Homeಕರ್ನಾಟಕಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

- Advertisement -
- Advertisement -

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಈ ನಡೆಯಿಂದ ಕೆಂಡವಾಗಿರುವ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ” ಎಂದಿದೆ.

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕಿನ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...