Homeಮುಖಪುಟ‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ - BJP ಗೆ ತಿರುಗೇಟು ನೀಡಿದ...

‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ – BJP ಗೆ ತಿರುಗೇಟು ನೀಡಿದ ಉದ್ದವ್‌ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಮೂರನೆ ಅಲೆಯ ಆತಂಕದ ನಡುವೆ, ಬಿಜೆಪಿ ಮತ್ತು ರಾಜ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ, ‘‘ದೇವಸ್ಥಾನಗಳನ್ನು ಪುನಃ ತೆರೆಯುವಂತೆ ಮತ್ತು ‘ದಹಿ ಹಂಡಿ’ ಉತ್ಸವ”ಗಳಿಗೆ ಅನುಮತಿ ನೀಡುವಂತೆ ಅಭಿಯಾನ ನಡೆಸುತ್ತಿದೆ. ಇದರ ವಿರುದ್ದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ‘‘ನಾವು ಹಿಂದೂ ವಿರೋಧಿಗಳಲ್ಲ, ಕೊರೊನಾ ವಿರೋಧಿಗಳು” ಎಂದು ಹೇಳಿದ್ದಾರೆ.

“ಇದು ಸ್ವಾತಂತ್ರ್ಯ ಹೋರಾಟವಲ್ಲ … ಕೆಲವರು ದಹಿ ಹಂಡಿ ಉತ್ಸವಗಳನ್ನು ಸಂಘಟಿಸಿ ಹೀರೋಗಳಾಗಲು ಪ್ರಯತ್ನಿಸುತ್ತಿದ್ದಾರೆ. ನೀವು ಹೋರಾಡಲು ಬಯಸಿದರೆ, ಕೊರೊನಾ ವಿರುದ್ಧ ಹೋರಾಡಿ” ಎಂದು ಉದ್ದವ್‌ ಠಾಕ್ರೆ ಮಂಗಳವಾರ ಥಾಣೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಆನ್‌ಲೈನ್‌ ಉದ್ಘಾಟನಾ ಸಮಾರಂಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

“ಅವರು ನಮ್ಮನ್ನು ‘ಹಿಂದೂ ವಿರೋಧಿ ಸರ್ಕಾರ’ ಎಂದು ಕರೆಯುತ್ತಾರೆ…ಇದು ಮುಂದುವರೆಯಬಾರದು. ನಾನು ಅವರಿಗೆ ಒಕ್ಕೂಟ ಸರ್ಕಾರದ ಪತ್ರವನ್ನು ತೋರಿಸಲು ಬಯಸುತ್ತೇನೆ. ಪತ್ರದಲ್ಲಿ ಅವರು ದಹಿ ಹಂಡಿ ಮತ್ತು ಗಣೇಶ ಉತ್ಸವದ ಸಮಯದಲ್ಲಿ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಹೇಳಿದ್ದಾರೆ… ಹಾಗಾದರೆ ಅವರು ಯಾರು” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರ ಕೊರೊನಾ ವಿರೋಧಿಯೆ ಹೊರತು, ಯಾವುದೇ ಧರ್ಮದ ವಿರೋಧಿಯಲ್ಲ. ಅದಕ್ಕಾಗಿಯೇ, ಹೋರಾಟ ಮಾಡಲು ಬಯಸುವವರು ವೈರಸ್ ವಿರುದ್ಧ ಹೋರಾಡಿ ನಾನು ಹೇಳಲು ಬಯಸುತ್ತೇವೆ… ಆಮ್ಲಜನಕ ಉತ್ಪಾದನಾ ಘಟಕ ಹೆಚ್ಚಿಸುವ ಬಗ್ಗೆ ಖಚಿತಪಡಿಸುತ್ತೇನೆ. ಆದರೆ ಬಿಜೆಪಿಗೆ ಇವುಗಳ ಬಗ್ಗೆ ಇಚ್ಛೆಯಾಗಲಿ ಅಥವಾ ಉದ್ದೇಶವಾಗಲಿ ಇಲ್ಲ, ಅವರು ಬೀದಿಗಿಳಿದು ಗೊಂದಲ ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

‘ಕನ್ನಡಿಗರು ನಿಮ್ಮ ಗುಲಾಮರಲ್ಲ, ಸ್ವಾಭಿಮಾನಿಗಳು’- ಹಿಂದಿ ಬ್ಯಾನರ್‌ಗೆ ಮಸಿ ಬಳಿದ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ 

ಒಂದು ದಿನದ ಹಿಂದಯಷ್ಟೇ, ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ತಮ್ಮ ಪಕ್ಷದ ಕಾರ್ಯಕರ್ತರಿಗೆ ಕೋವಿಡ್‌‌ ನಿರ್ಬಂಧಗಳನ್ನು ಧಿಕ್ಕರಿಸಿ ಉತ್ಸವಗಳನ್ನು ಆಚರಿಸಲು ನಿರ್ದೇಶನ ನೀಡಿದ್ದಾರೆ.

ಸೋಮವಾರದಂದು, ಬೀದಿಗಿಳಿದು ಹೋರಾಟ ಮಾಡಿದ್ದ ಬಿಜೆಪಿ ದೇವಸ್ಥಾನಗಳನ್ನು ಪುನಃ ತೆರೆಯಬೇಕು ಮತ್ತು ದಹಿ ಹಂಡಿ ಉತ್ಸವಗಳನ್ನು ಆಚರಿಸಲು ಅನುಮತಿಸಬೇಕು ಎಂದು ಒತ್ತಾಯಿಸಿದೆ. ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ದಹಿ ಹಂಡಿ ಆಯೋಜಿಸುವಲ್ಲಿ ನಿರತರಾಗಿದ್ದ ನವನಿರ್ಮಾಣ ಸೇನೆಯ ನಾಯಕ ಬಾಲ ನಂದಗಾಂವ್ಕರ್ ಅವರನ್ನು ಸೆಂಟ್ರಲ್ ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ನಿರ್ದಿಷ್ಟವಾಗಿ ಈ ಸಮಯದಲ್ಲಿ, ದಹಿ ಹಂಡಿ ಮತ್ತು ಗಣಪತಿ ಹಬ್ಬಗಳನ್ನು ಒಳಗೊಂಡಂತೆ ನಿರ್ಬಂಧಗಳನ್ನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದರು.

ಸಾಂಕ್ರಮಿಕವನ್ನು ಅನ್ನು ನಿಯಂತ್ರಣಕ್ಕೆ ತರುವವರೆಗೂ ಮಹಾರಾಷ್ಟ್ರ ಭಾರತದ ಕೊರೊನಾದ ಕೇಂದ್ರಬಿಂದುವಾಗಿತ್ತು. ರಾಜ್ಯದಲ್ಲಿ ಸುಮಾರು 55,000 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಕೊರೊನಾ ಮೂರನೆಯ ಅಲೆ ಅಪ್ಪಳಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡುವುದರೊಂದಿಗೆ, ರಾಜ್ಯದಲ್ಲಿ ಮತ್ತೊಮ್ಮೆ ಆತಂಕ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಪತ್ರ ಬರೆದಿತ್ತು. ಪ್ರಸ್ತುತ ದೇಶದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣವಿರುವ ಕೇರಳದಲ್ಲಿ ಹಬ್ಬಗಳ ಆಚರಣೆಯ ನಂತರ ಏರಿಕೆ ಕಂಡಿತ್ತು.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿನ ‘ಅದಾನಿ ಏರ್‌ಪೋರ್ಟ್’ ಬೋರ್ಡ್‌ಗಳನ್ನು ಕಿತ್ತೆಸೆದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...