Homeಸಿನಿಮಾಕ್ರೀಡೆಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

- Advertisement -
- Advertisement -

ಭಾರತ ಕ್ರಿಕೇಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್, ಒಬ್ಬರ ಧರ್ಮದ ಕಾರಣಕ್ಕೆ ತಾರತಮ್ಯ ಮಾಡುವುದು ಕೂಡಾ ಜನಾಂಗೀಯ ನಿಂದನೆಯೇ ಆಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಜನಾಂಗೀಯತೆಯ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಮಾತನಾಡುತ್ತಾ, “ಇದು ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ, ಒಬ್ಬ ವ್ಯಕ್ತಿಯು ಅವನ / ಅವಳ ಧರ್ಮದ ಆಧಾರದ ಮೇಲೆ ಕೂಡಾ ಜನಾಂಗೀಯ ನಿಂದನೆಗೆ ಒಳಗಾಗಬಹುದು” ಎಂದು ಇರ್ಫಾನ್ ಪಠಾನ್ ಹೇಳಿದ್ದಾರೆ.

“ವರ್ಣಭೇದ ನೀತಿ ಕೇವಲ ಚರ್ಮದ ಬಣ್ಣಕ್ಕೆ ಸೀಮಿತವಾಗಿಲ್ಲ. ಬೇರೆ ನಂಬಿಕೆ ಹೊಂದಿರುವ ಕಾರಣಕ್ಕಾಗಿ ನಿಮಗೆ ಮನೆಯನ್ನು ಖರೀದಿಸಿಲು ಸಮಾಜ ಅವಕಾಶ ನೀಡುವುದಿಲ್ಲ ಎಂದಾದರೆ ಅದು ಕೂಡಾ ಜನಾಂಗೀಯತೆಯೆ ಆಗಿದೆ” ಎಂದು ಪಠಾಣ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

“ಇದು ಒಂದು ಅವಲೋಕನವಾಗಿದ್ದು ಇದನ್ನು ಯಾರಾದರು ನಿರಾಕರಿಸಬಹುದೆಂದು ನಾನು ಭಾವಿಸುವುದಿಲ್ಲ” ಎಂದು ಪಠಾಣ್ ತನ್ನ ಟ್ವೀಟ್ ಅನ್ನು ವಿವರಿಸುತ್ತಾ ಪಿಟಿಐಗೆ ತಿಳಿಸಿದ್ದಾರೆ.

ಅಮೆರಿಕಾದ ಜಾರ್ಜ್‌ ಫ್ಲಾಯ್ಡ್ ಹತ್ಯೆಯ ಹಿನ್ನೆಲೆಯಲ್ಲಿ, ಹಲವಾರು ಅಂತರರಾಷ್ಟ್ರೀಯ ಕ್ರಿಕೆಟಿಗರು ಆಟದಲ್ಲಿ ತಮಗಾದ ವರ್ಣಭೇದ ನೀತಿಯ ಕುರಿತು ಮಾತನಾಡಿದ್ದಾರೆ.

2014 ರ ಐಪಿಎಲ್ ಸಂದರ್ಭದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಜನಾಂಗೀಯವಾಗಿ ನಿಂದಿಸಿದ್ದಾರೆ ಎಂದು ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಡ್ಯಾರೆನ್ ಸ್ಯಾಮಿ ಆರೋಪಿಸಿದ್ದಾರೆ.

2014 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಪಠಾಣ್ ಅವರು ಇಂತಹ ಘಟನೆಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

“ಅಂತಹದ್ದೇನಾದರೂ ಸಂಭವಿಸಿದ್ದರೆ ಅದು ಗಮನಕ್ಕೆ ಬರುತ್ತಿತ್ತು ಅಥವಾ ಈ ವಿಷಯದ ಬಗ್ಗೆ ತಂಡದ ಚರ್ಚೆ ನಡೆಯುತ್ತಿತ್ತು. ಅಂತಹ ಯಾವುದೇ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ. ಸ್ಯಾಮಿ ಅವರ ಅಭಿಪ್ರಾಯಗಳಿಗೆ ಅವರೆ ಜವಾಬ್ದಾರರಾಗಿದ್ದಾರೆ”ಎಂದು ಪಠಾಣ್ ಹೇಳಿದರು.

“ಆದರೆ ದೇಶೀಯ ಕ್ರಿಕೆಟ್‌ನಲ್ಲಿ ನಾನು ಕೆಲವು ಸಮಸ್ಯೆಗಳನ್ನು ನೋಡಿದ್ದೇನೆ. ದಕ್ಷಿಣ ಭಾರತದ ನಮ್ಮ ಸಹೋದರರು ಉತ್ತರ ಭಾರತಕ್ಕೆ ಪ್ರಯಾಣಿಸುವಾಗ ಅವರು ಸಮಸ್ಯೆಗಳು ಎದುರಿಸಬೇಕಾಗಿರುತ್ತಿತ್ತು. ಇಲ್ಲಿ ನಿಜವಾದ ಸಮಸ್ಯೆ ಶಿಕ್ಷಣ ಹಾಗೂ ಸಮಾಜವು ಇನ್ನೂ ಕಲಿಯಬೇಕಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

“ಭಾರತದಲ್ಲಿ ಜನಾಂಗೀಯತೆಯ ಬಗ್ಗೆ ಇನ್ನೂ ಹೆಚ್ಚು ಚರ್ಚೆಗಳಾಗುತ್ತಿಲ್ಲ. ಕೆಲವೊಮ್ಮೆ ನಾವು ಈಶಾನ್ಯದ ನಮ್ಮ ಸಹೋದರ ಸಹೋದರಿಯರಿಗೆ ಹೆಸರುಗಳನ್ನು ಸಹ ಕರೆಯುತ್ತೇವೆ. ಈ ಸಮಸ್ಯೆ ಆಳವಾಗಿ ಬೇರೂರಿದೆ, ನಾವು ನಮ್ಮ ಮಕ್ಕಳಿಗೆ ಇದರ ಬಗ್ಗೆ ಶಿಕ್ಷಣ ನೀಡಲು ಪ್ರಾರಂಭಿಸಿದಾಗ ಮಾತ್ರ ಇದು ಹೋಗುತ್ತದೆ. ಅದು ಸರಿಯಾದ ಶಾಲಾ ಶಿಕ್ಷಣ ಹಾಗೂ ಪೋಷಕರೊಂದಿಗೆ ಪ್ರಾರಂಭವಾಗಬೇಕು. ” ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.


ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ 50 ಲಕ್ಷ ದೇಣಿಗೆ ಕೊಟ್ಟ ಸಚಿನ್ ತೆಂಡೂಲ್ಕರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....