದು ಐಶಾರಾಮಿ ಜೀವನ ಮಾಡಿದಿರಿ ಎಂದು ವಾಗ್ದಾಳಿ ನಡೆಸಿದರು.

ಹಿಜಾಬ್‌, ಖಿಮರ್‌, ಅಬಯ ಎಂದರೆ ಏನು? ಹಿಜಾಬ್‌‌ ಎಂದರೆ ತಲೆಯ ಮೇಲೆ ಬಟ್ಟೆಯನ್ನು ಧರಿಸಿಕೊಳ್ಳುವುದು. ಖಿಮಾರ್‌ ಅಂದರೆ ಚಕ್ರಾಕಾರದ ಬಟ್ಟೆಯನ್ನು ತಲೆಯ ಮೇಲೆ ಹಾಕಿಕೊಳ್ಳುವುದು. ಅಬಯ ಅಂದರೆ ಇಡೀ ದೇಹದ ಮೇಲೆ ಬಟ್ಟೆಯನ್ನು ಧರಿಸುವುದು ಇಷ್ಟೇ. ಇದರ ಬಗ್ಗೆ ಕುರಾನ್‌ನಲ್ಲಿದೆ, ಶರಯತ್‌ನಲ್ಲಿದೆ. ಸಾಧಾರಣ ಉಡುಗೆ ಇರಬೇಕು. ದೇಹಾಕೃತಿ ಹೊರಗೆ ಕಾಣಬಾರದು ಎಂದು ಇಸ್ಲಾಂ ನಂಬಿದೆ. ಇದನ್ನು 1400 ವರ್ಷಗಳಿಂದ ಇಸ್ಲಾಂ ಅನುಯಾಯಿಗಳು ಅನುಸರಿಸುತ್ತಾ ಬಂದಿದ್ದಾರೆ. ಇದರ ಬಗ್ಗೆ ತಿಳಿಯಬೇಕಾದರೆ ಕುರಾನ್‌ ಓದಬೇಕು. ಚಾಪ್ಟರ್‌ 24 ವರ್ಸಸ್‌ 31 ಓದಿ, 34 ವರ್ಸಸ್‌‌ 59 ಓದಿ. ಇದರಲ್ಲಿ ಹಿಜಾಬ್‌, ಖಿಮೂರ್‌‌, ಹಿಜಾಬ್‌ ಕುರಿತು ವಿವರಗಳಿವೆ. ಇದೊಂದು ಧಾರ್ಮಿಕ ಆಚರಣೆ. ಇದೊಂದು ಧಾರ್ಮಿಕ ‍ವಸ್ತ್ರ. ಅದು ಅವರ ಧಾರ್ಮಿಕ ಹಕ್ಕು ಎಂದು ಪ್ರತಿಪಾದಿಸಿದರು.

ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು. ಮುಸ್ಲಿಂ ಮಹಿಳೆಯರು ತಮ್ಮ ಗುರುತು ಎಂಬಂತೆ ಹಿಜಾಬ್‌ ಧರಿಸುತ್ತಲೇ ಬಂದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಹಜರತ್ ಬೇಗಂ ಥರದ ವೀರ ಮಹಿಳೆಯರೂ ಹಿಜಾಬ್‌ ಧರಿಸಿ ಹೋರಾಡಿದ್ದರು ಎಂದು ಹೇಳಿದರು.

ಇದನ್ನೂ ಓದಿರಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಇರಿ ನಾನು ಕೆಲವು ಟಿಪ್ಪಣಿ ಮಾಡುತ್ತೇನೆ: ನ್ಯಾಯಮೂರ್ತಿ ದೀಕ್ಷಿತ್‌

ಸಿಖ್‌ಗಳು ಶೇ. 1.8 ಇದ್ದಾರೆ. ಇಸ್ಲಾಮಿಯರ ಸಂಖ್ಯೆ ಶೇ. 15ರಷ್ಟು ಇದೆ. ಅಂದರೆ ದೇಶದಲ್ಲಿ ಇಪ್ಪತ್ತು ಕೋಟಿ ಜನರಿದ್ದಾರೆ. ಸಿಖ್‌ಗಳು ಆರ್ಮಿಯಲ್ಲಿ ಗಡ್ಡ ಬಿಟ್ಟಿರುತ್ತಾರೆ. ಟರ್ಬನ್ ಹಾಕಿರುತ್ತಾರೆ. ಅವರನ್ನು ಶಾಲೆಗಳಲ್ಲಿ ಸೇರಿಸಿಕೊಳ್ಳುತ್ತೀರಿ. ಸಿಖ್‌ಗಳು ಗಡ್ಡ ಬಿಡುವುದು, ಮುಸ್ಲಿಮರು ಹಿಜಾಬ್‌ ಧರಿಸುವುದು ಎರಡೂ ಒಂದೇ. ಅವರು ಗಡ್ಡ ಬಿಡಬಹುದು, ಇವರು ಹಿಜಾಬ್ ಹಾಕಬಾರದು. ಹಿಂದೂ ಮಹಿಳೆಯರು ಹಣೆಗೆ ಬಿಂದಿ ಇಡುತ್ತಾರೆ, ಕೈಗೆ ಬಳೆ ಹಾಕುತ್ತಾರೆ.  ಹೂ ಮುಡಿಯುತ್ತಾರೆ. ಸೆರಗು ಹಾಕಿಕೊಳ್ಳುತ್ತಾರೆ. ಅದು ಅವರ ಧಾರ್ಮಿಕ ಹಕ್ಕು ಎಂದು ತಿಳಿಸಿದರು.

ನೀವು ತಂದಿರುವ ಆದೇಶ ಬಾಂಬೇ ಹಾಗೂ ಕೇರಳ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಿದೆ. ಹಿಜಾಬ್‌ ಧರಿಸುವುದು ಧಾರ್ಮಿಕರ ಹಕ್ಕು. ಆ ಧಾರ್ಮಿಕ ಗುರುತನ್ನು ಕೆಡಿಸಬೇಡಿ.

“ಇವರಿಗೂ ಭಯೋತ್ಪಾದನೆ ಸಂಘಟನೆಗೂ ಸಂಬಂಧ ಇದೆಯಾ ಹುಡುಕಿ, ಕಾಲ್ ಡೀಟೆಲ್ ತೆಗೆದುಕೊಳ್ಳಿ” ಎಂದು ಉನ್ನತ ಅಧಿಕಾರಿಗಳಿಗೆ ಹೋಮ್‌ ಮಿನಿಸ್ಟರ್‌ ಆದೇಶ ಮಾಡಿದ್ದಾರಂತೆ. ಇವರನ್ನು (ಹೆಣ್ಣುಮಕ್ಕಳನ್ನು) ಯುಎಪಿಎ ಕಾಯ್ದೆಯಡಿ ಸಿಕ್ಕಿಸಲು ನೀವು ಪ್ಲಾನ್ ಮಾಡ್ತಾ ಇದ್ದೀರಾ. ದೇಶದ್ರೋಹದ ಅಡಿಯಲ್ಲಿ ಬಂಧಿಸಲು ಪ್ಲಾನ್ ಮಾಡ್ತಾ ಇದ್ದೀರಿ. ಇದನ್ನು ಒಪ್ಪುವುದಿಲ್ಲ” ಎಂದರು.

ಇವತ್ತು ಮುಸ್ಲಿಮರ ಮೇಲೆ, ಕ್ರೈಸ್ತರ ಮೇಲೆ, ಕಮ್ಯುನಿಸ್ಟರು, ಕಾರ್ಮಿಕರು, ಆದಿವಾಸಿಗಳ ಮೇಲೆ ಎರಗಿದ್ದೀರಿ. ನಾಳೆ ನೀವು ಸಿಖ್‌ಗಳ ಮೇಲೆ ಬರುತ್ತೀರಿ. ದೇಶವನ್ನು ಕಟ್ಟಿರುವ ಶೇ. 95ರಷ್ಟು ಜನರಿಗೆ ತೊಂದರೆ ಕೊಡುತ್ತಿದ್ದೀರಿ. ಕಾರ್ಮಿಕರು, ರೈತರ ಹಕ್ಕನ್ನು ಕಿತ್ತುಕೊಂಡಿದ್ದೀರಿ. ವ್ಯಾಪಾರಿಗಳ ಹಕ್ಕನ್ನು ಜಿಎಸ್‌ಟಿ ಹಾಕಿ ಕಿತ್ತುಕೊಂಡಿದ್ದೀರಿ. ಜನರ ಹಕ್ಕನ್ನು ಡಿಮಾಟೈಷೇಷನ್‌ ಮಾಡಿ ಕಿತ್ತುಕೊಂಡಿದ್ದೀರಿ. ಏರೋಪ್ಲೇನ್‌, ರೋಡ್‌, ಟೆಲಿಫೋನ್‌ ಎಲ್ಲವನ್ನೂ ಮಾರುತ್ತಿದ್ದೀರಿ. ಇದನ್ನು ಮುಚ್ಚಿಹಾಕಲು ಹಿಜಾಬ್‌ ಎನ್ನುತ್ತಿದ್ದೀರಿ. ಇದು ಸರಿಯಲ್ಲ. ಜನ ನಿಮಗೆ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

  2. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...