Homeಸಿನಿಮಾಕ್ರೀಡೆಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

- Advertisement -
- Advertisement -

ಭಾರತ ಕ್ರಿಕೇಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್, ಒಬ್ಬರ ಧರ್ಮದ ಕಾರಣಕ್ಕೆ ತಾರತಮ್ಯ ಮಾಡುವುದು ಕೂಡಾ ಜನಾಂಗೀಯ ನಿಂದನೆಯೇ ಆಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಜನಾಂಗೀಯತೆಯ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಮಾತನಾಡುತ್ತಾ, “ಇದು ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ, ಒಬ್ಬ ವ್ಯಕ್ತಿಯು ಅವನ / ಅವಳ ಧರ್ಮದ ಆಧಾರದ ಮೇಲೆ ಕೂಡಾ ಜನಾಂಗೀಯ ನಿಂದನೆಗೆ ಒಳಗಾಗಬಹುದು” ಎಂದು ಇರ್ಫಾನ್ ಪಠಾನ್ ಹೇಳಿದ್ದಾರೆ.

“ವರ್ಣಭೇದ ನೀತಿ ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ. ಬೇರೆ ನಂಬಿಕೆ ಹೊಂದಿರುವ ಕಾರಣಕ್ಕಾಗಿ ನಿಮಗೆ ಮನೆಯನ್ನು ಖರೀದಿಸಿಲು ಸಮಾಜ ಅವಕಾಶ ನೀಡುವುದಿಲ್ಲ ಎಂದಾದರೆ ಅದು ಕೂಡಾ ಜನಾಂಗೀಯತೆಯೆ ಆಗಿದೆ” ಎಂದು ಪಠಾಣ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಇದು ಒಂದು ಅವಲೋಕನವಾಗಿದ್ದು ಇದನ್ನು ಯಾರಾದರು ನಿರಾಕರಿಸಬಹುದೆಂದು ನಾನು ಭಾವಿಸುವುದಿಲ್ಲ” ಎಂದು ಪಠಾಣ್ ತನ್ನ ಟ್ವೀಟ್ ಅನ್ನು ವಿವರಿಸುತ್ತಾ ಪಿಟಿಐಗೆ ತಿಳಿಸಿದ್ದಾರೆ.

ಅಮೆರಿಕಾದ ಜಾರ್ಜ್‌ ಫ್ಲಾಯ್ಡ್ ಹತ್ಯೆಯ ಹಿನ್ನೆಲೆಯಲ್ಲಿ, ಹಲವಾರು ಅಂತರರಾಷ್ಟ್ರೀಯ ಕ್ರಿಕೆಟಿಗರು ಆಟದಲ್ಲಿ ತಮಗಾದ ವರ್ಣಭೇದ ನೀತಿಯ ಕುರಿತು ಮಾತನಾಡಿದ್ದಾರೆ.

2014 ರ ಐಪಿಎಲ್ ಸಂದರ್ಭದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಜನಾಂಗೀಯವಾಗಿ ನಿಂದಿಸಿದ್ದಾರೆ ಎಂದು ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಡ್ಯಾರೆನ್ ಸ್ಯಾಮಿ ಆರೋಪಿಸಿದ್ದಾರೆ.

2014 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಪಠಾಣ್ ಅವರು ಇಂತಹ ಘಟನೆಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

“ಅಂತಹದ್ದೇನಾದರೂ ಸಂಭವಿಸಿದ್ದರೆ ಅದು ಗಮನಕ್ಕೆ ಬರುತ್ತಿತ್ತು ಅಥವಾ ಈ ವಿಷಯದ ಬಗ್ಗೆ ತಂಡದ ಚರ್ಚೆ ನಡೆಯುತ್ತಿತ್ತು. ಅಂತಹ ಯಾವುದೇ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ. ಸ್ಯಾಮಿ ಅವರ ಅಭಿಪ್ರಾಯಗಳಿಗೆ ಅವರೆ ಜವಾಬ್ದಾರರಾಗಿದ್ದಾರೆ”ಎಂದು ಪಠಾಣ್ ಹೇಳಿದರು.

“ಆದರೆ ದೇಶೀಯ ಕ್ರಿಕೆಟ್‌ನಲ್ಲಿ ನಾನು ಕೆಲವು ಸಮಸ್ಯೆಗಳನ್ನು ನೋಡಿದ್ದೇನೆ. ದಕ್ಷಿಣ ಭಾರತದ ನಮ್ಮ ಸಹೋದರರು ಉತ್ತರ ಭಾರತಕ್ಕೆ ಪ್ರಯಾಣಿಸುವಾಗ ಅವರು ಸಮಸ್ಯೆಗಳು ಎದುರಿಸಬೇಕಾಗಿರುತ್ತಿತ್ತು. ಇಲ್ಲಿ ನಿಜವಾದ ಸಮಸ್ಯೆ ಶಿಕ್ಷಣ ಹಾಗೂ ಸಮಾಜವು ಇನ್ನೂ ಕಲಿಯಬೇಕಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

“ಭಾರತದಲ್ಲಿ ಜನಾಂಗೀಯತೆಯ ಬಗ್ಗೆ ಇನ್ನೂ ಹೆಚ್ಚು ಚರ್ಚೆಗಳಾಗುತ್ತಿಲ್ಲ. ಕೆಲವೊಮ್ಮೆ ನಾವು ಈಶಾನ್ಯದ ನಮ್ಮ ಸಹೋದರ ಸಹೋದರಿಯರಿಗೆ ಹೆಸರುಗಳನ್ನು ಸಹ ಕರೆಯುತ್ತೇವೆ. ಈ ಸಮಸ್ಯೆ ಆಳವಾಗಿ ಬೇರೂರಿದೆ, ನಾವು ನಮ್ಮ ಮಕ್ಕಳಿಗೆ ಇದರ ಬಗ್ಗೆ ಶಿಕ್ಷಣ ನೀಡಲು ಪ್ರಾರಂಭಿಸಿದಾಗ ಮಾತ್ರ ಇದು ಹೋಗುತ್ತದೆ. ಅದು ಸರಿಯಾದ ಶಾಲಾ ಶಿಕ್ಷಣ ಹಾಗೂ ಪೋಷಕರೊಂದಿಗೆ ಪ್ರಾರಂಭವಾಗಬೇಕು. ” ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.


ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ 50 ಲಕ್ಷ ದೇಣಿಗೆ ಕೊಟ್ಟ ಸಚಿನ್ ತೆಂಡೂಲ್ಕರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...