Homeಕರ್ನಾಟಕಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

- Advertisement -
- Advertisement -

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಈ ನಡೆಯಿಂದ ಕೆಂಡವಾಗಿರುವ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ” ಎಂದಿದೆ.

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕಿನ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ”ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

”ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.

”ಯಡಿಯೂರಪ್ಪನವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

”ದಿನಬೆಳಗಾದರೆ ಯಡಿಯೂರಪ್ಪ, ಕಟೀಲ್, ಅಶೋಕ್ ಎಲ್ಲರೂ ಒಂದೊಂದು ವ್ಯಂಗದ ಮಾತು ಆಡುತ್ತಿದ್ದಾರೆ. ವಿರೋಧ ಪಕ್ಷವಾಗಿ ರಾಜಕೀಯವಾಗಿ ಟೀಕೆ ಮಾಡಿ ನಮ್ಮನ್ನು ತಿದ್ದಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನೀವು ಕೊಟ್ಟ ಮಾತಿನಂತೆ ಅಚ್ಚೆದಿನ ಬಂದಿಲ್ಲ, ಹೀಗಾಗಿ ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ನಿಮ್ಮ ಅಧ್ಯಕ್ಷರಾದ ನಡ್ಡಾ ಹಾಗೂ ಪ್ರಧಾನಿ ವಿರುದ್ಧ ಮೊದಲು ಪ್ರತಿಭಟನೆ ಮಾಡಿ. ನಾವು ಕೇಂದ್ರದ ಬಡ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ” ಎಂದರು.

”ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಬಡವರ ಹೊಟ್ಟೆ ತುಂಬುವ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕಾರಣದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.

”ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ. ಕೇಂದ್ರ ಸರ್ಕಾರ ಅಂದು ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...