Homeಕರ್ನಾಟಕಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

"ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು."

- Advertisement -
- Advertisement -

“ನಾವು ಮರೆತ್ತಿಲ್ಲ. ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‌ ಧರಿಸಿದ ಮಹಿಳೆಯರಿಗೆ ಥಳಿಸಿದವರು ನೀವು.  ಅಂದು ಏಟು ತಿಂದ ಮಹಿಳೆಯರ್‍ಯಾರೂ ಮುಸ್ಲಿಮರಲ್ಲ, ಶೂದ್ರರು” ಎಂದು ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಹೇಳಿದರು.

ಹಿಜಾಬ್‌‌ ಸಂಬಂಧ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಹೆಣ್ಣುಮಕ್ಕಳು, ಶೂದ್ರರು ಓದಬಾರದೆಂದು ಕಾನೂನು ಮಾಡಿದವರು ನೀವು. ಬ್ರಾಹ್ಮಣ ಮಹಿಳೆಯರಿಗೂ ಓದುವ ಅವಕಾಶ ನೀಡದವರು ನೀವು. ಹಿಂದೂ ಕೋಡ್‌ ಬಿಲ್‌ ಮಂಡಿಸಿ ಮಹಿಳೆಯರಿಗೆ ವಿಚ್ಛೇದನಾ ಹಕ್ಕು, ಆಸ್ತಿಯಲ್ಲಿ ಹಕ್ಕು ಕೊಟ್ಟಿದ್ದು ಅಂಬೇಡ್ಕರ್‌. ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ ರವರ ಮನೆಯ ಮುಂದೆ ಧಿಕ್ಕಾರ ಹಾಕಿದವರು ನೀವು” ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳಲ್ಲಿ ಒಂದು ದನಿ ಬರುತ್ತಿದೆ. ನಾವು ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಾಗಾಗಿ ನೀವು ಹಿಜಾಬ್  ಧರಿಸಬಾರದು. ಹಿಜಾಬ್‌ ಧರಿಸಿದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಿದ್ದಾರೆ. ಈ ದೇಶ ಜಾತ್ಯತೀತ ದೇಶ. ಪಾಕಿಸ್ತಾನವಲ್ಲ. ಪಾಕಿಸ್ತಾನ ಧಾರ್ಮಿಕ ದೇಶ. ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ ಎಂದು ಬಾಲನ್‌ ಗುಡುಗಿದರು.

ಇದನ್ನೂ ಓದಿರಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಈ ದೇಶ ಈ ಜನರ ದೇಶ. ಜನರ ಹಕ್ಕುಗಳಿಗೆ ಧಕ್ಕೆ ಮಾಡಬೇಡಿ. ನಿಮ್ಮ ರಾಜಕೀಯ ರಕ್ತದ ಮೇಲೆ, ದ್ವೇಶದ ಮೇಲೆ ನಿಂತಿದೆ. ಗುಜರಾತ್‌ನಲ್ಲಿ ಮುಸ್ಲಿಮರನ್ನು ಕೊಂದಿರಿ. ದಲಿತರು, ಹಿಂದುಳಿದವರನ್ನು ಜೈಲಿಗೆ ತಳ್ಳಿದಿರಿ. ವೈಶ್ಯರು, ಬ್ರಾಹ್ಮಣರು ಅಧಿಕಾರ ಹಿಡಿದು ಐಶಾರಾಮಿ ಜೀವನ ಮಾಡಿದಿರಿ ಎಂದು ವಾಗ್ದಾಳಿ ನಡೆಸಿದರು.

ಹಿಜಾಬ್‌, ಖಿಮರ್‌, ಅಬಯ ಎಂದರೆ ಏನು? ಹಿಜಾಬ್‌‌ ಎಂದರೆ ತಲೆಯ ಮೇಲೆ ಬಟ್ಟೆಯನ್ನು ಧರಿಸಿಕೊಳ್ಳುವುದು. ಖಿಮಾರ್‌ ಅಂದರೆ ಚಕ್ರಾಕಾರದ ಬಟ್ಟೆಯನ್ನು ತಲೆಯ ಮೇಲೆ ಹಾಕಿಕೊಳ್ಳುವುದು. ಅಬಯ ಅಂದರೆ ಇಡೀ ದೇಹದ ಮೇಲೆ ಬಟ್ಟೆಯನ್ನು ಧರಿಸುವುದು ಇಷ್ಟೇ. ಇದರ ಬಗ್ಗೆ ಕುರಾನ್‌ನಲ್ಲಿದೆ, ಶರಯತ್‌ನಲ್ಲಿದೆ. ಸಾಧಾರಣ ಉಡುಗೆ ಇರಬೇಕು. ದೇಹಾಕೃತಿ ಹೊರಗೆ ಕಾಣಬಾರದು ಎಂದು ಇಸ್ಲಾಂ ನಂಬಿದೆ. ಇದನ್ನು 1400 ವರ್ಷಗಳಿಂದ ಇಸ್ಲಾಂ ಅನುಯಾಯಿಗಳು ಅನುಸರಿಸುತ್ತಾ ಬಂದಿದ್ದಾರೆ. ಇದರ ಬಗ್ಗೆ ತಿಳಿಯಬೇಕಾದರೆ ಕುರಾನ್‌ ಓದಬೇಕು. ಚಾಪ್ಟರ್‌ 24 ವರ್ಸಸ್‌ 31 ಓದಿ, 34 ವರ್ಸಸ್‌‌ 59 ಓದಿ. ಇದರಲ್ಲಿ ಹಿಜಾಬ್‌, ಖಿಮೂರ್‌‌, ಹಿಜಾಬ್‌ ಕುರಿತು ವಿವರಗಳಿವೆ. ಇದೊಂದು ಧಾರ್ಮಿಕ ಆಚರಣೆ. ಇದೊಂದು ಧಾರ್ಮಿಕ ‍ವಸ್ತ್ರ. ಅದು ಅವರ ಧಾರ್ಮಿಕ ಹಕ್ಕು ಎಂದು ಪ್ರತಿಪಾದಿಸಿದರು.

ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು. ಮುಸ್ಲಿಂ ಮಹಿಳೆಯರು ತಮ್ಮ ಗುರುತು ಎಂಬಂತೆ ಹಿಜಾಬ್‌ ಧರಿಸುತ್ತಲೇ ಬಂದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಹಜರತ್ ಬೇಗಂ ಥರದ ವೀರ ಮಹಿಳೆಯರೂ ಹಿಜಾಬ್‌ ಧರಿಸಿ ಹೋರಾಡಿದ್ದರು ಎಂದು ಹೇಳಿದರು.

ಇದನ್ನೂ ಓದಿರಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಇರಿ ನಾನು ಕೆಲವು ಟಿಪ್ಪಣಿ ಮಾಡುತ್ತೇನೆ: ನ್ಯಾಯಮೂರ್ತಿ ದೀಕ್ಷಿತ್‌

ಸಿಖ್‌ಗಳು ಶೇ. 1.8 ಇದ್ದಾರೆ. ಇಸ್ಲಾಮಿಯರ ಸಂಖ್ಯೆ ಶೇ. 15ರಷ್ಟು ಇದೆ. ಅಂದರೆ ದೇಶದಲ್ಲಿ ಇಪ್ಪತ್ತು ಕೋಟಿ ಜನರಿದ್ದಾರೆ. ಸಿಖ್‌ಗಳು ಆರ್ಮಿಯಲ್ಲಿ ಗಡ್ಡ ಬಿಟ್ಟಿರುತ್ತಾರೆ. ಟರ್ಬನ್ ಹಾಕಿರುತ್ತಾರೆ. ಅವರನ್ನು ಶಾಲೆಗಳಲ್ಲಿ ಸೇರಿಸಿಕೊಳ್ಳುತ್ತೀರಿ. ಸಿಖ್‌ಗಳು ಗಡ್ಡ ಬಿಡುವುದು, ಮುಸ್ಲಿಮರು ಹಿಜಾಬ್‌ ಧರಿಸುವುದು ಎರಡೂ ಒಂದೇ. ಅವರು ಗಡ್ಡ ಬಿಡಬಹುದು, ಇವರು ಹಿಜಾಬ್ ಹಾಕಬಾರದು. ಹಿಂದೂ ಮಹಿಳೆಯರು ಹಣೆಗೆ ಬಿಂದಿ ಇಡುತ್ತಾರೆ, ಕೈಗೆ ಬಳೆ ಹಾಕುತ್ತಾರೆ.  ಹೂ ಮುಡಿಯುತ್ತಾರೆ. ಸೆರಗು ಹಾಕಿಕೊಳ್ಳುತ್ತಾರೆ. ಅದು ಅವರ ಧಾರ್ಮಿಕ ಹಕ್ಕು ಎಂದು ತಿಳಿಸಿದರು.

ನೀವು ತಂದಿರುವ ಆದೇಶ ಬಾಂಬೇ ಹಾಗೂ ಕೇರಳ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಿದೆ. ಹಿಜಾಬ್‌ ಧರಿಸುವುದು ಧಾರ್ಮಿಕರ ಹಕ್ಕು. ಆ ಧಾರ್ಮಿಕ ಗುರುತನ್ನು ಕೆಡಿಸಬೇಡಿ.

“ಇವರಿಗೂ ಭಯೋತ್ಪಾದನೆ ಸಂಘಟನೆಗೂ ಸಂಬಂಧ ಇದೆಯಾ ಹುಡುಕಿ, ಕಾಲ್ ಡೀಟೆಲ್ ತೆಗೆದುಕೊಳ್ಳಿ” ಎಂದು ಉನ್ನತ ಅಧಿಕಾರಿಗಳಿಗೆ ಹೋಮ್‌ ಮಿನಿಸ್ಟರ್‌ ಆದೇಶ ಮಾಡಿದ್ದಾರಂತೆ. ಇವರನ್ನು (ಹೆಣ್ಣುಮಕ್ಕಳನ್ನು) ಯುಎಪಿಎ ಕಾಯ್ದೆಯಡಿ ಸಿಕ್ಕಿಸಲು ನೀವು ಪ್ಲಾನ್ ಮಾಡ್ತಾ ಇದ್ದೀರಾ. ದೇಶದ್ರೋಹದ ಅಡಿಯಲ್ಲಿ ಬಂಧಿಸಲು ಪ್ಲಾನ್ ಮಾಡ್ತಾ ಇದ್ದೀರಿ. ಇದನ್ನು ಒಪ್ಪುವುದಿಲ್ಲ” ಎಂದರು.

ಇವತ್ತು ಮುಸ್ಲಿಮರ ಮೇಲೆ, ಕ್ರೈಸ್ತರ ಮೇಲೆ, ಕಮ್ಯುನಿಸ್ಟರು, ಕಾರ್ಮಿಕರು, ಆದಿವಾಸಿಗಳ ಮೇಲೆ ಎರಗಿದ್ದೀರಿ. ನಾಳೆ ನೀವು ಸಿಖ್‌ಗಳ ಮೇಲೆ ಬರುತ್ತೀರಿ. ದೇಶವನ್ನು ಕಟ್ಟಿರುವ ಶೇ. 95ರಷ್ಟು ಜನರಿಗೆ ತೊಂದರೆ ಕೊಡುತ್ತಿದ್ದೀರಿ. ಕಾರ್ಮಿಕರು, ರೈತರ ಹಕ್ಕನ್ನು ಕಿತ್ತುಕೊಂಡಿದ್ದೀರಿ. ವ್ಯಾಪಾರಿಗಳ ಹಕ್ಕನ್ನು ಜಿಎಸ್‌ಟಿ ಹಾಕಿ ಕಿತ್ತುಕೊಂಡಿದ್ದೀರಿ. ಜನರ ಹಕ್ಕನ್ನು ಡಿಮಾಟೈಷೇಷನ್‌ ಮಾಡಿ ಕಿತ್ತುಕೊಂಡಿದ್ದೀರಿ. ಏರೋಪ್ಲೇನ್‌, ರೋಡ್‌, ಟೆಲಿಫೋನ್‌ ಎಲ್ಲವನ್ನೂ ಮಾರುತ್ತಿದ್ದೀರಿ. ಇದನ್ನು ಮುಚ್ಚಿಹಾಕಲು ಹಿಜಾಬ್‌ ಎನ್ನುತ್ತಿದ್ದೀರಿ. ಇದು ಸರಿಯಲ್ಲ. ಜನ ನಿಮಗೆ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

  2. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...