Homeಕರ್ನಾಟಕಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

"ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು."

- Advertisement -
- Advertisement -

“ನಾವು ಮರೆತ್ತಿಲ್ಲ. ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‌ ಧರಿಸಿದ ಮಹಿಳೆಯರಿಗೆ ಥಳಿಸಿದವರು ನೀವು.  ಅಂದು ಏಟು ತಿಂದ ಮಹಿಳೆಯರ್‍ಯಾರೂ ಮುಸ್ಲಿಮರಲ್ಲ, ಶೂದ್ರರು” ಎಂದು ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಹೇಳಿದರು.

ಹಿಜಾಬ್‌‌ ಸಂಬಂಧ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಹೆಣ್ಣುಮಕ್ಕಳು, ಶೂದ್ರರು ಓದಬಾರದೆಂದು ಕಾನೂನು ಮಾಡಿದವರು ನೀವು. ಬ್ರಾಹ್ಮಣ ಮಹಿಳೆಯರಿಗೂ ಓದುವ ಅವಕಾಶ ನೀಡದವರು ನೀವು. ಹಿಂದೂ ಕೋಡ್‌ ಬಿಲ್‌ ಮಂಡಿಸಿ ಮಹಿಳೆಯರಿಗೆ ವಿಚ್ಛೇದನಾ ಹಕ್ಕು, ಆಸ್ತಿಯಲ್ಲಿ ಹಕ್ಕು ಕೊಟ್ಟಿದ್ದು ಅಂಬೇಡ್ಕರ್‌. ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ ರವರ ಮನೆಯ ಮುಂದೆ ಧಿಕ್ಕಾರ ಹಾಕಿದವರು ನೀವು” ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳಲ್ಲಿ ಒಂದು ದನಿ ಬರುತ್ತಿದೆ. ನಾವು ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಾಗಾಗಿ ನೀವು ಹಿಜಾಬ್  ಧರಿಸಬಾರದು. ಹಿಜಾಬ್‌ ಧರಿಸಿದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಿದ್ದಾರೆ. ಈ ದೇಶ ಜಾತ್ಯತೀತ ದೇಶ. ಪಾಕಿಸ್ತಾನವಲ್ಲ. ಪಾಕಿಸ್ತಾನ ಧಾರ್ಮಿಕ ದೇಶ. ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ ಎಂದು ಬಾಲನ್‌ ಗುಡುಗಿದರು.

ಇದನ್ನೂ ಓದಿರಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಈ ದೇಶ ಈ ಜನರ ದೇಶ. ಜನರ ಹಕ್ಕುಗಳಿಗೆ ಧಕ್ಕೆ ಮಾಡಬೇಡಿ. ನಿಮ್ಮ ರಾಜಕೀಯ ರಕ್ತದ ಮೇಲೆ, ದ್ವೇಶದ ಮೇಲೆ ನಿಂತಿದೆ. ಗುಜರಾತ್‌ನಲ್ಲಿ ಮುಸ್ಲಿಮರನ್ನು ಕೊಂದಿರಿ. ದಲಿತರು, ಹಿಂದುಳಿದವರನ್ನು ಜೈಲಿಗೆ ತಳ್ಳಿದಿರಿ. ವೈಶ್ಯರು, ಬ್ರಾಹ್ಮಣರು ಅಧಿಕಾರ ಹಿಡಿದು ಐಶಾರಾಮಿ ಜೀವನ ಮಾಡಿದಿರಿ ಎಂದು ವಾಗ್ದಾಳಿ ನಡೆಸಿದರು.

ಹಿಜಾಬ್‌, ಖಿಮರ್‌, ಅಬಯ ಎಂದರೆ ಏನು? ಹಿಜಾಬ್‌‌ ಎಂದರೆ ತಲೆಯ ಮೇಲೆ ಬಟ್ಟೆಯನ್ನು ಧರಿಸಿಕೊಳ್ಳುವುದು. ಖಿಮಾರ್‌ ಅಂದರೆ ಚಕ್ರಾಕಾರದ ಬಟ್ಟೆಯನ್ನು ತಲೆಯ ಮೇಲೆ ಹಾಕಿಕೊಳ್ಳುವುದು. ಅಬಯ ಅಂದರೆ ಇಡೀ ದೇಹದ ಮೇಲೆ ಬಟ್ಟೆಯನ್ನು ಧರಿಸುವುದು ಇಷ್ಟೇ. ಇದರ ಬಗ್ಗೆ ಕುರಾನ್‌ನಲ್ಲಿದೆ, ಶರಯತ್‌ನಲ್ಲಿದೆ. ಸಾಧಾರಣ ಉಡುಗೆ ಇರಬೇಕು. ದೇಹಾಕೃತಿ ಹೊರಗೆ ಕಾಣಬಾರದು ಎಂದು ಇಸ್ಲಾಂ ನಂಬಿದೆ. ಇದನ್ನು 1400 ವರ್ಷಗಳಿಂದ ಇಸ್ಲಾಂ ಅನುಯಾಯಿಗಳು ಅನುಸರಿಸುತ್ತಾ ಬಂದಿದ್ದಾರೆ. ಇದರ ಬಗ್ಗೆ ತಿಳಿಯಬೇಕಾದರೆ ಕುರಾನ್‌ ಓದಬೇಕು. ಚಾಪ್ಟರ್‌ 24 ವರ್ಸಸ್‌ 31 ಓದಿ, 34 ವರ್ಸಸ್‌‌ 59 ಓದಿ. ಇದರಲ್ಲಿ ಹಿಜಾಬ್‌, ಖಿಮೂರ್‌‌, ಹಿಜಾಬ್‌ ಕುರಿತು ವಿವರಗಳಿವೆ. ಇದೊಂದು ಧಾರ್ಮಿಕ ಆಚರಣೆ. ಇದೊಂದು ಧಾರ್ಮಿಕ ‍ವಸ್ತ್ರ. ಅದು ಅವರ ಧಾರ್ಮಿಕ ಹಕ್ಕು ಎಂದು ಪ್ರತಿಪಾದಿಸಿದರು.

ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು. ಮುಸ್ಲಿಂ ಮಹಿಳೆಯರು ತಮ್ಮ ಗುರುತು ಎಂಬಂತೆ ಹಿಜಾಬ್‌ ಧರಿಸುತ್ತಲೇ ಬಂದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಹಜರತ್ ಬೇಗಂ ಥರದ ವೀರ ಮಹಿಳೆಯರೂ ಹಿಜಾಬ್‌ ಧರಿಸಿ ಹೋರಾಡಿದ್ದರು ಎಂದು ಹೇಳಿದರು.

ಇದನ್ನೂ ಓದಿರಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಇರಿ ನಾನು ಕೆಲವು ಟಿಪ್ಪಣಿ ಮಾಡುತ್ತೇನೆ: ನ್ಯಾಯಮೂರ್ತಿ ದೀಕ್ಷಿತ್‌

ಸಿಖ್‌ಗಳು ಶೇ. 1.8 ಇದ್ದಾರೆ. ಇಸ್ಲಾಮಿಯರ ಸಂಖ್ಯೆ ಶೇ. 15ರಷ್ಟು ಇದೆ. ಅಂದರೆ ದೇಶದಲ್ಲಿ ಇಪ್ಪತ್ತು ಕೋಟಿ ಜನರಿದ್ದಾರೆ. ಸಿಖ್‌ಗಳು ಆರ್ಮಿಯಲ್ಲಿ ಗಡ್ಡ ಬಿಟ್ಟಿರುತ್ತಾರೆ. ಟರ್ಬನ್ ಹಾಕಿರುತ್ತಾರೆ. ಅವರನ್ನು ಶಾಲೆಗಳಲ್ಲಿ ಸೇರಿಸಿಕೊಳ್ಳುತ್ತೀರಿ. ಸಿಖ್‌ಗಳು ಗಡ್ಡ ಬಿಡುವುದು, ಮುಸ್ಲಿಮರು ಹಿಜಾಬ್‌ ಧರಿಸುವುದು ಎರಡೂ ಒಂದೇ. ಅವರು ಗಡ್ಡ ಬಿಡಬಹುದು, ಇವರು ಹಿಜಾಬ್ ಹಾಕಬಾರದು. ಹಿಂದೂ ಮಹಿಳೆಯರು ಹಣೆಗೆ ಬಿಂದಿ ಇಡುತ್ತಾರೆ, ಕೈಗೆ ಬಳೆ ಹಾಕುತ್ತಾರೆ.  ಹೂ ಮುಡಿಯುತ್ತಾರೆ. ಸೆರಗು ಹಾಕಿಕೊಳ್ಳುತ್ತಾರೆ. ಅದು ಅವರ ಧಾರ್ಮಿಕ ಹಕ್ಕು ಎಂದು ತಿಳಿಸಿದರು.

ನೀವು ತಂದಿರುವ ಆದೇಶ ಬಾಂಬೇ ಹಾಗೂ ಕೇರಳ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಿದೆ. ಹಿಜಾಬ್‌ ಧರಿಸುವುದು ಧಾರ್ಮಿಕರ ಹಕ್ಕು. ಆ ಧಾರ್ಮಿಕ ಗುರುತನ್ನು ಕೆಡಿಸಬೇಡಿ.

“ಇವರಿಗೂ ಭಯೋತ್ಪಾದನೆ ಸಂಘಟನೆಗೂ ಸಂಬಂಧ ಇದೆಯಾ ಹುಡುಕಿ, ಕಾಲ್ ಡೀಟೆಲ್ ತೆಗೆದುಕೊಳ್ಳಿ” ಎಂದು ಉನ್ನತ ಅಧಿಕಾರಿಗಳಿಗೆ ಹೋಮ್‌ ಮಿನಿಸ್ಟರ್‌ ಆದೇಶ ಮಾಡಿದ್ದಾರಂತೆ. ಇವರನ್ನು (ಹೆಣ್ಣುಮಕ್ಕಳನ್ನು) ಯುಎಪಿಎ ಕಾಯ್ದೆಯಡಿ ಸಿಕ್ಕಿಸಲು ನೀವು ಪ್ಲಾನ್ ಮಾಡ್ತಾ ಇದ್ದೀರಾ. ದೇಶದ್ರೋಹದ ಅಡಿಯಲ್ಲಿ ಬಂಧಿಸಲು ಪ್ಲಾನ್ ಮಾಡ್ತಾ ಇದ್ದೀರಿ. ಇದನ್ನು ಒಪ್ಪುವುದಿಲ್ಲ” ಎಂದರು.

ಇವತ್ತು ಮುಸ್ಲಿಮರ ಮೇಲೆ, ಕ್ರೈಸ್ತರ ಮೇಲೆ, ಕಮ್ಯುನಿಸ್ಟರು, ಕಾರ್ಮಿಕರು, ಆದಿವಾಸಿಗಳ ಮೇಲೆ ಎರಗಿದ್ದೀರಿ. ನಾಳೆ ನೀವು ಸಿಖ್‌ಗಳ ಮೇಲೆ ಬರುತ್ತೀರಿ. ದೇಶವನ್ನು ಕಟ್ಟಿರುವ ಶೇ. 95ರಷ್ಟು ಜನರಿಗೆ ತೊಂದರೆ ಕೊಡುತ್ತಿದ್ದೀರಿ. ಕಾರ್ಮಿಕರು, ರೈತರ ಹಕ್ಕನ್ನು ಕಿತ್ತುಕೊಂಡಿದ್ದೀರಿ. ವ್ಯಾಪಾರಿಗಳ ಹಕ್ಕನ್ನು ಜಿಎಸ್‌ಟಿ ಹಾಕಿ ಕಿತ್ತುಕೊಂಡಿದ್ದೀರಿ. ಜನರ ಹಕ್ಕನ್ನು ಡಿಮಾಟೈಷೇಷನ್‌ ಮಾಡಿ ಕಿತ್ತುಕೊಂಡಿದ್ದೀರಿ. ಏರೋಪ್ಲೇನ್‌, ರೋಡ್‌, ಟೆಲಿಫೋನ್‌ ಎಲ್ಲವನ್ನೂ ಮಾರುತ್ತಿದ್ದೀರಿ. ಇದನ್ನು ಮುಚ್ಚಿಹಾಕಲು ಹಿಜಾಬ್‌ ಎನ್ನುತ್ತಿದ್ದೀರಿ. ಇದು ಸರಿಯಲ್ಲ. ಜನ ನಿಮಗೆ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

  2. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...