Homeಮುಖಪುಟವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಸಿಎಂ ಸಿದ್ದರಾಮಯ್ಯ

ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಧರ್ಮ-ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು; ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಗಾಂಧೀಜಿಯವರ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು” ಎಂದರು.

“ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತು ನೂರಕ್ಕೆ ನೂರರಷ್ಟು ಸತ್ಯ. ಮನುಷ್ಯ-ಮನುಷ್ಯರ ನಡುವೆ ಸಹಿಷ್ಣುತೆ, ಸೌಹಾರ್ದತೆ ರೂಢಿಸಿಕೊಳ್ಳದಿದ್ದರೆ ಜಗತ್ತು ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ” ಎಂದು ಅವರು ಹೇಳಿದರು.

“ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲ್ಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ, ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ, ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ” ಎಂದರು ಸಿಎಂ ಬೇಸರ ವ್ಯಕ್ತಪಡಿಸಿದರು.

“ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ” ಎಂದರು.

“ದೇಶದ ಶೇ.85 ರಷ್ಟು ಆಸ್ತಿ ಶೇ.1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ.
ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ” ಎಂದು ಹೇಳಿದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್, ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷರಾದ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ತಂದೆ-ಮಗನ ವಿರುದ್ಧ 2,144 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...